ಬ್ರೇಕಿಂಗ್ ನ್ಯೂಸ್
03-10-22 03:42 pm HK News Desk ದೇಶ - ವಿದೇಶ
ಕೊಲ್ಕತ್ತಾ, ಅ.3: ದುರ್ಗಾ ಮೂರ್ತಿಯ ಕಾಲ ಕೆಳಗೆ ಮಹಿಷಾಸುರನ ಬದಲು ಮಹಾತ್ಮ ಗಾಂಧೀಜಿ ಇರುವಂತೆ ಬಿಂಬಿಸಿ ಪ್ರತಿಮೆ ರಚಿಸಿದ್ದು ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿದೆ. ಕೊಲ್ಕತ್ತಾದಲ್ಲಿ ಹಿಂದು ಮಹಾಸಭಾ ವತಿಯಿಂದ ಹಾಕಲಾಗಿದ್ದ ದುರ್ಗಾ ಮೂರ್ತಿಯ ಪೆಂಡಾಲ್ ನಲ್ಲಿ ಈ ರೀತಿ ಚಿತ್ರಿಸಲಾಗಿದ್ದು, ಗೃಹ ಸಚಿವಾಲಯದ ಸೂಚನೆಯಂತೆ ಬಳಿಕ ಗಾಂಧೀಜಿ ಪ್ರತಿಮೆಯನ್ನು ತೆರವು ಮಾಡಲಾಗಿದೆ.
ಈ ಬಗ್ಗೆ ಪೊಲೀಸ್ ದೂರು ದಾಖಲಾಗುತ್ತಿದ್ದಂತೆ ಪ್ರತಿಮೆಯನ್ನು ತೆರವು ಮಾಡಲಾಗಿದೆ. ಅಖಿಲ ಭಾರತೀಯ ಹಿಂದು ಮಹಾಸಭಾ ವತಿಯಿಂದ ಹಾಕಲಾಗಿದ್ದ ದುರ್ಗಾ ಮಾತೆಯ ಪ್ರತಿಮೆಯಲ್ಲಿ ಅಸುರ ಗಾಂಧಿಯನ್ನು ದುರ್ಗಾಮಾತೆ ಕೊಲ್ಲುವ ರೀತಿ ಚಿತ್ರಿಸಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿಂದು ಮಹಾಸಭಾ ಪಶ್ಚಿಮ ಬಂಗಾಳ ಘಟಕದ ಕಾರ್ಯಾಧ್ಯಕ್ಷ ಚಂದ್ರಾಚುರ್ ಗೋಸ್ವಾಮಿ, ನಾವು ಗಾಂಧಿಯನ್ನು ನೈಜ ಅಸುರನಾಗಿಯೇ ನೋಡುತ್ತೇವೆ. ಗಾಂಧಿ ಒಬ್ಬ ರಾಕ್ಷಸನಾಗಿದ್ದ. ಅದಕ್ಕಾಗಿಯೇ ಆ ರೀತಿ ಮೂರ್ತಿಯನ್ನು ಚಿತ್ರಿಸಲಾಗಿತ್ತು ಎಂದು ಹೇಳಿದ್ದಾರೆ.
ಕೇಂದ್ರ ಸರಕಾರ ಗಾಂಧೀಜಿಯನ್ನು ಪ್ರಮೋಟ್ ಮಾಡುತ್ತಿದೆ. ಆದರೆ ನಾವು ಗಾಂಧಿಯನ್ನು ಒಪ್ಪುವುದಿಲ್ಲ. ನಾವು ಅಸುರನಂತೆ ಚಿತ್ರಿಸಿ ಹಾಕಿದ್ದ ಮೂರ್ತಿಯನ್ನು ಬಲವಂತದಿಂದ ಬದಲಿಸಿದ್ದಾರೆ. ನಾವು ಎಲ್ಲ ಕಡೆ ಹಾಕಿರುವ ಗಾಂಧಿ ಚಿತ್ರಣವನ್ನು ತೆಗೆದು ಸುಭಾಸ್ ಚಂದ್ರ ಬೋಸ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರನ್ನು ಮುನ್ನೆಲೆಯಲ್ಲಿ ಹಾಕಲಿದ್ದೇವೆ ಎಂದು ಗೋಸ್ವಾಮಿ ಹೇಳಿದ್ದಾರೆ. ದಸರಾ ಎಂದರೆ, ಮಹಿಷಾಸುರನನ್ನು ದೇವಿ ಕೊಂದಿರುವ ದಿನವೆಂದು ಪುರಾಣ ನಂಬಿಕೆ. ಅದೇ ರೀತಿ ಅಸುರನನ್ನು ಕೊಂದ ದೇವಿಯ ಪ್ರತೀಕವಾಗಿ ದೇಶದೆಲ್ಲೆಡೆ ದೇವಿಯ ಆರಾಧನೆ ನಡೆಯುತ್ತದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಉದ್ದೇಶಪೂರ್ವಕವಾಗಿ ಗಾಂಧೀಜಿ ಜನ್ಮದಿನದ ಸಂದರ್ಭದಲ್ಲಿ ದಸರಾ ಬಂದಿದ್ದರಿಂದ ಗಾಂಧೀಜಿಯನ್ನೇ ದುರ್ಗೆ ಕೊಲ್ಲುವ ರೀತಿ ಚಿತ್ರಿಸಿ ವಿವಾದ ಎಬ್ಬಿಸಲಾಗಿದೆ. ಘಟನೆ ಬಗ್ಗೆ ತೃಣಮೂಲ ಕಾಂಗ್ರೆಸ್, ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಇತರೆಲ್ಲ ಪಕ್ಷಗಳು ಖಂಡನೆ ವ್ಯಕ್ತಪಡಿಸಿವೆ.
A controversy erupted after a durga puja in Kolkata organised by the All India Hindu Mahasabha depicted the ‘Mahisasura’ as Mahatma Gandhi, sparking a controversy. However, after pressure from the Ministry of Home Affairs , the organisers of the puja changed and removed the face, they alleged.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am