ಬ್ರೇಕಿಂಗ್ ನ್ಯೂಸ್
12-10-20 11:52 am Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 12: ಆ್ಯಸಿಡ್ ಅಟ್ಯಾಕ್ ಸಂತ್ರಸ್ತರಿಗಾಗಿಯೇ ಎನ್ ಜಿಓ ಸಂಘಟನೆಯೊಂದು ಸೂಪರ್ ಮಾರ್ಕೆಟ್ ಆರಂಭಿಸಿದೆ. ಸಹಾಸ್ ಫೌಂಡೇಶನ್ ಎನ್ನುವ ಎನ್ ಜಿಓ ಸಂಸ್ಥೆ ಬಾಂದ್ರಾದಲ್ಲಿ ಸೂಪರ್ ಮಾರ್ಕೆಟ್ ಆರಂಭಿಸಿದ್ದು ಬಿಜೆಪಿ ನಾಯಕಿ ಚಿತ್ರಾ ವಾಘ್ ಮಾರ್ಕೆಟ್ ಉದ್ಘಾಟಿಸಿದ್ದಾರೆ.
ಸ್ವತಃ ಆ್ಯಸಿಡ್ ಸಂತ್ರಸ್ತೆ ಆಗಿರುವ ದೌಲತ್ ಬಿ ಖಾನ್ ಎನ್ನುವ ಮಹಿಳೆ 2016ರಲ್ಲಿ ಸಹಾಸ್ ಫೌಂಡೇಶನ್ ಆರಂಭಿಸಿದ್ದರು. ಆ್ಯಸಿಡ್ ದಾಳಿ ಸಂತ್ರಸ್ತರ ಏಳಿಗೆಗಾಗಿಯೇ ಈ ಸಂಸ್ಥೆ ಸ್ಥಾಪಿಸಲಾಗಿತ್ತು. ಸೂಪರ್ ಮಾರ್ಕೆಟ್ ಮೂಲಕ ಆ್ಯಸಿಡ್ ಸಂತ್ರಸ್ತರು ಕೂಡ ಸಮಾಜದಲ್ಲಿ ಸ್ವಾವಲಂಬಿ ಆಗಿ ಬೆಳೆಯಲು ಅವಕಾಶ ಕಲ್ಪಿಸಲಿದೆ ಎಂದು ದೌಲತ್ ಹೇಳಿದ್ದಾರೆ.


ಕೋವಿಡ್ ಸಮಯದಲ್ಲಿ ಫಂಡ್ ಕಲೆಕ್ಷನ್ ಸಾಧ್ಯವಾಗಲಿಲ್ಲ. ಹೀಗಾಗಿ ಫಂಡಿಂಗ್ ಮಾಡೋರನ್ನು ಮನವೊಲಿಸಿ, ಸಂತ್ರಸ್ತರಿಗೆ ಉದ್ಯೋಗ ನೀಡುವುದಕ್ಕಾಗಿ ಸೂಪರ್ ಮಾರ್ಕೆಟ್ ಆರಂಭಿಸಲು ನಿರ್ಧರಿಸಿದೆವು. ಕೋವಿಡ್ ಸಂದರ್ಭದಲ್ಲಿ ಹೆಚ್ಚು ಅಗತ್ಯವಾಗಿ ಪರಿಣಮಿಸಿದ್ದು ಗ್ರೋಸರಿ ಮತ್ತು ಮೆಡಿಸಿನ್. ಹಾಗಾಗಿ ಹೆಚ್ಚು ಜನರಿಗೆ ಬೇಕಾಗುವ ಸೂಪರ್ ಮಾರ್ಕೆಟ್ ಆರಂಭಿಸಿದೆವು. ಆ್ಯಸಿಡ್ ಸಂತ್ರಸ್ತರು ಇನ್ನೊಬ್ಬರಿಗೆ ಹೊರೆಯಾಗಬಾರದೆಂಬ ಉದ್ದೇಶ ಇದರ ಹಿಂದಿದೆ ಎಂದು ಹೇಳುತ್ತಾರೆ, ಫೌಂಡೇಶನ್ ಸ್ಥಾಪಕಿ ದೌಲತ್.
ನನಗನಿಸುತ್ತೆ, ಇದು ದೇಶದಲ್ಲೇ ಮೊದಲ ಉಪಕ್ರಮ ಎಂದು. ಆ್ಯಸಿಡ್ ಸಂತ್ರಸ್ತರೆಲ್ಲ ಒಂದಾಗಿ ಹಣ ಸಂಗ್ರಹಿಸಿ ಸೂಪರ್ ಮಾರ್ಕೆಟ್ ಸ್ಥಾಪಿಸಿದ್ದಾರೆ. ಈ ಮೂಲಕ ದೇಶಕ್ಕೊಂದು ಸಂದೇಶ ನೀಡಿದ್ದಾರೆ. ದುರಂತಕ್ಕೀಡಾಗಿ ಜೀವನದಲ್ಲಿ ಬೇಸತ್ತವರು ತಮ್ಮ ಕಾಲಲ್ಲಿ ಸ್ವತಃ ನಿಂತುಕೊಳ್ಳುವ ಮೂಲಕ ಹೊಸ ಸಂದೇಶ ನೀಡಿದಂತಾಗಿದೆ ಎಂದು ಬಿಜೆಪಿ ನಾಯಕಿ ಚಿತ್ರಾ ವಾಘ್ ಪ್ರತಿಕ್ರಿಯಿಸಿದ್ದಾರೆ.
A supermarket, which will provide work to acid attack survivors, was inaugurated by BJP Leader Chitra Wagh in Bandra, Mumbai.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm