ಬ್ರೇಕಿಂಗ್ ನ್ಯೂಸ್
10-10-20 04:55 pm Headline Karnataka News Network ದೇಶ - ವಿದೇಶ
ಅಮೆರಿಕ, ಅಕ್ಟೋಬರ್ 10: ವಿಶ್ವದ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲೊಂದಾದ ಹಾರ್ವರ್ಡ್ ಬಿಸಿನೆಸ್ ಸ್ಕೂಲ್ ಡೀನ್ ಆಗಿ ಭಾರತ ಮೂಲದ ಶ್ರೀಕಾಂತ್ ದಾತಾರ್ ಅವರನ್ನು ಹಾರ್ವರ್ಡ್ ವಿವಿ ನೇಮಕ ಮಾಡಿದೆ.
ಪ್ರಸ್ತುತ ಆರ್ಥರ್ ಲೊವೆಸ್ ಡಿಕಿನ್ಸನ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಪ್ರಾಧ್ಯಾಪಕ ಮತ್ತು ಎಚ್ಬಿಎಸ್ನಲ್ಲಿ ವಿಶ್ವವಿದ್ಯಾಲಯ ವ್ಯವಹಾರಗಳ ಹಿರಿಯ ಸಹಾಯಕ ಡೀನ್ ಆಗಿರುವ ದತಾರ್ ಜನವರಿ 1 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ವಿಸ್ತೃತ ಅಂತಾರಾಷ್ಟ್ರೀಯ ದೃಷ್ಟಿಕೋನ, ವ್ಯವಹಾರ ಕ್ಷೇತ್ರದಲ್ಲಿ ದಶಕದ ಕಾಲ ತೊಡಗಿಸಿಕೊಂಡ ಅನುಭವ, ವೈವಿಧ್ಯಮಯ ಹಾಗೂ ಎಲ್ಲರ ಪಾಲ್ಗೊಳ್ಳುವಿಕೆಯ ಎಚ್ಬಿಎಸ್ ಸಮೂಹವನ್ನು ಸೃಷ್ಟಿಸುವಲ್ಲಿ ಬದ್ಧತೆ ಹೊಂದಿದ ಶ್ರೀಕಾಂತ್ ಡೀನ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ" ಎಂದು ಹಾರ್ವರ್ಡ್ ವಿವಿ ಅಧ್ಯಕ್ಷ ಲಾರೆನ್ಸ್ ಬಕಾವ್ ತಿಳಿಸಿದ್ದಾರೆ.
ಹಾರ್ವರ್ಡ್ ಬಿಸಿನೆಸ್ ಸ್ಕೂಲ್ನ 112 ವರ್ಷಗಳ ಇತಿಹಾಸದಲ್ಲಿ 11ನೇ ಡೀನ್ ಆಗಿ ದಾತಾರ್ ನೇಮಕವಾಗಿದ್ದು ,ಒಂದರ ಹಿಂದೆ ಮತೊಬ್ಬ ಭಾರತೀಯ ಈ ಹುದ್ದೆಯನ್ನು ಅಲಂಕರಿಸುತ್ತಿರುವುದು ಇದೆ ಮೊದಲು.
ಕಳೆದ ನವೆಂಬರ್ ನಲ್ಲಿ 10 ವರ್ಷಗಳ ವಿಶೇಷ ಸೇವೆಯ ನಂತರ 2020 ರ ಜೂನ್ ಅಂತ್ಯದಲ್ಲಿ ಡೀನ್ ಶಿಪ್ ಮುಕ್ತಾಯಗೊಳಿಸುವ ಯೋಜನೆಯನ್ನು ಪ್ರಕಟಿಸಿದ್ದ ಭಾರತ ಮೂಲದ ನಿತಿನ್ ನೊಹ್ರಿಯಾ, ಕೋವಿಡ್-19 ಕಾರಣದಿಂದಾಗಿ ಡಿಸೆಂಬರ್ ವರೆಗೂ ಮುಂದುವರೆಯಂತೆ ಒಪ್ಪಿಕೊಂಡಿದ್ದರು.
ಭಾರತ ಮೂಲದ ದಾತಾರ್, ಸ್ಟಾನ್ಫೋರ್ಡ್ ವಿವಿಯ ಗ್ರಾಜ್ಯುಯೇಟ್ ಸ್ಕೂಲ್ ಆಫ್ ಬಿಸಿನೆಸ್ನಿಂದ 1996ರಲ್ಲಿ ಹಾರ್ವರ್ಡ್ ಬ್ಯುಸಿನೆಸ್ ಸ್ಕೂಲ್ ಸೇರಿದ್ದರು. ವೆಚ್ಚ ನಿರ್ವಹಣೆ ಮತ್ತು ಕಾರ್ಪೊರೇಟ್ ಆಡಳಿತ ಕ್ಷೇತ್ರದಲ್ಲಿ ಅವರು ಪರಿಣತಿ ಹೊಂದಿದ್ದಾರೆ. ಡಾಟಾ ಸೈನ್ಸ್, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್, ವಿನೂತನ ಸಮಸ್ಯೆ ಬಗೆಹರಿಸುವಿಕೆ ಮತ್ತು ಮೆಷಿನ್ ಲರ್ನಿಂಗ್ ಕ್ಷೇತ್ರದ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದಾರೆ. ನೊರ್ವಾಟೀಸ್ ಎಜಿ ಮತ್ತು ಟಿ-ಮೊಬೈಲ್ ಯುಎಸ್ ಇಂಕ್ ಸೇರಿದಂತೆ ಹಲವು ಕಂಪನಿಗಳ ಆಡಳಿತ ಮಂಡಳಿಯ ಸದಸ್ಯರಾಗಿದ್ದಾರೆ.
Srikant Datar, Professor of Business Administration and the senior associate Dean for University Affairs at Harvard Business School (HBS), will become the second consecutive dean hailing from India to lead the prestigious 112-year-old institution.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm