ಬ್ರೇಕಿಂಗ್ ನ್ಯೂಸ್
09-10-20 09:12 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 9: ರಿಪಬ್ಲಿಕ್ ಟಿವಿ ವಿರುದ್ಧ ಟಿಆರ್ ಪಿ ಗೋಲ್ಮಾಲ್ ಮಾಡಿರುವ ಬಗ್ಗೆ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ಮುಂಬೈ ಪೊಲೀಸ್ ಕಮೀಷನರ್ ಪರಮ್ ಬೀರ್ ಸಿಂಗ್ ಹೇಳಿಕೆ ನೀಡಿದ್ದರು. ಆದರೆ, ಈ ಪ್ರಕರಣದಲ್ಲಿ ದಾಖಲಾದ ಎಫ್ಐಆರ್ ಪ್ರಕಾರ, ದೂರು ದಾಖಲಾಗಿರುವುದು ಇಂಡಿಯಾ ಟುಡೇ ನ್ಯೂಸ್ ಚಾನೆಲ್ ವಿರುದ್ಧ ಎನ್ನುವ ಮಾಹಿತಿ ಹೊರಬಿದ್ದಿದೆ.
ಮುಂಬೈನ ಖಾಂಡಿವಿಲಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಇಂಡಿಯಾ ಟುಡೇ ನ್ಯೂಸ್ ಮತ್ತಿತರ ವಾಹಿನಿಗಳ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ಉಲ್ಲೇಖ ಇದೆ. ಬಾರ್ಕ್ ರೇಟಿಂಗ್ ಮಾನಿಟರಿಂಗ್ ಮಾಡುವ ಹನ್ಸ್ ರೀಸರ್ಚ್ ಸೆಂಟರ್ ಕಂಪನಿ ದೂರು ನೀಡಿದ್ದು, ಕಂಪೆನಿಯ ಮಾಜಿ ಉದ್ಯೋಗಿ ವಿಶಾಲ್ ಭಂಡಾರಿ ಹಣ ಪಡೆದು ಟಿಆರ್ ಪಿ ಹೆಚ್ಚಿಸಲು ತಂತ್ರ ಹೂಡಿದ್ದ. ಇದಕ್ಕಾಗಿ ಇಂಡಿಯಾ ಟುಡೇ ವಾಹಿನಿಯಿಂದ ಹಣವನ್ನು ಪಡೆಯುತ್ತಿದ್ದ ಎಂದು ಆರೋಪಿಸಿದೆ.
ಹನ್ಸ್ ರೀಸರ್ಚ್ ಸೆಂಟರ್ ಡೆಪ್ಯುಟಿ ಜನರಲ್ ಮ್ಯಾನೇಜರ್ ನಿತಿನ್ ದೇವ್ಕರ್ ಈ ದೂರು ನೀಡಿದ್ದು, ದೂರಿನಲ್ಲಿ ಸ್ಪಷ್ಟವಾಗಿ ಇಂಡಿಯಾ ಟುಡೇ ಮತ್ತಿತರ ನ್ಯೂಸ್ ಚಾನೆಲ್ ಎಂದು ಹೇಳಿದ್ದಾರೆ. ಹೀಗಾಗಿ ಮುಂಬೈ ಪೊಲೀಸ್ ಕಮಿಷನರ್ ಉದ್ದೇಶಪೂರ್ವಕವಾಗಿ ರಿಪಬ್ಲಿಕ್ ಟಿವಿ ಹೆಸರು ಹೇಳಿದ್ದಾರೆಯೇ ಎಂಬ ಶಂಕೆ ಮೂಡಿದೆ. ಈ ವಿಚಾರದಲ್ಲಿ ರಿಪಬ್ಲಿಕ್ ಟಿವಿ ಮಾಲಕ ಅರ್ನಾಬ್ ಗೋಸ್ವಾಮಿ, ಮುಂಬೈ ಪೊಲೀಸ್ ಕಮಿಷನರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ವಿಚಾರದಲ್ಲಿ ನಿರಂತರ ಸುದ್ದಿ ಮಾಡಿದ್ದ ರಿಪಬ್ಲಿಕ್ ಟಿವಿ ಮುಂಬೈ ಪೊಲೀಸರ ನಿದ್ದೆಗೆಡಿಸಿದ್ದರು. ಮುಂಬೈ ಪೊಲೀಸರು, ಪ್ರಕರಣ ಮುಚ್ಚಿ ಹಾಕುತ್ತಿದ್ದಾರೆ. ಮಹಾರಾಷ್ಟ್ರ ಸರಕಾರದ ಅಣತಿಯಂತೆ ಪೊಲೀಸರು ವರ್ತಿಸುತ್ತಿದ್ದಾರೆಂದು ಆರೋಪಿಸಿದ್ದರು. ಇದೇ ಕಾರಣಕ್ಕೆ ಟಿಆರ್ ಪಿ ಸ್ಕ್ಯಾಮ್ ನಲ್ಲಿ ರಿಪಬ್ಲಿಕ್ ಟಿವಿಯನ್ನು ಮುಂಬೈ ಪೊಲೀಸರು ಆರೋಪಿಯಾಗಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಎಫ್ಐಆರ್ ಪ್ರತಿಯಲ್ಲಿ ರಿಪಬ್ಲಿಕ್ ಟಿವಿ ಹೆಸರು ಉಲ್ಲೇಖ ಆಗದಿರುವುದು ಮತ್ತು ಅಲ್ಲಿ ಇಂಡಿಯಾ ಟುಡೇ ಹೆಸರು ಮಾತ್ರ ಉಲ್ಲೇಖ ಆಗಿರುವುದು ಸಂಶಯ ಮೂಡಿಸಿದೆ.
The 'fake TRP scam' took a new turn with the Mumbai police confirming that the First Information Report filed on October 6 had a witness mentioning that he was offered money to view India Today channel and not Republic Tv.
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
18-10-25 10:49 pm
Mangalore Correspondent
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm