ಬ್ರೇಕಿಂಗ್ ನ್ಯೂಸ್
21-10-22 05:46 pm HK News Desk ದೇಶ - ವಿದೇಶ
ಕಾಸರಗೋಡು, ಅ.21: ಉಪ್ಪಳದ ಬೇಕೂರಿನ ಸರಕಾರಿ ಶಾಲೆಯಲ್ಲಿ ಮಂಜೇಶ್ವರ ಉಪಜಿಲ್ಲಾ ವಿಜ್ಞಾನ ಮೇಳ ನಡೆಯುತ್ತಿದ್ದಾಗ ಹಾಕಿದ್ದ ತಗಡು ಶೀಟಿನ ಚಪ್ಪರ ಕುಸಿದು ಬಿದ್ದ ಘಟನೆ ನಡೆದಿದ್ದು 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದ್ದು, ಊಟದ ಸಮಯದಲ್ಲಿ ಗಾಳಿಗೆ ತಗಡಿನ ಶೀಟು ಹಾಕಿದ್ದ ಚಪ್ಪರ ಕುಸಿದು ಬಿದ್ದಿದೆ ಎನ್ನಲಾಗುತ್ತಿದೆ. ಮುಖ್ಯ ಕಾರ್ಯಕ್ರಮದ ವೇದಿಕೆ ಇರುವಲ್ಲಿಯೇ ಚಪ್ಪರ ಕುಸಿದು ಬಿದ್ದಿದೆ. ಎರಡು ಕಡೆ ಪ್ರತ್ಯೇಕವಾಗಿ ಊಟದ ವ್ಯವಸ್ಥೆ ಮಾಡಿದ್ದರಿಂದ ಕಾರ್ಯಕ್ರಮದ ವೇದಿಕೆಯಲ್ಲಿ ಹೆಚ್ಚು ಮಕ್ಕಳಿರಲಿಲ್ಲ. ಹೆಚ್ಚಿನ ಮಕ್ಕಳು ಊಟಕ್ಕೆ ಹೋಗಿದ್ದರು ಮತ್ತು ಶುಕ್ರವಾರ ಆಗಿದ್ದರಿಂದ ಮುಸ್ಲಿಮ್ ಮಕ್ಕಳು ಮಸೀದಿಗೆ ತೆರಳಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.



ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಸೇರಿಸಿದ್ದಾರೆ. ಅದರಲ್ಲಿ ಒಬ್ಬ ವಿದ್ಯಾರ್ಥಿ ಕೊಡ್ಲಮೊಗರು ವಾಣಿ ವಿಜಯ ಹೈಸ್ಕೂಲಿನ ವಿದ್ಯಾರ್ಥಿಯೆಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಮಕ್ಕಳು, ಶಿಕ್ಷಕಿಯರು ಕೂಡ ಗಾಯಗೊಂಡಿದ್ದಾರೆ. ಹನ್ನೊಂದು ಶಾಲೆಗಳ ಮಕ್ಕಳು ವಿಜ್ಞಾನ ಮೇಳದಲ್ಲಿ ಪಾಲ್ಗೊಂಡಿದ್ದರು. ಇದಕ್ಕಾಗಿ 500ಕ್ಕೂ ಹೆಚ್ಚು ಮಕ್ಕಳು ಕುಳಿತುಕೊಳ್ಳಲು ಸಾಧ್ಯವಾಗುವಂತೆ ಮೈದಾನದಲ್ಲಿ ಬೃಹತ್ ಚಪ್ಪರ ಹಾಕಲಾಗಿತ್ತು. ಕಬ್ಬಿಣದ ಶೀಟಿನ ಚಪ್ಪರ ಆಗಿದ್ದರಿಂದ ಅದಕ್ಕೆ ಸೂಕ್ತ ಭದ್ರತೆ ಮಾಡಿರಲಿಲ್ಲ ಎನ್ನಲಾಗುತ್ತಿದೆ. ಶಾಮಿಯಾನ ಸಿಬಂದಿಯ ಎಡವಟ್ಟಿನಿಂದಾಗಿ ಚಪ್ಪರ ಕುಸಿದು ಬಿದ್ದಿದೆ ಎನ್ನುವುದನ್ನು ಸ್ಥಳೀಯರು ಹೇಳುತ್ತಾರೆ.



ಚಪ್ಪರ ಕುಸಿದು ಬೀಳುತ್ತಲೇ ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಮಕ್ಕಳ ಪೋಷಕರು ಶಾಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಬೆನ್ನಲ್ಲೇ ಕಾಸರಗೋಡು ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದಿದ್ದು, ಪರಿಶೀಲನೆ ನಡೆಸಿದ್ದಾರೆ.
Kasaragod Uppala Government school sheet collapses, more than 20 students injured.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm