ಬ್ರೇಕಿಂಗ್ ನ್ಯೂಸ್
02-10-22 05:42 pm HK News Desk ದೇಶ - ವಿದೇಶ
ಕಾಸರಗೋಡು, ಅ.2: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾಸರಗೋಡು ಜಿಲ್ಲಾ ಘಟಕದ ಹೆಸರಲ್ಲಿ ಕಾರ್ಯಾಚರಿಸುತ್ತಿದ್ದ ನಾಯಮ್ಮಾರಮೂಲೆಯಲ್ಲಿದ್ದ ಕಚೇರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬೀಗ ಜಡಿದು ಮೊಹರು ಹಾಕಿದ್ದಾರೆ. ಅಲ್ಲದೆ, ಪಿಎಫ್ಐ ನಾಯಕರು ಸಹಿತ ಜಿಲ್ಲೆಯ ಹಲವಾರು ಮಂದಿ ಸದಸ್ಯರಾಗಿದ್ದ ನೀರಂ ಚಾರಿಟೇಬಲ್ ಟ್ರಸ್ಟಿಗೆ ಸೇರಿದ ಕಚೇರಿಗೂ ಬೀಗ ಹಾಕಲಾಗಿದೆ.
ಕಾಸರಗೋಡು ನಗರ ಹೊರವಲಯದ ಚೆಂಗಳ ಪಂಚಾಯತ್ ಏರಿಯಾದ ಪೆರುಂಬಳ ಕಡವು ಸುತುವೆ ಬಳಿಯಿದ್ದ ಚಂದ್ರಗಿರಿ ಚಾರಿಟೇಬಲ್ ಟ್ರಸ್ಟ್ ಹೆಸರಿನ ಪಿಎಫ್ಐ ಕಚೇರಿಗೂ ಬೀಗ ಹಾಕಿ ಮೊಹರು ಹಾಕಲಾಗಿದೆ. ಇದಲ್ಲದೆ, ಕೇಂದ್ರ ಸರಕಾರ ಇತ್ತೀಚೆಗೆ ನಿಷೇಧಿಸಿರುವ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳ ಬಗ್ಗೆ ಮಾಹಿತಿಗಳಿದ್ದ ನೋಟೀಸನ್ನು ಕಚೇರಿಯ ಬಾಗಿಲಿಗೆ ಅಂಟಿಸಲಾಗಿದೆ.

ಎನ್ಐಎ ಕೊಚ್ಚಿ ಘಟಕದ ಎಸ್ಪಿ ಉಮೇಶ್ ರಾಯ್ ನೇತೃತ್ವದ ತಂಡ ಇಲ್ಲಿಗೆ ಆಗಮಿಸಿದ್ದು, ನೋಟೀಸ್ ಅಂಟಿಸಿ ಕಚೇರಿಗೆ ಬೀಗ ಹಾಕಿದೆ. ಈ ವೇಳೆ, ಇಬ್ಬರು ತಹಸೀಲ್ದಾರರು, ಡಿವೈಎಸ್ಪಿ ವಿವಿ ಮನೋಜ್, ವಿದ್ಯಾನಗರ ಪೊಲೀಸ್ ಇನ್ಸ್ ಪೆಕ್ಟರ್ ಅನೂಪ್ ಕುಮಾರ್ ಉಪಸ್ಥಿತರಿದ್ದರು. ಎನ್ಐಎ ಸೂಚನೆಯಂತೆ ಹೊಸದುರ್ಗ ಡಿವೈಎಸ್ಪಿ ಬಾಲಕೃಷ್ಣನ್ ನಾಯರ್, ಚಂದೇರ ಪೊಲೀಸ್ ಇನ್ ಸ್ಪೆಕ್ಟರ್ ಪಿ. ನಾರಾಯಣನ್ ನೇತೃತ್ವದ ಪೊಲೀಸರು ಪಡನ್ನ ಎಂಬಲ್ಲಿದ್ದ ನೀರಂ ಚಾರಿಟೇಬಲ್ ಟ್ರಸ್ಟಿಗೂ ಬೀಗ ಹಾಕಿದ್ದಾರೆ. ಪಡನ್ನ ಹೈಸ್ಕೂಲ್ ಸಮೀಪದ ಕಟ್ಟಡದಲ್ಲಿ ನಾಮಫಲಕ ಇಲ್ಲದೆ ನೀರ ಚಾರಿಟೇಬಲ್ ಟ್ರಸ್ಟ್ ಕಚೇರಿ ಕಾರ್ಯಾಚರಿಸುತ್ತಿತ್ತು. ಎನ್ಐಎ ಬಂಧಿಸಿರುವ ಪಿಎಫ್ಐ ಜಿಲ್ಲಾಧ್ಯಕ್ಷ ತೃಕ್ಕರಿಪುರ ಮೂಲದ ಸಿಟಿ ಸುಲೇಮಾನ್ ಸೇರಿ ಕಾಸರಗೋಡಿನ ಹಲವು ಪ್ರಮುಖರು ಟ್ರಸ್ಟಿನಲ್ಲಿ ಸದಸ್ಯರಾಗಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
Following the Central government order to ban Popular Front of India, offices were closed and sealed in Kannur and Kasaragod district.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am