ಬ್ರೇಕಿಂಗ್ ನ್ಯೂಸ್
29-10-22 09:27 pm HK News Desk ದೇಶ - ವಿದೇಶ
ಹೈದರಾಬಾದ್, ಅ.29: ತೆಲಂಗಾಣದಲ್ಲಿ ಆಡಳಿತಾರೂಢ ಟಿಆರ್ಎಸ್ ಪಕ್ಷದ ನಾಲ್ವರು ಶಾಸಕರನ್ನು ಪಕ್ಷಕ್ಕೆ ಸೆಳೆದುಕೊಳ್ಳಲು ಬಿಜೆಪಿ ಆಪರೇಷನ್ ಮಾಡಲು ಮುಂದಾಗಿದ್ದು ಎರಡು ದಿನಗಳ ಹಿಂದೆ ಬಯಲಾಗಿತ್ತು. ಶಾಸಕರನ್ನು ಖರೀದಿಸಲು ಬಂದಿದ್ದರು ಎನ್ನಲಾದ ಮೂವರನ್ನು 15 ಕೋಟಿ ರೂ. ಹಣದ ಜೊತೆ ಪೊಲೀಸರು ಬಂಧಿಸಿದ್ದರು. ಇದರ ನಡುವೆಯೇ ಪ್ರಕರಣಕ್ಕೆ ಮಹತ್ವದ ತಿರುವು ಲಭಿಸಿದ್ದು ಸ್ವಾಮೀಜಿ ಮತ್ತು ಟಿಆರ್ ಎಸ್ ಶಾಸಕರೊಬ್ಬರ ನಡುವಿನ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಆಡಿಯೋದಲ್ಲಿ ಬಿಜೆಪಿ ಪರವಾಗಿ ಡೀಲಿಂಗ್ ಮಾಡಲು ಮುಂದಾಗಿದ್ದ ಸ್ವಾಮೀಜಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೆಸರು ಪ್ರಸ್ತಾಪಿಸಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಶಾಸಕ ರೋಹಿತ್ ರೆಡ್ಡಿ ಹಾಗೂ ರಾಮಚಂದ್ರ ಭಾರತಿ ಸ್ವಾಮೀಜಿ ಎಂಬವರ ನಡುವಿನ ಸಂಭಾಷಣೆ ಆಡಿಯೋ ಇದಾಗಿದ್ದು, ಬಿ.ಎಲ್ ಸಂತೋಷ್ ಪರವಾಗಿ ಮಾತನಾಡುತ್ತಿದ್ದೇನೆ ಎಂದು ಸ್ವಾಮೀಜಿ ಹೇಳಿಕೊಂಡಿದ್ದಾರೆ. ನೀವು ಬಿಜೆಪಿ ಸೇರಿ. ನಮ್ಮ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಎಲ್ಲವನ್ನು ನೋಡಿಕೊಳ್ಳುತ್ತಾರೆ ಎಂದು ಟಿಆರ್ ಎಸ್ ಶಾಸಕನಿಗೆ ಆಮಿಷ ಒಡ್ಡಿದ್ದಾರೆ.


ಸಂತೋಷ್ ಅವರು ಇಡಿ ಮತ್ತು ಸಿಬಿಐ ದಾಳಿ ಆಗದಂತೆ ನೋಡಿಕೊಳ್ಳುತ್ತಾರೆ. ಇನ್ನಿಬ್ಬರು ಶಾಸಕರು ಬಿಜೆಪಿ ಸೇರಲಿದ್ದಾರೆ. ನವೆಂಬರ್ 2ರಂದು ಹೈದ್ರಾಬಾದ್ ಗೆ ಬರುತ್ತೇನೆ. ಅವರ ಹೆಸರನ್ನು ಅಂದು ಬಹಿರಂಗಪಡಿಸುತ್ತೇನೆ. ಗ್ರಹಣದ ನಂತರ ಭೇಟಿಯಾಗೋಣ ಎಂದು ಸ್ವಾಮೀಜಿ ಸಂಭಾಷಣೆ ವೇಳೆ ಶಾಸಕ ರೋಹಿತ್ ರೆಡ್ಡಿಗೆ ಹೇಳಿದ್ದು, ಇದೀಗ ಅದರ ಆಡಿಯೋ ಲೀಕ್ ಆಗಿದೆ. ಇಡಿ, ಸಿಬಿಐ ದಾಳಿ ಆಗದಂತೆ ನೋಡಿಕೊಳ್ತೀವಿ ಎನ್ನುತ್ತಿರುವುದು ರಾಷ್ಟ್ರ ರಾಜಕಾರಣದಲ್ಲಿ ಬಿಜೆಪಿ ಪಾಲಿಗೆ ಭಾರೀ ಮುಜುಗರ ತಂದಿಟ್ಟಿದೆ.

ಅಕ್ಟೋಬರ್ 26ರಂದು ತೆಲಂಗಾಣದ ಸೈಬರಾಬಾದ್ ಪೊಲೀಸರು ಅಝಿಜ್ ನಗರದ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಬರೋಬ್ಬರಿ 15 ಕೋಟಿ ರೂ. ಹಣವನ್ನು ಸೀಜ್ ಮಾಡಿದ್ದರು. ಅಲ್ಲದೇ ಮೂವರನ್ನು ಬಂಧಿಸಿ, ಆಪರೇಷನ್ ಕಮಲಕ್ಕೆ ಹಣ ತರಲಾಗಿತ್ತು ಎನ್ನುವ ಅಂಶ ಬಯಲಿಗೆ ತಂದಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿ ಟಿಆರ್ಎಸ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಟಿಆರ್ಎಸ್ನ ನಾಲ್ವರು ಶಾಸಕರಿಗೆ ಪಕ್ಷಾಂತರ ಮಾಡಲು ಬಿಜೆಪಿ 100 ಕೋಟಿ ರೂ. ಆಫರ್ ಕೊಟ್ಟಿತ್ತು ಎಂದು ಆರೋಪಿಸಿತ್ತು.
The alleged case of poaching of TRS MLAs by people claiming to be working on behalf of the Bharatiya Janata Party (BJP) raised the political heat, when two audio clips having a conversation between a godman and Tandur MLA P. Rohit Reddy revolving around TRS MLAs defecting to BJP went viral on social media.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm