ಬ್ರೇಕಿಂಗ್ ನ್ಯೂಸ್
30-10-22 09:10 pm HK News Desk ದೇಶ - ವಿದೇಶ
ನವದೆಹಲಿ, ಅ.30 :ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್ ನಗರದಲ್ಲಿ ಹಬ್ಬದ ಆಚರಣೆಗಾಗಿ ಲಕ್ಷಾಂತರ ಜನ ಸೇರಿದ್ದ ವೇಳೆ ಕಾಲ್ತುಳಿತ ಉಂಟಾಗಿದ್ದು 150ಕ್ಕೂ ಹೆಚ್ಚು ಮಂದಿ ಸಾವು ಕಂಡಿದ್ದಾರೆ.
ಸಿಯೋಲ್ನ ಇಟಾವೊನ್ ಎಂಬ ಪ್ರದೇಶದ ಕಿರಿದಾದ ಗಲ್ಲಿಯಲ್ಲಿ ಹ್ಯಾಲೋವೀನ್ ಹಬ್ಬವನ್ನು ಆಚರಿಸಲು ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರು. 20ರ ಆಸುಪಾಸಿನ ಹದಿಹರೆಯದ ಯುವಕರೇ ಹೆಚ್ಚು ಇದ್ದರು. ಶನಿವಾರ ರಾತ್ರಿ ಹಬ್ಬದ ನಡುವಲ್ಲೇ ನೂಕುನುಗ್ಗಲು ಉಂಟಾಗಿದೆ. ಕಿರಿದಾದ ಗಲ್ಲಿಯಲ್ಲಿ ಕಾಲ್ತುಳಿತ ಸಂಭವಿಸಿದ್ದರಿಂದ ಹಲವಾರು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.



ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದವರನ್ನು ಅಗ್ನಿಶಾಮಕ ದಳದವರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅನೇಕರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. ದಕ್ಷಿಣ ಕೊರಿಯಾದಲ್ಲಿ ದಶಕಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಘಟನೆ ಇದಾಗಿದೆ.
ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಸ್ಥಗಿತಗೊಂಡಿದ್ದ ಹ್ಯಾಲೋವೀನ್ ಹಬ್ಬ ಎರಡು ವರ್ಷಗಳ ನಂತರ ಪ್ರಾರಂಭಗೊಂಡಿತ್ತು. ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿ ಜನರು ಜಮಾಯಿಸಿದ್ದರು. ದಕ್ಷಿಣ ಕೊರಿಯಾ ಸರ್ಕಾರ ಇತ್ತೀಚೆಗಷ್ಟೆ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿತ್ತು. ಮೃತರಲ್ಲಿ 19 ಮಂದಿ ವಿದೇಶಿಗರಾಗಿದ್ದು, ಇರಾನ್, ಉಜ್ಬೇಕಿಸ್ತಾನ್, ಚೀನಾ ಮತ್ತು ನಾರ್ವೆ ದೇಶದವರು ಎನ್ನಲಾಗುತ್ತಿದೆ.
At least 151 people were killed and over 100 were injured in a stampede at a prominent market in South Korea's capital Seoul, where a massive crowd had gathered for Halloween.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm