ಬ್ರೇಕಿಂಗ್ ನ್ಯೂಸ್
18-10-22 02:09 pm HK News Desk ದೇಶ - ವಿದೇಶ
ನವದೆಹಲಿ, ಅ.18 : ತನ್ನನ್ನು ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರುವಂತೆ ಒತ್ತಡ ಹೇರಲಾಗಿದೆ ಎಂದು ಸಿಬಿಐ ತನಿಖೆಗೆ ಒಳಗಾಗಿರುವ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಸಿಬಿಐ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸೋಮವಾರ ಸತತ ಒಂಬತ್ತು ಗಂಟೆಗಳ ಕಾಲ ಸಿಬಿಐ ಅಧಿಕಾರಿಗಳಿಂದ ವಿಚಾರಣೆಗೆ ಒಳಗಾಗಿದ್ದ ಅವರು, ಅಲ್ಲಿಂದ ಹೊರಬಂದು ಹೊಸ ಬಾಂಬ್ ಹಾಕಿದ್ದಾರೆ.
10 ಸಾವಿರ ಕೋಟಿ ಅಬಕಾರಿ ಹಗರಣ ನಡೆದಿದೆ ಎಂದು ಬಿಜೆಪಿ ಹೇಳುತ್ತಿದೆ. ಆದರೆ ಇಂತಹ ಯಾವುದೇ ಹಗರಣ ನಡೆದಿಲ್ಲ ಮತ್ತು ಇಡೀ ಪ್ರಕರಣವೇ ನಕಲಿ ಎಂದು ಸಿಬಿಐ ಕಚೇರಿಯಲ್ಲಿ ಕಂಡುಕೊಂಡಿದ್ದೇನೆ. ನನ್ನ ವಿರುದ್ಧದ ಪ್ರಕರಣವು ದೆಹಲಿಯಲ್ಲಿ ಬಿಜೆಪಿಯ 'ಆಪರೇಷನ್ ಕಮಲ' ಕಾರ್ಯಾಚರಣೆ ಹಿಂದಿನ ಷಡ್ಯಂತ್ರ ಎಂದು ಸಿಸೋಡಿಯಾ ಹೇಳಿದ್ದಾರೆ.
ಎಎಪಿ ತೊರೆಯುವಂತೆ ನನ್ನ ಮೇಲೆ ಒತ್ತಡ ಹೇರಿದ್ದು ದೆಹಲಿ ಸಿಎಂ ಸ್ಥಾನ ನೀಡುವ ಆಫರ್ ನೀಡಲಾಗಿದೆ. ಸಿಎಂ ಸ್ಥಾನ ಸ್ವೀಕರಿಸಬೇಕು ಇಲ್ಲವೇ ಜೈಲು ಶಿಕ್ಷೆ ಅನುಭವಿಸಬೇಕೆಂಬ ಆಯ್ಕೆ ನೀಡಿದ್ದಾರೆ ಎಂದು ಸಿಸೋಡಿಯಾ ಗಂಭೀರ ಆರೋಪ ಮಾಡಿದ್ದಾರೆ.
ಆದರೆ, ಸಿಸೋಡಿಯಾ ಅವರ ಆರೋಪಗಳನ್ನು ಕೇಂದ್ರ ತನಿಖಾ ಸಂಸ್ಥೆ ತಳ್ಳಿಹಾಕಿದೆ. ಕಾನೂನು ರೀತಿಯಲ್ಲಿ ವಿಚಾರಣೆ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದೆ. ಎಫ್ಐಆರ್ನಲ್ಲಿ ದಾಖಲಾದ ಪ್ರಕಾರ ಸಿಸೋಡಿಯಾ ಅವರನ್ನು ವೃತ್ತಿಪರ ಮತ್ತು ಕಾನೂನು ರೀತಿಯಲ್ಲಿ ವಿಚಾರಣೆ ನಡೆಸಲಾಗಿದೆ. ಪ್ರಕರಣದ ತನಿಖೆ ಕಾನೂನಿನ ಪ್ರಕಾರವೇ ಮುಂದುವರಿಯಲಿದೆ ಎಂದು ಸಿಬಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
The Central Bureau of Investigation (CBI), which summoned Delhi's deputy chief minister Manish Sisodia on Monday for alleged irregularities in Delhi's excise policy, refuted Sisodia's claim that he was pressurised to leave the Aam Aadmi Party (AAP).Sisodia, who left the CBI headquarters after nine hours of questioning, said that he was pressurised to leave the AAP and was offered the Delhi Chief Minister's post. "BJP says there is a Rs 10,000 crore excise scam. There is no scam and a fake case has been registered against me.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm