ಬ್ರೇಕಿಂಗ್ ನ್ಯೂಸ್
03-10-22 03:42 pm HK News Desk ದೇಶ - ವಿದೇಶ
ಕೊಲ್ಕತ್ತಾ, ಅ.3: ದುರ್ಗಾ ಮೂರ್ತಿಯ ಕಾಲ ಕೆಳಗೆ ಮಹಿಷಾಸುರನ ಬದಲು ಮಹಾತ್ಮ ಗಾಂಧೀಜಿ ಇರುವಂತೆ ಬಿಂಬಿಸಿ ಪ್ರತಿಮೆ ರಚಿಸಿದ್ದು ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿದೆ. ಕೊಲ್ಕತ್ತಾದಲ್ಲಿ ಹಿಂದು ಮಹಾಸಭಾ ವತಿಯಿಂದ ಹಾಕಲಾಗಿದ್ದ ದುರ್ಗಾ ಮೂರ್ತಿಯ ಪೆಂಡಾಲ್ ನಲ್ಲಿ ಈ ರೀತಿ ಚಿತ್ರಿಸಲಾಗಿದ್ದು, ಗೃಹ ಸಚಿವಾಲಯದ ಸೂಚನೆಯಂತೆ ಬಳಿಕ ಗಾಂಧೀಜಿ ಪ್ರತಿಮೆಯನ್ನು ತೆರವು ಮಾಡಲಾಗಿದೆ.
ಈ ಬಗ್ಗೆ ಪೊಲೀಸ್ ದೂರು ದಾಖಲಾಗುತ್ತಿದ್ದಂತೆ ಪ್ರತಿಮೆಯನ್ನು ತೆರವು ಮಾಡಲಾಗಿದೆ. ಅಖಿಲ ಭಾರತೀಯ ಹಿಂದು ಮಹಾಸಭಾ ವತಿಯಿಂದ ಹಾಕಲಾಗಿದ್ದ ದುರ್ಗಾ ಮಾತೆಯ ಪ್ರತಿಮೆಯಲ್ಲಿ ಅಸುರ ಗಾಂಧಿಯನ್ನು ದುರ್ಗಾಮಾತೆ ಕೊಲ್ಲುವ ರೀತಿ ಚಿತ್ರಿಸಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿಂದು ಮಹಾಸಭಾ ಪಶ್ಚಿಮ ಬಂಗಾಳ ಘಟಕದ ಕಾರ್ಯಾಧ್ಯಕ್ಷ ಚಂದ್ರಾಚುರ್ ಗೋಸ್ವಾಮಿ, ನಾವು ಗಾಂಧಿಯನ್ನು ನೈಜ ಅಸುರನಾಗಿಯೇ ನೋಡುತ್ತೇವೆ. ಗಾಂಧಿ ಒಬ್ಬ ರಾಕ್ಷಸನಾಗಿದ್ದ. ಅದಕ್ಕಾಗಿಯೇ ಆ ರೀತಿ ಮೂರ್ತಿಯನ್ನು ಚಿತ್ರಿಸಲಾಗಿತ್ತು ಎಂದು ಹೇಳಿದ್ದಾರೆ.
ಕೇಂದ್ರ ಸರಕಾರ ಗಾಂಧೀಜಿಯನ್ನು ಪ್ರಮೋಟ್ ಮಾಡುತ್ತಿದೆ. ಆದರೆ ನಾವು ಗಾಂಧಿಯನ್ನು ಒಪ್ಪುವುದಿಲ್ಲ. ನಾವು ಅಸುರನಂತೆ ಚಿತ್ರಿಸಿ ಹಾಕಿದ್ದ ಮೂರ್ತಿಯನ್ನು ಬಲವಂತದಿಂದ ಬದಲಿಸಿದ್ದಾರೆ. ನಾವು ಎಲ್ಲ ಕಡೆ ಹಾಕಿರುವ ಗಾಂಧಿ ಚಿತ್ರಣವನ್ನು ತೆಗೆದು ಸುಭಾಸ್ ಚಂದ್ರ ಬೋಸ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರನ್ನು ಮುನ್ನೆಲೆಯಲ್ಲಿ ಹಾಕಲಿದ್ದೇವೆ ಎಂದು ಗೋಸ್ವಾಮಿ ಹೇಳಿದ್ದಾರೆ. ದಸರಾ ಎಂದರೆ, ಮಹಿಷಾಸುರನನ್ನು ದೇವಿ ಕೊಂದಿರುವ ದಿನವೆಂದು ಪುರಾಣ ನಂಬಿಕೆ. ಅದೇ ರೀತಿ ಅಸುರನನ್ನು ಕೊಂದ ದೇವಿಯ ಪ್ರತೀಕವಾಗಿ ದೇಶದೆಲ್ಲೆಡೆ ದೇವಿಯ ಆರಾಧನೆ ನಡೆಯುತ್ತದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಉದ್ದೇಶಪೂರ್ವಕವಾಗಿ ಗಾಂಧೀಜಿ ಜನ್ಮದಿನದ ಸಂದರ್ಭದಲ್ಲಿ ದಸರಾ ಬಂದಿದ್ದರಿಂದ ಗಾಂಧೀಜಿಯನ್ನೇ ದುರ್ಗೆ ಕೊಲ್ಲುವ ರೀತಿ ಚಿತ್ರಿಸಿ ವಿವಾದ ಎಬ್ಬಿಸಲಾಗಿದೆ. ಘಟನೆ ಬಗ್ಗೆ ತೃಣಮೂಲ ಕಾಂಗ್ರೆಸ್, ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಇತರೆಲ್ಲ ಪಕ್ಷಗಳು ಖಂಡನೆ ವ್ಯಕ್ತಪಡಿಸಿವೆ.
A controversy erupted after a durga puja in Kolkata organised by the All India Hindu Mahasabha depicted the ‘Mahisasura’ as Mahatma Gandhi, sparking a controversy. However, after pressure from the Ministry of Home Affairs , the organisers of the puja changed and removed the face, they alleged.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm