ಬ್ರೇಕಿಂಗ್ ನ್ಯೂಸ್
05-10-22 12:11 pm HK News Desk ದೇಶ - ವಿದೇಶ
ಶ್ರೀನಗರ, ಅ.5 : ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಾಲ್ವರು ಉಗ್ರರನ್ನು ಸೇನಾ ಪಡೆ ಹೊಡೆದುರುಳಿಸಿದೆ. ಗೃಹ ಸಚಿವ ಅಮಿತ್ ಷಾ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿ ನಡೆಸುವ ಸಂದರ್ಭದಲ್ಲೇ ಸೇನಾ ಪಡೆ ಮಹತ್ವದ ಕಾರ್ಯಾಚರಣೆ ನಡೆಸಿದೆ.
ಶೋಪಿಯಾನ್ ಜಿಲ್ಲೆಯ ದ್ರಾಚ್ ಮತ್ತು ಮುಲು ಪ್ರದೇಶದಲ್ಲಿ ನಡೆದ ಪ್ರತ್ಯೇಕ ದಾಳಿಗಳಲ್ಲಿ ಒಟ್ಟು ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಉಗ್ರರು ನಿಷೇಧಿತ ಜೈಶ್ ಇ- ಮಹಮ್ಮದ್ ಸಂಘಟನೆಗೆ ಸೇರಿದವರು ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಕಣಿವೆ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯಲ್ಲಿ ಸೇನಾ ಪಡೆ ದಾಳಿ ನಡೆಸಿತ್ತು. ಆದರೆ ಉಗ್ರರು ಪ್ರತಿದಾಳಿ ನಡೆಸಿದ್ದರಿಂದ ಸೇನಾ ಯೋಧರು ಉಗ್ರರನ್ನು ಎನ್ಕೌಂಟರ್ ಮಾಡಿದ್ದಾರೆ. ಮೃತ ಉಗ್ರರ ಪೈಕಿ ಹನನ್ ಬಿನ್ ಯಾಕೂಬ್ ಮತ್ತು ಜಮ್ಶೆಡ್ ಎಂಬಿಬ್ಬರು ಅ.2ರಂದು ಪುಲ್ವಾಮಾದಲ್ಲಿ ನಡೆದ ಪೊಲೀಸ್ ಅಧಿಕಾರಿ ಜಾವೇದ್ ಧರ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಸೆ.24ರಂದು ಪಶ್ಚಿಮ ಬಂಗಾಳದ ಕಾರ್ಮಿಕನ ಹತ್ಯೆ ಪ್ರಕರಣದಲ್ಲಿಯೂ ಆರೋಪಿಗಳಾಗಿದ್ದರು. ಹಂತಕರ ಬಗ್ಗೆ ನಿಗಾ ಇಟ್ಟಿದ್ದ ಸೇನಾ ಪಡೆ ಹೊಂಚು ಹಾಕಿ ಹತ್ಯೆ ಮಾಡಿದೆ.
ಸಚಿವ ಅಮಿತ್ ಷಾ ಎರಡು ದಿನಗಳ ಪ್ರವಾಸದ ನಿಮಿತ್ತ ಜಮ್ಮು ಕಾಶ್ಮೀರಕ್ಕೆ ಆಗಮಿಸಿದ್ದು ಬುಧವಾರ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
Three Jaish-e-Mohammed (JeM) terrorists and a local terrorist have been gunned down during two encounters that broke out between security forces and terrorists in Jammu and Kashmir's Shopian district late Tuesday night. One operation is underway in the Drach area, while the other one began in the Moolu area of Shopian.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am