ಬ್ರೇಕಿಂಗ್ ನ್ಯೂಸ್
09-10-20 09:12 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 9: ರಿಪಬ್ಲಿಕ್ ಟಿವಿ ವಿರುದ್ಧ ಟಿಆರ್ ಪಿ ಗೋಲ್ಮಾಲ್ ಮಾಡಿರುವ ಬಗ್ಗೆ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ಮುಂಬೈ ಪೊಲೀಸ್ ಕಮೀಷನರ್ ಪರಮ್ ಬೀರ್ ಸಿಂಗ್ ಹೇಳಿಕೆ ನೀಡಿದ್ದರು. ಆದರೆ, ಈ ಪ್ರಕರಣದಲ್ಲಿ ದಾಖಲಾದ ಎಫ್ಐಆರ್ ಪ್ರಕಾರ, ದೂರು ದಾಖಲಾಗಿರುವುದು ಇಂಡಿಯಾ ಟುಡೇ ನ್ಯೂಸ್ ಚಾನೆಲ್ ವಿರುದ್ಧ ಎನ್ನುವ ಮಾಹಿತಿ ಹೊರಬಿದ್ದಿದೆ.
ಮುಂಬೈನ ಖಾಂಡಿವಿಲಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಇಂಡಿಯಾ ಟುಡೇ ನ್ಯೂಸ್ ಮತ್ತಿತರ ವಾಹಿನಿಗಳ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ಉಲ್ಲೇಖ ಇದೆ. ಬಾರ್ಕ್ ರೇಟಿಂಗ್ ಮಾನಿಟರಿಂಗ್ ಮಾಡುವ ಹನ್ಸ್ ರೀಸರ್ಚ್ ಸೆಂಟರ್ ಕಂಪನಿ ದೂರು ನೀಡಿದ್ದು, ಕಂಪೆನಿಯ ಮಾಜಿ ಉದ್ಯೋಗಿ ವಿಶಾಲ್ ಭಂಡಾರಿ ಹಣ ಪಡೆದು ಟಿಆರ್ ಪಿ ಹೆಚ್ಚಿಸಲು ತಂತ್ರ ಹೂಡಿದ್ದ. ಇದಕ್ಕಾಗಿ ಇಂಡಿಯಾ ಟುಡೇ ವಾಹಿನಿಯಿಂದ ಹಣವನ್ನು ಪಡೆಯುತ್ತಿದ್ದ ಎಂದು ಆರೋಪಿಸಿದೆ.

ಹನ್ಸ್ ರೀಸರ್ಚ್ ಸೆಂಟರ್ ಡೆಪ್ಯುಟಿ ಜನರಲ್ ಮ್ಯಾನೇಜರ್ ನಿತಿನ್ ದೇವ್ಕರ್ ಈ ದೂರು ನೀಡಿದ್ದು, ದೂರಿನಲ್ಲಿ ಸ್ಪಷ್ಟವಾಗಿ ಇಂಡಿಯಾ ಟುಡೇ ಮತ್ತಿತರ ನ್ಯೂಸ್ ಚಾನೆಲ್ ಎಂದು ಹೇಳಿದ್ದಾರೆ. ಹೀಗಾಗಿ ಮುಂಬೈ ಪೊಲೀಸ್ ಕಮಿಷನರ್ ಉದ್ದೇಶಪೂರ್ವಕವಾಗಿ ರಿಪಬ್ಲಿಕ್ ಟಿವಿ ಹೆಸರು ಹೇಳಿದ್ದಾರೆಯೇ ಎಂಬ ಶಂಕೆ ಮೂಡಿದೆ. ಈ ವಿಚಾರದಲ್ಲಿ ರಿಪಬ್ಲಿಕ್ ಟಿವಿ ಮಾಲಕ ಅರ್ನಾಬ್ ಗೋಸ್ವಾಮಿ, ಮುಂಬೈ ಪೊಲೀಸ್ ಕಮಿಷನರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ವಿಚಾರದಲ್ಲಿ ನಿರಂತರ ಸುದ್ದಿ ಮಾಡಿದ್ದ ರಿಪಬ್ಲಿಕ್ ಟಿವಿ ಮುಂಬೈ ಪೊಲೀಸರ ನಿದ್ದೆಗೆಡಿಸಿದ್ದರು. ಮುಂಬೈ ಪೊಲೀಸರು, ಪ್ರಕರಣ ಮುಚ್ಚಿ ಹಾಕುತ್ತಿದ್ದಾರೆ. ಮಹಾರಾಷ್ಟ್ರ ಸರಕಾರದ ಅಣತಿಯಂತೆ ಪೊಲೀಸರು ವರ್ತಿಸುತ್ತಿದ್ದಾರೆಂದು ಆರೋಪಿಸಿದ್ದರು. ಇದೇ ಕಾರಣಕ್ಕೆ ಟಿಆರ್ ಪಿ ಸ್ಕ್ಯಾಮ್ ನಲ್ಲಿ ರಿಪಬ್ಲಿಕ್ ಟಿವಿಯನ್ನು ಮುಂಬೈ ಪೊಲೀಸರು ಆರೋಪಿಯಾಗಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಎಫ್ಐಆರ್ ಪ್ರತಿಯಲ್ಲಿ ರಿಪಬ್ಲಿಕ್ ಟಿವಿ ಹೆಸರು ಉಲ್ಲೇಖ ಆಗದಿರುವುದು ಮತ್ತು ಅಲ್ಲಿ ಇಂಡಿಯಾ ಟುಡೇ ಹೆಸರು ಮಾತ್ರ ಉಲ್ಲೇಖ ಆಗಿರುವುದು ಸಂಶಯ ಮೂಡಿಸಿದೆ.
The 'fake TRP scam' took a new turn with the Mumbai police confirming that the First Information Report filed on October 6 had a witness mentioning that he was offered money to view India Today channel and not Republic Tv.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm