ಬ್ರೇಕಿಂಗ್ ನ್ಯೂಸ್
27-10-22 04:20 pm HK News Desk ದೇಶ - ವಿದೇಶ
ಲಕ್ನೋ, ಅ.27: ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಗೆ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಮೂರು ವರ್ಷಗಳ ಜೈಲು ಶಿಕ್ಷೆ ನೀಡಲಾಗಿದೆ. 2019ರಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಐಎಎಸ್ ಅಧಿಕಾರಿ ಆಂಜನೇಯ ಕುಮಾರ್ ಸಿಂಗ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ರಾಮಪುರ್ ಜಿಲ್ಲೆಯ ಜನಪ್ರತಿನಿಧಿಗಳ ನ್ಯಾಯಾಲಯ ಆಜಂ ಖಾನ್ ಗೆ ಶಿಕ್ಷೆ ಪ್ರಕಟಿಸಿದೆ.
ಮಾಜಿ ಸಂಸದ ಆಜಂ ಖಾನ್ ವಿರುದ್ಧ ರಾಮಪುರ್ ಜಿಲ್ಲೆಯ ಮಿಲಾಕ್ ಕೊತ್ವಾಲಿ ಠಾಣೆಯಲ್ಲಿ 153ಎ (ಎರಡು ಗುಂಪುಗಳ ನಡುವೆ ದ್ವೇಷ ಹಬ್ಬಿಸುವುದು), 505-1 (ಜನರಿಗೆ ತಪ್ಪು ಮಾಹಿತಿ ನೀಡುವುದು) ಜೊತೆಗೆ 1951ರ ಜನಪ್ರತಿನಿಥಿ ಕಾಯ್ದೆಯಡಿ 125 ಸೆಕ್ಷನ್ ಪ್ರಕಾರ ಪ್ರಕರಣ ದಾಖಲಿಸಲಾಗಿತ್ತು. ಆಜಂ ಖಾನ್ ವಿರುದ್ಧ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಸ್ಥಳೀಯ ಬಿಜೆಪಿ ಮುಖಂಡ ಮತ್ತು ವಕೀಲನಾಗಿರುವ ಆಕಾಶ್ ಸಕ್ಸೇನಾ, ಜಿಲ್ಲಾಧಿಕಾರಿ ಬಗ್ಗೆ ತಪ್ಪು ಮಾಹಿತಿ ನೀಡುವುದು, ಎರಡು ಸಮುದಾಯಗಳನ್ನು ಎತ್ತಿಕಟ್ಟಿ ದ್ವೇಷ ಹರಡಿಸುವುದು, ಸಿಎಂ ಯೋಗಿ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ್ದಕ್ಕೆ ದೂರು ನೀಡಿದ್ದರು.
ವಿಡಿಯೋ ಸಹಿತ ನೀಡಿದ್ದ ದೂರನ್ನು ಪರಿಗಣಿಸಿದ ಚುನಾವಣಾಧಿಕಾರಿ ಸ್ಥಳೀಯ ಪೊಲೀಸರಿಗೆ ಸ್ವಯಂಪ್ರೇರಿತ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿದ್ದರು. ಮೋಸ, ವಂಚನೆ ಪ್ರಕರಣದಲ್ಲಿ ಆಜಂ ಖಾನ್ ಎರಡು ವರ್ಷ ಸೀತಾಪುರ್ ಜೈಲಿನಲ್ಲಿದ್ದರು. ಕಳೆದ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟಿನಲ್ಲಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದರು. ಭ್ರಷ್ಟಾಚಾರ ಸೇರಿದಂತೆ ಆಜಂ ಖಾನ್ 90ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಮುಲಾಯಂ ಸಿಂಗ್ ಕಾಲದಲ್ಲಿ ಉತ್ತರ ಪ್ರದೇಶದಲ್ಲಿ ಸಚಿವರೂ ಆಗಿದ್ದ ಆಜಂ ಖಾನ್ ಮತ್ತೆ ಜೈಲು ಸೇರಿದ್ದಾರೆ.
Samajwadi Party (SP) leader Azam Khan was on Thursday sentenced to three years in prison in a hate speech case by a special MP/MLA court of Uttar Pradesh’s Rampur. The 2019 case pertains to alleged “provocative remarks" made by Khan against UP Chief Minister Yogi Adityanath and IAS Aunjaneya Kumar Singh, the then DM.The court also imposed a fine of Rs 2,000 on Khan and two others. Khan was, however, granted interim bail by the court.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm