ಬ್ರೇಕಿಂಗ್ ನ್ಯೂಸ್
10-10-22 12:59 pm HK News Desk ದೇಶ - ವಿದೇಶ
ನವದೆಹಲಿ, ಅ.10; ಸಮಾಜವಾದಿ ಪಕ್ಷದ ಸ್ಥಾಪಕ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್(82) ವಿಧಿವಶರಾಗಿದ್ದಾರೆ. ಮೂರು ಬಾರಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದ ಮುಲಾಯಂ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ‘ಮುಲಾಯಂ ಸಿಂಗ್ ಯಾದವ್ ಗಮನಾರ್ಹ ವ್ಯಕ್ತಿತ್ವ ಹೊಂದಿದ್ದರು. ಜನರ ಸಮಸ್ಯೆಗಳ ಬಗ್ಗೆ ಸಂವೇದನಾಶೀಲರಾಗಿದ್ದರು. ಲೋಕನಾಯಕ ಜಯಪ್ರಕಾಶ್ ನಾರಾಯಣ್ ಮತ್ತು ಡಾ.ರಾಮಮನೋಹರ್ ಲೋಹಿಯಾ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ಮುಲಾಯಂ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಎಂದು ಹೇಳಿದ್ದಾರೆ.
I had many interactions with Mulayam Singh Yadav Ji when we served as Chief Ministers of our respective states. The close association continued and I always looked forward to hearing his views. His demise pains me. Condolences to his family and lakhs of supporters. Om Shanti. pic.twitter.com/eWbJYoNfzU
— Narendra Modi (@narendramodi) October 10, 2022
श्री मुलायम सिंह यादव का निधन देश के लिए अपूरणीय क्षति है। साधारण परिवेश से आए मुलायम सिंह यादव जी की उपलब्धियां असाधारण थीं। ‘धरती पुत्र’ मुलायम जी जमीन से जुड़े दिग्गज नेता थे। उनका सम्मान सभी दलों के लोग करते थे। उनके परिवार-जन व समर्थकों के प्रति मेरी गहन शोक-संवेदनाएं!
— President of India (@rashtrapatibhvn) October 10, 2022
ಮುಲಾಯಂ ಸಿಂಗ್ ಯಾದವ್ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಸಾಮಾನ್ಯ ಪರಿಸರದಿಂದ ಬಂದ ಮುಲಾಯಂ ಸಿಂಗ್ ಯಾದವ್ ಸಾಧನೆ ಅಸಾಧಾರಣ. ‘ಭೂಮಿ ಪುತ್ರ’ ಮುಲಾಯಂಜಿಯರು ಭೂಮಿಗೆ ಸಂಬಂಧಿಸಿದ ಹಿರಿಯ ನಾಯಕರಾಗಿದ್ದರು. ಎಲ್ಲ ಪಕ್ಷಗಳ ಜನರೂ ಅವರನ್ನು ಗೌರವಿಸುತ್ತಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.
I am deeply saddened by the passing away of my longtime colleague and friend Shri #MulayamSinghYadav My condolences to his family and followers. He was deeply committed to the secular and socialist political traditions. Will miss him very much. @samajwadiparty @yadavakhilesh pic.twitter.com/KpcQil8hzP
— H D Devegowda (@H_D_Devegowda) October 10, 2022
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಟ್ವೀಟ್ ಮಾಡಿದ್ದು, ‘ನನ್ನ ಬಹುಕಾಲದ ಸಹೋದ್ಯೋಗಿ ಮತ್ತು ಸ್ನೇಹಿತ ಮುಲಾಯಂ ಸಿಂಗ್ ಯಾದವ್ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪ. ಅವರು ಜಾತ್ಯತೀತ ಮತ್ತು ಸಮಾಜವಾದಿ ರಾಜಕೀಯ ಸಂಪ್ರದಾಯಗಳಿಗೆ ಬದ್ಧರಾಗಿದ್ದರು. ಅವರನ್ನು ನಾನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ’ ಅಂತಾ ಹೇಳಿದ್ದಾರೆ.
उत्तर प्रदेश के पूर्व मुख्यमंत्री श्री मुलायम सिंह यादव जी का निधन अत्यंत दुखदायी है।
— Yogi Adityanath (@myogiadityanath) October 10, 2022
उनके निधन से समाजवाद के एक प्रमुख स्तंभ एवं एक संघर्षशील युग का अंत हुआ है।
ईश्वर से दिवंगत आत्मा की शांति की कामना व शोकाकुल परिवार एवं समर्थकों के प्रति संवेदना व्यक्त करता हूँ।
ಯುಪಿಯಲ್ಲಿ 3 ದಿನ ಶೋಕಾಚರಣೆ
ಮುಲಾಯಂ ಸಿಂಗ್ ಯಾದವ್ ವಿಧಿವಶರಾದ ಹಿನ್ನೆಲೆ ಉತ್ತರ ಪ್ರದೇಶದಲ್ಲಿ ಮುಂದಿನ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ರಾಜ್ಯ ಕಂಡ ಶ್ರೇಷ್ಠ ನಾಯಕನ ಅಗಲಿಕೆಗಾಗಿ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗಿದ್ದು, ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ಮೂರು ಬಾರಿ ಮುಖ್ಯಮಂತ್ರಿ, ರಕ್ಷಣಾ ಸಚಿವರಾಗಿದ್ದ ಸಿಂಗ್
ಮುಲಾಯಂ ಸಿಂಗ್ ಯಾದವ್ ರಾಜಕೀಯದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಭಾರತೀಯ ರಾಜಕಾರಣಿಗಳಲ್ಲಿ ಒಬ್ಬರು. ಕಾಂಗ್ರೆಸ್ ಮತ್ತು ಬಿಜೆಪಿಗೆದುರಾಗಿ ಪ್ರಾದೇಶಿಕ ಪಕ್ಷ ಕಟ್ಟಿ ಸ್ವಂತ ಬಲದಲ್ಲಿ ಅಧಿಕಾರ ಸ್ಥಾನ ಪಡೆದಿದ್ದು ಸಣ್ಣ ಸಾಧನೆಯಲ್ಲ. 1989 ರಿಂದ 1991, 1993 ರಿಂದ 1995 ಮತ್ತು 2003 ರಿಂದ 2007ರ ವರೆಗೆ ಮುಲಾಯಂ ಮೂರು ಬಾರಿ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಆಗಿದ್ದರು. ಪುತ್ರ ಅಖಿಲೇಶ್ ರಾಜಕೀಯಕ್ಕೆ ಬಂದ ಬಳಿಕ ಅನಾರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಸಕ್ರಿಯ ರಾಜಕಾರಣದಿಂದ ದೂರ ಸರಿದಿದ್ದರು. ಹಾಗಿದ್ದರೂ ಮುಲಾಯಂ ಸಿಂಗ್ ಯಾದವ್, ಪ್ರಸ್ತುತ ಅಜಂಗಢ ಕ್ಷೇತ್ರದ ಸಂಸದರು.
1996-1998ರಲ್ಲಿ ಸಮ್ಮಿಶ್ರ ಸರಕಾರದಲ್ಲಿ ಮುಲಾಯಂ ಸಿಂಗ್ ಭಾರತದ ರಕ್ಷಣಾ ಸಚಿವರಾಗಿದ್ದರು. 1974-2007 ರ ನಡುವೆ ಏಳು ಅವಧಿಗೆ ಉತ್ತರ ಪ್ರದೇಶದ ಶಾಸಕರಾಗಿ ಆಯ್ಕೆಯಾಗಿದ್ದರು. 1992ರಲ್ಲಿ ಪ್ರತ್ಯೇಕ ಪಕ್ಷ ಸ್ಥಾಪಿಸಿದ ಬಳಿಕ ಮುಲಾಯಂ ಏರುಗತಿ ಪ್ರಬಲ ಎದುರಾಳಿಗಳನ್ನು ಮಣ್ಣು ಮುಕ್ಕುವಂತೆ ಮಾಡಿತ್ತು.
Mulayam Singh Yadav, the former chief minister of Uttar Pradesh and founder of the Samajwadi Party, died on Monday after prolonged illness. He was 82.Yadav was undergoing treatment at the Medanta Hospital in Gurugram since August 22. His condition deteriorated on October 2, following which he was shifted to the hospital’s Intensive Care Unit.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm