ಬ್ರೇಕಿಂಗ್ ನ್ಯೂಸ್
01-10-22 05:10 pm HK News Desk ದೇಶ - ವಿದೇಶ
ನವದೆಹಲಿ, ಅ.1 : ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಯ ಅಖಾಡಕ್ಕಿಳಿದಿದ್ದ ಜಾರ್ಖಂಡ್ ಮೂಲದ ಕಾಂಗ್ರೆಸ್ ಮುಖಂಡ ಕೆ.ಎನ್. ತ್ರಿಪಾಠಿ ಅವರ ನಾಮಪತ್ರ ತಿರಸ್ಕೃತವಾಗಿದ್ದು ಕಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಮಾತ್ರ ಉಳಿದುಕೊಂಡಿದ್ದಾರೆ.
ನಿಗದಿತ ಮಾನದಂಡ ಪೂರೈಸಿಲ್ಲದ ಕಾರಣ ಕಾಂಗ್ರೆಸ್ ಕೇಂದ್ರ ಚುನಾವಣಾ ಮಂಡಳಿಯ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರು ಕೆ.ಎನ್.ತ್ರಿಪಾಠಿ ಅವರ ನಾಮಪತ್ರ ತಿರಸ್ಕೃತ ಮಾಡಿದ್ದಾರೆ. ಇದರಿಂದ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ಹಾಗೂ ಶಶಿ ತರೂರ್ ನಡುವೆ ನೇರ ಪೈಪೋಟಿ ನಡೆಯಲಿದೆ. ಇಬ್ಬರು ನಾಯಕರಲ್ಲಿ ಯಾರು ಗದ್ದುಗೆ ಗಿಟ್ಟಿಸಿದರೂ, ದಕ್ಷಿಣ ಭಾರತದ ನಾಯಕರಿಗೆ ಎಐಸಿಸಿ ಅತ್ಯುನ್ನತ ಹುದ್ದೆ ಸಿಕ್ಕಂತಾಗುತ್ತದೆ.
ಈ ಹಿಂದೆ ಕಾಂಗ್ರೆಸ್ ಕುಟುಂಬ ನಾಯಕತ್ವ ಪ್ರಶ್ನಿಸಿ ಸುದ್ದಿಗೆ ಗ್ರಾಸವಾಗಿದ್ದ ಜಿ 23 ನಾಯಕರು ಕೂಡ ಖರ್ಗೆ ಅವರಿಗೆ ಬೆಂಬಲ ಸೂಚಿಸಿದ್ದು ಹೊಸ ಬೆಳವಣಿಗೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಬಹುಮತದಿಂದ ಗೆದ್ದು ಅಧ್ಯಕ್ಷರಾಗುವ ಸಾಧ್ಯತೆ ಅಧಿಕ. ತರೂರ್ ಚುನಾವಣೆ ಕಣದಿಂದ ಹಿಂದೆ ಸರಿಯದೇ ಇದ್ದರೆ ಇದೇ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, 19ರಂದು ಫಲಿತಾಂಶ ಹೊರಬೀಳಲಿದೆ. ಕಾಂಗ್ರೆಸ್ ಪಕ್ಷದ ಎಲ್ಲ ರಾಜ್ಯ ಘಟಕಗಳ ಸದಸ್ಯರಿಗೆ ಮತದಾನದ ಅವಕಾಶಗಳಿದ್ದು ನೇರವಾಗಿ ಅಧ್ಯಕ್ಷರ ಆಯ್ಕೆ ಮಾಡಲಿದ್ದಾರೆ.
Former Jharkhand minister K N Tripathi’s nomination for the Congress presidential election was rejected on Saturday, leaving party leaders Mallikarjun Kharge and Shashi Tharoor in the fray.The three had filed nominations on Friday, the last day of the process.The last date for withdrawal of nominations is October 8 and the final list of candidates will be out at 5 pm on the same day. Addressing a press conference at the Congress headquarters here, the party’s central election authority chairman Madhusudan Mistry said the panel met for scrutiny of forms on Saturday.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm