ಬ್ರೇಕಿಂಗ್ ನ್ಯೂಸ್
09-10-22 01:35 pm HK News Desk ದೇಶ - ವಿದೇಶ
ಲಖನೌ, ಅ.9: ಉತ್ತರ ಪ್ರದೇಶದಲ್ಲಿ 8,000 ಕೋಟಿ ರೂ. ವೆಚ್ಚದ ರಸ್ತೆ ಯೋಜನೆ ಘೋಷಿಸಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, 2024ಕ್ಕೂ ಮುನ್ನ ಅಮೆರಿಕಕ್ಕಿಂತಲೂ ಉತ್ತಮವಾದ ರಸ್ತೆಗಳನ್ನು ರಾಜ್ಯದಲ್ಲಿ ನಿರ್ಮಿಸಲಾಗುವುದು ಎಂದಿದ್ದಾರೆ.
ಭಾರತೀಯ ರಸ್ತೆ ಕಾಂಗ್ರೆಸ್ನ (ಐಆರ್ಸಿ) 81ನೇ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ಕೇಂದ್ರ ಸಚಿವ ಗಡ್ಕರಿ, ತಮ್ಮ ಭಾಷಣದ ವೇಳೆ ಈ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

"ಉತ್ತರ ಪ್ರದೇಶದ ರಸ್ತೆಗಳನ್ನು 2024ಕ್ಕೂ ಮುನ್ನ ಅಮೆರಿಕದ ರಸ್ತೆಗಳಿಗಿಂತಲೂ ಉತ್ತಮವಾಗಿ ಮಾಡಬೇಕಿದೆ. ಇದಕ್ಕಾಗಿ ಮೋದಿ ಸರ್ಕಾರವು ಮುಂಬರುವ ದಿನಗಳಲ್ಲಿ ಉತ್ತರ ಪ್ರದೇಶಗಳಲ್ಲಿ ಐದು ಲಕ್ಷ ಕೋಟಿ ರೂ ಮಂಜೂರು ಮಾಡುತ್ತಿದೆ" ಎಂದು ಗಡ್ಕರಿ ಹೇಳಿದ್ದಾರೆ.
ಈ ಸಂದರ್ಭದಲ್ಲಿ, ಇಂದು ಎಂಟು ಸಾವಿರ ಕೋಟಿ ರೂ ಮೌಲ್ಯದ ಯೋಜನೆ ನೀಡಲಾಗುತ್ತಿದೆ ಎಂದು ಗಡ್ಕರಿ ಘೋಷಿಸಿದ್ದಾರೆ. "ಇದರಲ್ಲಿ ಶಹಬಾದ್- ಹಾರ್ದೋರ್ ಬೈಪಾಸ್, ಶಹಜಾನ್ಪುರ- ಶಹಬಾದ್ ಬೈಪಾಸ್, ಮೊರದಾಬಾದ್- ಠಾಕೂರ್ದ್ವಾರಾ- ಕಾಶೀಪುರ ಬೈಪಾಸ್, ಗಾಜಿಪುರ- ಬಲ್ಲಿಯಾ ಬೈಪಾಸ್, 13 ಆರ್ಒಬಿಗಳು ಸೇರಿದಂತೆ ಒಟ್ಟು 8,000 ಕೋಟಿ ರೂ ಮಂಜೂರು ಮಾಡಲಾಗಿದೆ" ಎಂದು ತಿಳಿಸಿದ್ದಾರೆ.
ಇದು ಇನ್ನೂ ಆರಂಭವಷ್ಟೇ. ಇಡೀ ಸಿನಿಮಾ ಬರಬೇಕಿದೆ ಎಂದಿದ್ದಾರೆ. "ಉತ್ತಮ ರಸ್ತೆಗಳನ್ನು ನಿರ್ಮಿಸಲು ಸರ್ಕಾರದ ಬಳಿ ಹಣದ ಕೊರತೆ ಇಲ್ಲ" ಎಂದು ಹೇಳಿದ್ದಾರೆ.
"ಈ ಮೂರು ದಿನಗಳ ಐಆರ್ಸಿಯ ಸಮಾವೇಶವು ಎಂಜಿನಿಯರ್ಗಳು, ವೃತ್ತಿಪರರು ಮತ್ತು ಭಾರತ ಹಾಗೂ ವಿದೇಶಗಳ ರಸ್ತೆ ವಲಯದ ಪರಿಣತರು ಜತೆಯಾಗಿ ಬರಲು ಮತ್ತು ಸುರಕ್ಷತೆ ಹಾಗೂ ಸುಸ್ಥಿರ ರಸ್ತೆಗಳ ನಿರ್ಮಾಣದ ಕಡೆಗೆ ಪ್ರಯತ್ನ ಮಾಡುವುದರ ಜತೆ, ಪ್ರಧಾನ ನರೇಂದ್ರ ಮೋದಿ ಅವರ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಯೋಜನೆ ಸಾಧಿಸಲು ಮಹತ್ವದ ಅವಕಾಶವಾಗಿದೆ" ಎಂದು ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ.
ಲಖನೌದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದಲ್ಲಿ ಗಡ್ಕರಿ ಪರಾಮರ್ಶನಾ ಸಭೆ ಕೂಡ ನಡೆಸಿದ್ದಾರೆ. ಉತ್ತರ ಪ್ರದೇಶದಲ್ಲಿನ ಎಲ್ಲ ಹಾಲಿ ಮತ್ತು ಭವಿಷ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.
Union Road Transport and Highways Minister Nitin Gadkari on Friday gifted road projects worth ₹ 8,000 crore to Uttar Pradesh and said that the roads of State will be made better than America's before 2024.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm