ಬ್ರೇಕಿಂಗ್ ನ್ಯೂಸ್
25-09-22 07:30 pm HK News Desk ದೇಶ - ವಿದೇಶ
ಋಷಿಕೇಶ, ಸೆ.25: ಬಿಜೆಪಿ ಮುಖಂಡನ ಪುತ್ರ ಪುಲ್ಕಿತ್ ಆರ್ಯ ನಡೆಸುತ್ತಿದ್ದ ರೆಸಾರ್ಟಿನಲ್ಲಿ ಯುವತಿಯ ಕೊಲೆ ಪ್ರಕರಣದ ಹಿನ್ನೆಲೆ ರಾಜ್ಯದಾದ್ಯಂತ ಪ್ರತಿಭಟನೆಯ ಕಿಚ್ಚು ಎದ್ದಿರುವಾಗಲೇ ಅದೇ ರೆಸಾರ್ಟಿನಲ್ಲಿ ಎಂಟು ತಿಂಗಳ ಹಿಂದೆ ಮತ್ತೊಬ್ಬ ಯುವತಿಯೂ ಕಾಣೆಯಾಗಿದ್ದಳು. ಆ ಪ್ರಕರಣವನ್ನು ಪುಲ್ಕಿತ್ ಆರ್ಯ ಪ್ರಭಾವ ಬಳಸಿ ಮುಚ್ಚಿ ಹಾಕಿದ್ದ ಎನ್ನುವ ಆರೋಪ ಕೇಳಿಬಂದಿದೆ.
ಈಗ ಕೊಲೆಯಾಗಿರುವ ಅಂಕಿತ್ ಭಂಡಾರಿ ವಾಸವಿದ್ದ ಪೌರಿ ಗ್ರಾಮದ್ದೇ ನಿವಾಸಿಯಾಗಿದ್ದ ಯುವತಿಯೊಬ್ಬಳು ಎಂಟು ತಿಂಗಳ ಹಿಂದೆ ನಾಪತ್ತೆಯಾಗಿದ್ದಳು. ಆದರೆ ಮನೆಯವರು ಕೇಳಿದಾಗ ಪುಲ್ಕಿತ್ ಆರ್ಯ, ಆಕೆ ತನ್ನ ಹಣವನ್ನು ಕದ್ದುಕೊಂಡು ಪರಾರಿಯಾಗಿದ್ದಾಳೆ, ಎಲ್ಲಿ ಹೋಗಿದ್ದಾಳೆಂದು ಗೊತ್ತಿಲ್ಲವೆಂದು ಹೇಳಿದ್ದ. ಆದರೆ ಈಗ ಯುವತಿ ಸಾವಿನ ಪ್ರಕರಣದಲ್ಲಿ ಇಡೀ ರಾಜ್ಯದಲ್ಲಿ ಪ್ರತಿಭಟನೆ ಶುರುವಾಗಿದ್ದು ಆಡಳಿತಾರೂಢ ಸರಕಾರದ ವಿರುದ್ಧವೇ ಜನರು ತಿರುಗಿ ಬಿದ್ದಿದ್ದಾರೆ.
![]()

ಇದೇ ಸಂದರ್ಭದಲ್ಲಿ ಹಳೆ ಪ್ರಕರಣವೂ ಎದ್ದು ಬಂದಿದ್ದು, ರಾಜ್ಯ ಸರಕಾರ ಆ ಪ್ರಕರಣದ ಬಗ್ಗೆಯೂ ತನಿಖೆ ನಡೆಸಲು ಆದೇಶ ಮಾಡಿದೆ. ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯ ಮತ್ತು ರೆಸಾರ್ಟ್ ಮ್ಯಾನೇಜರ್ ಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮೇಲ್ನೋಟಕ್ಕೆ, ಯುವತಿಯನ್ನು ಗ್ರಾಹಕರಿಗೆ ವಿಶೇಷ ಸೇವೆ ನೀಡಲು ಒಪ್ಪದೇ ಇದ್ದುದಕ್ಕಾಗಿ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ.
![]()

ರಿಸೆಪ್ಶನಿಸ್ಟ್ ಆಗಿದ್ದ ಯುವತಿ ನಾಪತ್ತೆಯಾದ ಏಳು ದಿನಗಳ ಬಳಿಕ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಇದೇ ಸಂದರ್ಭದಲ್ಲಿ ಹಳೆಯ ಪ್ರಕರಣವನ್ನು ಕೆದಕಿರುವ ಗ್ರಾಮಸ್ಥರು, ಪುಲ್ಕಿತ್ ಆರ್ಯ ಬಗ್ಗೆಯೇ ಆರೋಪ ಮಾಡಿದ್ದಾರೆ. ಪುಲ್ಕಿತ್ ಇದೇ ರೀತಿಯ ಪ್ರವೃತ್ತಿ ಹೊಂದಿದ್ದ ವ್ಯಕ್ತಿ. ಈ ಹಿಂದೆಯೂ ಹಲವರಿಗೆ ಮೋಸ ಮಾಡಿದ್ದಾನೆ. ತನ್ನೊಂದಿಗೆ ಸಹಕರಿಸದವರನ್ನು ಸಂಬಳವನ್ನೂ ಕೊಡದೆ ಓಡಿಸಿದ್ದಾನೆ. ಕೆಲವರು ರೆಸಾರ್ಟಿನಲ್ಲಿ ಕೆಲಸಕ್ಕಿದ್ದವರು ದಿಢೀರ್ ನಾಪತ್ತೆಯಾಗಿದ್ದಾರೆ ಎಂದು ಬಿಟ್ಟೋ ಭಂಡಾರಿ ಎಂಬ ಸಾಮಾಜಿಕ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದಾರೆ.


ಈ ನಡುವೆ, ಅಂಕಿತಾ ಭಂಡಾರಿಯ ಪೋಸ್ಟ್ ಮಾರ್ಟಂ ಕುರಿತ ಪ್ರಾಥಮಿಕ ವರದಿ ಬಂದಿದ್ದು, ಸಾಯುವುದಕ್ಕೂ ಮುನ್ನ ಆಕೆಯ ಮೇಲೆ ಹಲ್ಲೆ ಮಾಡಲಾಗಿತ್ತು. ಆನಂತರ ಕಾಲುವೆ ನೀರಿನಲ್ಲಿ ಮುಳುಗಿಸಿ ಕೊಲ್ಲಲಾಗಿತ್ತು ಎನ್ನುವ ವರದಿ ಇದೆ. ಶನಿವಾರ ಅಂಕಿತಾ ಕುಟುಂಬಸ್ಥರು, ಪೋಸ್ಟ್ ಮಾರ್ಟಂ ವರದಿ ಬಾರದೆ ಮೃತದೇಹದ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಭಾನುವಾರ ಪೋಸ್ಟ್ ಮಾರ್ಟಂ ಕುರಿತ ಪ್ರಾಥಮಿಕ ವರದಿ ಬಂದಿದ್ದು, ಅದರಂತೆ ಭಾನುವಾರ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಮನವಿ ಪರಿಗಣಿಸಿ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಿದ್ದಾರೆ. ಇದೇ ವೇಳೆ, ರಾಜ್ಯದ ಹಲವೆಡೆ ಬಿಜೆಪಿ ಸರಕಾರದ ವಿರುದ್ಧ ಪ್ರತಿಭಟನೆಯೂ ನಡೆದಿದೆ.
Massive protest erupts outside mortuary in Srinagar, Pauri Garwhal dist, where Ankita Bhandari's father arrived to take her body for last rites She was allegedly murdered in Rishikesh by now expelled BJP leader Vinod Arya's son Pulkit Arya who was arrested yesterday. Watch the video and stay connected for more updates.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am