ಬ್ರೇಕಿಂಗ್ ನ್ಯೂಸ್
02-10-22 05:42 pm HK News Desk ದೇಶ - ವಿದೇಶ
ಕಾಸರಗೋಡು, ಅ.2: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾಸರಗೋಡು ಜಿಲ್ಲಾ ಘಟಕದ ಹೆಸರಲ್ಲಿ ಕಾರ್ಯಾಚರಿಸುತ್ತಿದ್ದ ನಾಯಮ್ಮಾರಮೂಲೆಯಲ್ಲಿದ್ದ ಕಚೇರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬೀಗ ಜಡಿದು ಮೊಹರು ಹಾಕಿದ್ದಾರೆ. ಅಲ್ಲದೆ, ಪಿಎಫ್ಐ ನಾಯಕರು ಸಹಿತ ಜಿಲ್ಲೆಯ ಹಲವಾರು ಮಂದಿ ಸದಸ್ಯರಾಗಿದ್ದ ನೀರಂ ಚಾರಿಟೇಬಲ್ ಟ್ರಸ್ಟಿಗೆ ಸೇರಿದ ಕಚೇರಿಗೂ ಬೀಗ ಹಾಕಲಾಗಿದೆ.
ಕಾಸರಗೋಡು ನಗರ ಹೊರವಲಯದ ಚೆಂಗಳ ಪಂಚಾಯತ್ ಏರಿಯಾದ ಪೆರುಂಬಳ ಕಡವು ಸುತುವೆ ಬಳಿಯಿದ್ದ ಚಂದ್ರಗಿರಿ ಚಾರಿಟೇಬಲ್ ಟ್ರಸ್ಟ್ ಹೆಸರಿನ ಪಿಎಫ್ಐ ಕಚೇರಿಗೂ ಬೀಗ ಹಾಕಿ ಮೊಹರು ಹಾಕಲಾಗಿದೆ. ಇದಲ್ಲದೆ, ಕೇಂದ್ರ ಸರಕಾರ ಇತ್ತೀಚೆಗೆ ನಿಷೇಧಿಸಿರುವ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳ ಬಗ್ಗೆ ಮಾಹಿತಿಗಳಿದ್ದ ನೋಟೀಸನ್ನು ಕಚೇರಿಯ ಬಾಗಿಲಿಗೆ ಅಂಟಿಸಲಾಗಿದೆ.

ಎನ್ಐಎ ಕೊಚ್ಚಿ ಘಟಕದ ಎಸ್ಪಿ ಉಮೇಶ್ ರಾಯ್ ನೇತೃತ್ವದ ತಂಡ ಇಲ್ಲಿಗೆ ಆಗಮಿಸಿದ್ದು, ನೋಟೀಸ್ ಅಂಟಿಸಿ ಕಚೇರಿಗೆ ಬೀಗ ಹಾಕಿದೆ. ಈ ವೇಳೆ, ಇಬ್ಬರು ತಹಸೀಲ್ದಾರರು, ಡಿವೈಎಸ್ಪಿ ವಿವಿ ಮನೋಜ್, ವಿದ್ಯಾನಗರ ಪೊಲೀಸ್ ಇನ್ಸ್ ಪೆಕ್ಟರ್ ಅನೂಪ್ ಕುಮಾರ್ ಉಪಸ್ಥಿತರಿದ್ದರು. ಎನ್ಐಎ ಸೂಚನೆಯಂತೆ ಹೊಸದುರ್ಗ ಡಿವೈಎಸ್ಪಿ ಬಾಲಕೃಷ್ಣನ್ ನಾಯರ್, ಚಂದೇರ ಪೊಲೀಸ್ ಇನ್ ಸ್ಪೆಕ್ಟರ್ ಪಿ. ನಾರಾಯಣನ್ ನೇತೃತ್ವದ ಪೊಲೀಸರು ಪಡನ್ನ ಎಂಬಲ್ಲಿದ್ದ ನೀರಂ ಚಾರಿಟೇಬಲ್ ಟ್ರಸ್ಟಿಗೂ ಬೀಗ ಹಾಕಿದ್ದಾರೆ. ಪಡನ್ನ ಹೈಸ್ಕೂಲ್ ಸಮೀಪದ ಕಟ್ಟಡದಲ್ಲಿ ನಾಮಫಲಕ ಇಲ್ಲದೆ ನೀರ ಚಾರಿಟೇಬಲ್ ಟ್ರಸ್ಟ್ ಕಚೇರಿ ಕಾರ್ಯಾಚರಿಸುತ್ತಿತ್ತು. ಎನ್ಐಎ ಬಂಧಿಸಿರುವ ಪಿಎಫ್ಐ ಜಿಲ್ಲಾಧ್ಯಕ್ಷ ತೃಕ್ಕರಿಪುರ ಮೂಲದ ಸಿಟಿ ಸುಲೇಮಾನ್ ಸೇರಿ ಕಾಸರಗೋಡಿನ ಹಲವು ಪ್ರಮುಖರು ಟ್ರಸ್ಟಿನಲ್ಲಿ ಸದಸ್ಯರಾಗಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
Following the Central government order to ban Popular Front of India, offices were closed and sealed in Kannur and Kasaragod district.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm