ಬ್ರೇಕಿಂಗ್ ನ್ಯೂಸ್
15-10-22 03:27 pm HK News Desk ದೇಶ - ವಿದೇಶ
ವಾಷಿಂಗ್ಟನ್, ಅ.15: ಪಾಕಿಸ್ತಾನವು ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಒಂದು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಪಾಕಿಸ್ತಾನದ ವಿರುದ್ಧ ಅಮೆರಿಕದ ನಾಯಕರೊಬ್ಬರು ಈ ರೀತಿಯ ಬಹಿರಂಗ ಹೇಳಿಕೆ ನೀಡಿರುವುದು ಅಪರೂಪದ ಸನ್ನಿವೇಶವಾಗಿದ್ದು, ಪಾಕಿಸ್ತಾನದ ವಿರುದ್ಧ ಜಾಗತಿಕ ಮಟ್ಟದಲ್ಲಿ ಭಾರತದ ನಿಲುವಿಗೆ ಶಕ್ತಿ ಬಂದಂತಾಗಿದೆ.
ಲಾಸ್ ಏಂಜಲೀಸ್ನಲ್ಲಿ ನಡೆದ ಡೆಮಾಕ್ರಟಿಕ್ ಕಾಂಗ್ರೆಸ್ಸನಲ್ ಕಾಂಪೈನ್ ಕಮಿಟಿ ರಿಸೆಪ್ಷನ್ ಕಾರ್ಯಕ್ರಮದಲ್ಲಿ ಬೈಡನ್, ರಷ್ಯಾ ಮತ್ತು ಚೀನಾ ವಿರುದ್ಧ ಕಿಡಿಕಾರುವ ವೇಳೆ ಈ ಹೇಳಿಕೆ ನೀಡಿದ್ದಾರೆ.
ಚೀನಾ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಸಂಬಂಧಿಸಿದಂತೆ ಅಮೆರಿಕದ ನೀತಿಗಳ ಕುರಿತು ಮಾತನಾಡಿದ ಬೈಡನ್, ಜಗತ್ತಿನಲ್ಲಿನ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಒಂದು ಎಂದು ಪಾಕಿಸ್ತಾನವನ್ನು ತಾವು ಪರಿಗಣಿಸಿರುವುದಾಗಿ ಹೇಳಿದ್ದಾರೆ.
"ಇಲ್ಲೊಬ್ಬ ವ್ಯಕ್ತಿ (ಕ್ಸಿ ಜಿನ್ಪಿಂಗ್) ತನಗೆ ಏನು ಬೇಕು ಎಂದು ಅರ್ಥಮಾಡಿಕೊಳ್ಳುತ್ತಾನೆ. ಆದರೆ ಆತ ವಿಪರೀತ ಸಮಸ್ಯೆಗಳ ಪಟ್ಟಿಯನ್ನೇ ಹೊಂದಿದ್ದಾನೆ. ಅದನ್ನು ನಾವು ಹೇಗೆ ನಿಭಾಯಿಸುವುದು? ರಷ್ಯಾದಲ್ಲಿ ನಡೆಯುತ್ತಿರುವುದಕ್ಕೆ ಸಂಬಂಧಿಸಿರುವ ಅದನ್ನು ನಾವು ಹೇಗೆ ನಿಭಾಯಿಸುವುದು? ಹಾಗೆಯೇ, ನನ್ನ ಪ್ರಕಾರ ಜಗತ್ತಿನ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಇದೂ ಒಂದು: ಪಾಕಿಸ್ತಾನ. ಯಾವುದೇ ಸಹಮತಗಳಿಲ್ಲದೆ ಪರಮಾಣ ಅಸ್ತ್ರಗಳನ್ನು ಹೊಂದಿದೆ" ಎಂದು ಬೈಡನ್ ಹೇಳಿದ್ದಾರೆ.
ಅಮೆರಿಕದ ಜತೆಗಿನ ಸಂಬಂಧವನ್ನು ಮತ್ತೆ ಸರಿಪಡಿಸಿಕೊಳ್ಳುವ ಪ್ರಯತ್ನ ನಡೆಸುತ್ತಿರುವ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ಸರ್ಕಾರಕ್ಕೆ, ಬೈಡನ್ ಅವರ ಹೇಳಿಕೆಯು ತೀವ್ರ ಹಿನ್ನಡೆ ಉಂಟುಮಾಡಲಿದೆ ಎಂದು ಹೇಳಲಾಗಿದೆ.
21ನೇ ಶತಮಾನದ ಎರಡನೇ ಭಾಗದಲ್ಲಿ ಅಮೆರಿಕವನ್ನು ಕ್ರಿಯಾತ್ಮಕವಾಗಿ ಬದಲಿಸಲು ಸಾಕಷ್ಟು ಅವಕಾಶಗಳಿವೆ ಎಂದು ಬೈಡನ್ ಅವರು ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಅನೇಕ ಸಂಗತಿಗಳು ನಡೆಯುತ್ತಿವೆ. ಸಾಕಷ್ಟು ಸಂಭವಿಸುತ್ತಿವೆ. ಆದರೆ 21ನೇ ಶತಮಾನದ ಎರಡನೇ ಅವಧಿಯಲ್ಲಿ ಕ್ರಿಯಾತ್ಮಕವಾಗಿ ಬದಲಾಗಲು ಅಮೆರಿಕಕ್ಕೆ ಬಹಳಷ್ಟು ಅವಕಾಶಗಳಿವೆ" ಎಂದು ಅಭಿಪ್ರಾಯಪಟ್ಟಿದ್ದಾರೆ.
ಬೈಡನ್ ಆಡಳಿತವು ಕಾಂಗ್ರೆಸ್ ಅನುಮೋದಿತ ಪ್ರಮುಖ ನೀತಿ ದಾಖಲೆಯನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ಚೀನಾ ಮತ್ತು ರಷ್ಯಾ ದೇಶಗಳು ಸೃಷ್ಟಿಸಿರುವ ಅಪಾಯಗಳನ್ನು ಒತ್ತಿ ಹೇಳಲಾಗಿತ್ತು.
United States President Joe Biden deemed Pakistan one of the most dangerous nations in the world. The White House statement quoted the president's address at the Democratic Congressional Campaign Committee Reception on Friday.Biden said, "What I think is maybe one of the most dangerous nations in the world, Pakistan. Nuclear weapons without any cohesion."
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm