ಬ್ರೇಕಿಂಗ್ ನ್ಯೂಸ್
08-10-20 07:31 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 8: ಸುಶಾಂತ್ ಸಿಂಗ್ ಸಾವಿನ ಬಗ್ಗೆ ಆತ್ಮಹತ್ಯೆಯಲ್ಲ, ಕೊಲೆಯೆಂದು ಸುದ್ದಿ ಮಾಡಿ ಮುಖಭಂಗಕ್ಕೀಡಾಗಿರುವ ರಿಪಬ್ಲಿಕ್ ಟಿವಿ ವಿರುದ್ಧ ಮುಂಬೈ ಪೊಲೀಸರೇ ತಿರುಗಿ ಬಿದ್ದಿದ್ದಾರೆ. ರಿಪಬ್ಲಿಕ್ ಸೇರಿದಂತೆ ಮೂರು ಟಿವಿ ವಾಹಿನಿಗಳು ಟಿಆರ್ ಪಿ ಹೆಚ್ಚಿಸಿಕೊಂಡು ಆದಾಯ ಪಡೆದುಕೊಳ್ಳುವುದಕ್ಕಾಗಿ ತಂತ್ರ ಹೂಡಿದ್ದರು. ಮೋಸದ ಜಾಲದ ಮೂಲಕ ಮನೆ, ಮನೆಗೆ ತಮ್ಮ ಎಕ್ಸಿಕ್ಯೂಟಿವ್ ಗಳನ್ನು ಕಳಿಸಿ ಬಡವರಿಗೆ ಹಣಕೊಟ್ಟು ಟಿಆರ್ ಪಿ ಹೆಚ್ಚಿಸಿಕೊಳ್ಳುತ್ತಿದ್ದರು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಮುಂಬೈ ಪೊಲೀಸ್ ಕಮಿಷನರ್ ಪರಮ್ ವೀರ್ ಸಿಂಗ್, ಅರ್ನಾಬ್ ಗೋಸ್ವಾಮಿ ಒಡೆತನದ ರಿಪಬ್ಲಿಕ್ ಟಿವಿ, ಮರಾಠಿ ಭಾಷೆಯ ಫ್ಯಾಕ್ಟ್ ಮರಾಠಿ ಮತ್ತು ಬಾಕ್ಸ್ ಸಿನಿಮಾ ವಾಹಿನಿಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಮರಾಠಿ ಟಿವಿ ವಾಹಿನಿಗಳ ಇಬ್ಬರು ಮಾಲೀಕರನ್ನು ಬಂಧಿಸಲಾಗಿದೆ. ರಿಪಬ್ಲಿಕ್ ಟಿವಿ ಡೈರೆಕ್ಟರ್ ಒಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸುಳ್ಳು ಸುದ್ದಿಗಳನ್ನು ಪ್ರಚಾರ ನೀಡುವುದಕ್ಕಾಗಿ ಮತ್ತು ತಮ್ಮದೇ ಚಾನೆಲ್ ಹಾಕುವಂತೆ ಬಡ ಮನೆಗಳ ಮಂದಿಗೆ ಹಣ ಕೊಟ್ಟು ಪ್ರೇರಿಸುತ್ತಿದ್ದರು. ಈ ಮೂಲಕ ಟಿಆರ್ ಪಿ ಹೆಚ್ಚಿರುವುದಾಗಿ ತೋರಿಸಿಕೊಂಡು ಹೆಚ್ಚು ಆದಾಯ ಬರುವ ಜಾಹೀರಾತು ಪಡೆಯುತ್ತಿದ್ದರು. ಈ ಮೂಲಕ ಹೆಚ್ಚು ಪಡೆದಿದ್ದು ತನಿಖೆಯಲ್ಲಿ ದೃಢ ಪಟ್ಟರೆ ವಾಹಿನಿಗಳ ಖಾತೆಯನ್ನು ಸೀಝ್ ಮಾಡುವುದಾಗಿ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ, ಮುಂಬೈ ಪೊಲೀಸ್ ಕಮಿಷನರ್ ಸುಳ್ಳು ಮಾಹಿತಿಗಳನ್ನು ಹೇಳುತ್ತಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.
Fake TRP racket busted! Names republic TV as one of the 3 channels under scanner. People paid off to manipulate viewership numbers. 2 Accused arrested
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm