ಬ್ರೇಕಿಂಗ್ ನ್ಯೂಸ್
28-10-22 10:46 pm HK News Desk ದೇಶ - ವಿದೇಶ
ಕೋಝಿಕ್ಕೋಡ್, ಅ.28 : ದೇಶಾದ್ಯಂತ ಕ್ರಾಂತಿ ಎಬ್ಬಿಸಿರುವ ಕಾಂತಾರ ಸಿನಿಮಾದ 'ವರಾಹರೂಪಂ' ಹಾಡಿಗೆ ಕೋಝಿಕ್ಕೋಡ್ ಕೋರ್ಟ್ ತಡೆ ನೀಡಿದೆ. ಕಾಂತಾರ ಚಿತ್ರದಲ್ಲಿ ಮಲಯಾಳಂ ಭಾಷೆಯ 'ನವರಸಂ..' ಹಾಡಿನಿಂದ ಪ್ರೇರಣೆಗೊಂಡು 'ವರಾಹರೂಪಂ' ಹಾಡು ಹೆಣೆಯಲಾಗಿತ್ತು ಎಂಬ ಆರೋಪ ಎದುರಾಗಿತ್ತು.
ಈ ಬಗ್ಗೆ ಮಲಯಾಳಂ ಆಲ್ಬಂ ಸಾಂಗ್ ಮಾಡಿದ್ದ 'ತೈಕ್ಕುಡಂ ಬ್ರಿಡ್ಜ್ ತಂಡ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಕೇರಳದ ಕೋಝಿಕೋಡ್ ನ್ಯಾಯಾಲಯ ವರಾಹ ರೂಪಂ ಹಾಡನ್ನು ಪ್ರಸಾರ ಮಾಡದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ವಿಚಾರವನ್ನು 'ತೈಕ್ಕುಡಂ ಬ್ರಿಡ್ಜ್' ತಂಡವೇ ತನ್ನ ಸೋಶಿಯಲ್ ಮೀಡಿಯಾ ಪೇಜ್ನಲ್ಲಿ ಹಂಚಿಕೊಂಡಿದೆ.
ಕಾಂತಾರಾ ಸಿನಿಮಾದ 'ವರಾಹ ರೂಪಂ' ಟ್ಯೂನ್ ಅನ್ನು 5 ವರ್ಷ ಹಳೆಯ ಮಲಯಾಳಂ ಆಲ್ಬಂ ನಿಂದ ಕದ್ದಿದ್ದಾರೆ ಎಂಬ ಚರ್ಚೆ ಶುರುವಾಗಿತ್ತು. ಹಾಡಿನ ಮೇಲೆ ಕೃತಿಚೌರ್ಯದ ಆರೋಪವೂ ಕೇಳಿಬಂದಿತ್ತು. ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಬಿ. ಲೋಕನಾಥ್ ಅವರು ಮಾತ್ರ ಆ ಹಾಡಿನಿಂದ ಪ್ರೇರಣೆ ಪಡೆದಿದ್ದೆ. ಹಾಗಂತ ಕಾಪಿ ಮಾಡಿಲ್ಲ ಎಂದಿದ್ದರು.
'ಇದು ಕಾಪಿ ಅಲ್ಲ, ಅದರಿಂದ ಸ್ಫೂರ್ತಿ ಪಡೆದು ಹಾಡು ಮಾಡಿದ್ದು. ರಾಗಗಳು ಒಂದೇ ಆಗಿರುವ ಕಾರಣದಿಂದ ಸಾಮ್ಯತೆ ಸಹಜ ಎಂದು ಅಜನೀಶ್ ಸಮಜಾಯಿಷಿ ನೀಡಿದ್ದರು. ಇಷ್ಟು ದಿನ ಸುಮ್ಮನಿದ್ದ 'ತೈಕ್ಕುಡಂ ಬ್ರಿಡ್ಜ್' ತಂಡದವರು ಚಿತ್ರ ದೇಶಾದ್ಯಂತ ಸದ್ದು ಮಾಡಿದ ಬೆನ್ನಲ್ಲೇ ಕೇಸ್ ಹಾಕಲು ನಿರ್ಧರಿಸಿದ್ದರು.
The Kozhikode Sessions Court has issued an injunction barring Kantara makers from playing the “Varaha Roopam” song in theatres and other streaming platforms after receiving a plagiarism complaint from Kerala-based music band, Thaikudam Bridge.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm