ಬ್ರೇಕಿಂಗ್ ನ್ಯೂಸ್
28-10-22 10:46 pm HK News Desk ದೇಶ - ವಿದೇಶ
ಕೋಝಿಕ್ಕೋಡ್, ಅ.28 : ದೇಶಾದ್ಯಂತ ಕ್ರಾಂತಿ ಎಬ್ಬಿಸಿರುವ ಕಾಂತಾರ ಸಿನಿಮಾದ 'ವರಾಹರೂಪಂ' ಹಾಡಿಗೆ ಕೋಝಿಕ್ಕೋಡ್ ಕೋರ್ಟ್ ತಡೆ ನೀಡಿದೆ. ಕಾಂತಾರ ಚಿತ್ರದಲ್ಲಿ ಮಲಯಾಳಂ ಭಾಷೆಯ 'ನವರಸಂ..' ಹಾಡಿನಿಂದ ಪ್ರೇರಣೆಗೊಂಡು 'ವರಾಹರೂಪಂ' ಹಾಡು ಹೆಣೆಯಲಾಗಿತ್ತು ಎಂಬ ಆರೋಪ ಎದುರಾಗಿತ್ತು.
ಈ ಬಗ್ಗೆ ಮಲಯಾಳಂ ಆಲ್ಬಂ ಸಾಂಗ್ ಮಾಡಿದ್ದ 'ತೈಕ್ಕುಡಂ ಬ್ರಿಡ್ಜ್ ತಂಡ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಕೇರಳದ ಕೋಝಿಕೋಡ್ ನ್ಯಾಯಾಲಯ ವರಾಹ ರೂಪಂ ಹಾಡನ್ನು ಪ್ರಸಾರ ಮಾಡದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ವಿಚಾರವನ್ನು 'ತೈಕ್ಕುಡಂ ಬ್ರಿಡ್ಜ್' ತಂಡವೇ ತನ್ನ ಸೋಶಿಯಲ್ ಮೀಡಿಯಾ ಪೇಜ್ನಲ್ಲಿ ಹಂಚಿಕೊಂಡಿದೆ.
ಕಾಂತಾರಾ ಸಿನಿಮಾದ 'ವರಾಹ ರೂಪಂ' ಟ್ಯೂನ್ ಅನ್ನು 5 ವರ್ಷ ಹಳೆಯ ಮಲಯಾಳಂ ಆಲ್ಬಂ ನಿಂದ ಕದ್ದಿದ್ದಾರೆ ಎಂಬ ಚರ್ಚೆ ಶುರುವಾಗಿತ್ತು. ಹಾಡಿನ ಮೇಲೆ ಕೃತಿಚೌರ್ಯದ ಆರೋಪವೂ ಕೇಳಿಬಂದಿತ್ತು. ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಬಿ. ಲೋಕನಾಥ್ ಅವರು ಮಾತ್ರ ಆ ಹಾಡಿನಿಂದ ಪ್ರೇರಣೆ ಪಡೆದಿದ್ದೆ. ಹಾಗಂತ ಕಾಪಿ ಮಾಡಿಲ್ಲ ಎಂದಿದ್ದರು.
'ಇದು ಕಾಪಿ ಅಲ್ಲ, ಅದರಿಂದ ಸ್ಫೂರ್ತಿ ಪಡೆದು ಹಾಡು ಮಾಡಿದ್ದು. ರಾಗಗಳು ಒಂದೇ ಆಗಿರುವ ಕಾರಣದಿಂದ ಸಾಮ್ಯತೆ ಸಹಜ ಎಂದು ಅಜನೀಶ್ ಸಮಜಾಯಿಷಿ ನೀಡಿದ್ದರು. ಇಷ್ಟು ದಿನ ಸುಮ್ಮನಿದ್ದ 'ತೈಕ್ಕುಡಂ ಬ್ರಿಡ್ಜ್' ತಂಡದವರು ಚಿತ್ರ ದೇಶಾದ್ಯಂತ ಸದ್ದು ಮಾಡಿದ ಬೆನ್ನಲ್ಲೇ ಕೇಸ್ ಹಾಕಲು ನಿರ್ಧರಿಸಿದ್ದರು.
The Kozhikode Sessions Court has issued an injunction barring Kantara makers from playing the “Varaha Roopam” song in theatres and other streaming platforms after receiving a plagiarism complaint from Kerala-based music band, Thaikudam Bridge.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm