ಬ್ರೇಕಿಂಗ್ ನ್ಯೂಸ್
25-09-22 07:30 pm HK News Desk ದೇಶ - ವಿದೇಶ
ಋಷಿಕೇಶ, ಸೆ.25: ಬಿಜೆಪಿ ಮುಖಂಡನ ಪುತ್ರ ಪುಲ್ಕಿತ್ ಆರ್ಯ ನಡೆಸುತ್ತಿದ್ದ ರೆಸಾರ್ಟಿನಲ್ಲಿ ಯುವತಿಯ ಕೊಲೆ ಪ್ರಕರಣದ ಹಿನ್ನೆಲೆ ರಾಜ್ಯದಾದ್ಯಂತ ಪ್ರತಿಭಟನೆಯ ಕಿಚ್ಚು ಎದ್ದಿರುವಾಗಲೇ ಅದೇ ರೆಸಾರ್ಟಿನಲ್ಲಿ ಎಂಟು ತಿಂಗಳ ಹಿಂದೆ ಮತ್ತೊಬ್ಬ ಯುವತಿಯೂ ಕಾಣೆಯಾಗಿದ್ದಳು. ಆ ಪ್ರಕರಣವನ್ನು ಪುಲ್ಕಿತ್ ಆರ್ಯ ಪ್ರಭಾವ ಬಳಸಿ ಮುಚ್ಚಿ ಹಾಕಿದ್ದ ಎನ್ನುವ ಆರೋಪ ಕೇಳಿಬಂದಿದೆ.
ಈಗ ಕೊಲೆಯಾಗಿರುವ ಅಂಕಿತ್ ಭಂಡಾರಿ ವಾಸವಿದ್ದ ಪೌರಿ ಗ್ರಾಮದ್ದೇ ನಿವಾಸಿಯಾಗಿದ್ದ ಯುವತಿಯೊಬ್ಬಳು ಎಂಟು ತಿಂಗಳ ಹಿಂದೆ ನಾಪತ್ತೆಯಾಗಿದ್ದಳು. ಆದರೆ ಮನೆಯವರು ಕೇಳಿದಾಗ ಪುಲ್ಕಿತ್ ಆರ್ಯ, ಆಕೆ ತನ್ನ ಹಣವನ್ನು ಕದ್ದುಕೊಂಡು ಪರಾರಿಯಾಗಿದ್ದಾಳೆ, ಎಲ್ಲಿ ಹೋಗಿದ್ದಾಳೆಂದು ಗೊತ್ತಿಲ್ಲವೆಂದು ಹೇಳಿದ್ದ. ಆದರೆ ಈಗ ಯುವತಿ ಸಾವಿನ ಪ್ರಕರಣದಲ್ಲಿ ಇಡೀ ರಾಜ್ಯದಲ್ಲಿ ಪ್ರತಿಭಟನೆ ಶುರುವಾಗಿದ್ದು ಆಡಳಿತಾರೂಢ ಸರಕಾರದ ವಿರುದ್ಧವೇ ಜನರು ತಿರುಗಿ ಬಿದ್ದಿದ್ದಾರೆ.
ಇದೇ ಸಂದರ್ಭದಲ್ಲಿ ಹಳೆ ಪ್ರಕರಣವೂ ಎದ್ದು ಬಂದಿದ್ದು, ರಾಜ್ಯ ಸರಕಾರ ಆ ಪ್ರಕರಣದ ಬಗ್ಗೆಯೂ ತನಿಖೆ ನಡೆಸಲು ಆದೇಶ ಮಾಡಿದೆ. ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯ ಮತ್ತು ರೆಸಾರ್ಟ್ ಮ್ಯಾನೇಜರ್ ಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮೇಲ್ನೋಟಕ್ಕೆ, ಯುವತಿಯನ್ನು ಗ್ರಾಹಕರಿಗೆ ವಿಶೇಷ ಸೇವೆ ನೀಡಲು ಒಪ್ಪದೇ ಇದ್ದುದಕ್ಕಾಗಿ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ.
ರಿಸೆಪ್ಶನಿಸ್ಟ್ ಆಗಿದ್ದ ಯುವತಿ ನಾಪತ್ತೆಯಾದ ಏಳು ದಿನಗಳ ಬಳಿಕ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಇದೇ ಸಂದರ್ಭದಲ್ಲಿ ಹಳೆಯ ಪ್ರಕರಣವನ್ನು ಕೆದಕಿರುವ ಗ್ರಾಮಸ್ಥರು, ಪುಲ್ಕಿತ್ ಆರ್ಯ ಬಗ್ಗೆಯೇ ಆರೋಪ ಮಾಡಿದ್ದಾರೆ. ಪುಲ್ಕಿತ್ ಇದೇ ರೀತಿಯ ಪ್ರವೃತ್ತಿ ಹೊಂದಿದ್ದ ವ್ಯಕ್ತಿ. ಈ ಹಿಂದೆಯೂ ಹಲವರಿಗೆ ಮೋಸ ಮಾಡಿದ್ದಾನೆ. ತನ್ನೊಂದಿಗೆ ಸಹಕರಿಸದವರನ್ನು ಸಂಬಳವನ್ನೂ ಕೊಡದೆ ಓಡಿಸಿದ್ದಾನೆ. ಕೆಲವರು ರೆಸಾರ್ಟಿನಲ್ಲಿ ಕೆಲಸಕ್ಕಿದ್ದವರು ದಿಢೀರ್ ನಾಪತ್ತೆಯಾಗಿದ್ದಾರೆ ಎಂದು ಬಿಟ್ಟೋ ಭಂಡಾರಿ ಎಂಬ ಸಾಮಾಜಿಕ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದಾರೆ.
ಈ ನಡುವೆ, ಅಂಕಿತಾ ಭಂಡಾರಿಯ ಪೋಸ್ಟ್ ಮಾರ್ಟಂ ಕುರಿತ ಪ್ರಾಥಮಿಕ ವರದಿ ಬಂದಿದ್ದು, ಸಾಯುವುದಕ್ಕೂ ಮುನ್ನ ಆಕೆಯ ಮೇಲೆ ಹಲ್ಲೆ ಮಾಡಲಾಗಿತ್ತು. ಆನಂತರ ಕಾಲುವೆ ನೀರಿನಲ್ಲಿ ಮುಳುಗಿಸಿ ಕೊಲ್ಲಲಾಗಿತ್ತು ಎನ್ನುವ ವರದಿ ಇದೆ. ಶನಿವಾರ ಅಂಕಿತಾ ಕುಟುಂಬಸ್ಥರು, ಪೋಸ್ಟ್ ಮಾರ್ಟಂ ವರದಿ ಬಾರದೆ ಮೃತದೇಹದ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಭಾನುವಾರ ಪೋಸ್ಟ್ ಮಾರ್ಟಂ ಕುರಿತ ಪ್ರಾಥಮಿಕ ವರದಿ ಬಂದಿದ್ದು, ಅದರಂತೆ ಭಾನುವಾರ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಮನವಿ ಪರಿಗಣಿಸಿ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಿದ್ದಾರೆ. ಇದೇ ವೇಳೆ, ರಾಜ್ಯದ ಹಲವೆಡೆ ಬಿಜೆಪಿ ಸರಕಾರದ ವಿರುದ್ಧ ಪ್ರತಿಭಟನೆಯೂ ನಡೆದಿದೆ.
Massive protest erupts outside mortuary in Srinagar, Pauri Garwhal dist, where Ankita Bhandari's father arrived to take her body for last rites She was allegedly murdered in Rishikesh by now expelled BJP leader Vinod Arya's son Pulkit Arya who was arrested yesterday. Watch the video and stay connected for more updates.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm