ಬ್ರೇಕಿಂಗ್ ನ್ಯೂಸ್
12-10-20 11:52 am Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 12: ಆ್ಯಸಿಡ್ ಅಟ್ಯಾಕ್ ಸಂತ್ರಸ್ತರಿಗಾಗಿಯೇ ಎನ್ ಜಿಓ ಸಂಘಟನೆಯೊಂದು ಸೂಪರ್ ಮಾರ್ಕೆಟ್ ಆರಂಭಿಸಿದೆ. ಸಹಾಸ್ ಫೌಂಡೇಶನ್ ಎನ್ನುವ ಎನ್ ಜಿಓ ಸಂಸ್ಥೆ ಬಾಂದ್ರಾದಲ್ಲಿ ಸೂಪರ್ ಮಾರ್ಕೆಟ್ ಆರಂಭಿಸಿದ್ದು ಬಿಜೆಪಿ ನಾಯಕಿ ಚಿತ್ರಾ ವಾಘ್ ಮಾರ್ಕೆಟ್ ಉದ್ಘಾಟಿಸಿದ್ದಾರೆ.
ಸ್ವತಃ ಆ್ಯಸಿಡ್ ಸಂತ್ರಸ್ತೆ ಆಗಿರುವ ದೌಲತ್ ಬಿ ಖಾನ್ ಎನ್ನುವ ಮಹಿಳೆ 2016ರಲ್ಲಿ ಸಹಾಸ್ ಫೌಂಡೇಶನ್ ಆರಂಭಿಸಿದ್ದರು. ಆ್ಯಸಿಡ್ ದಾಳಿ ಸಂತ್ರಸ್ತರ ಏಳಿಗೆಗಾಗಿಯೇ ಈ ಸಂಸ್ಥೆ ಸ್ಥಾಪಿಸಲಾಗಿತ್ತು. ಸೂಪರ್ ಮಾರ್ಕೆಟ್ ಮೂಲಕ ಆ್ಯಸಿಡ್ ಸಂತ್ರಸ್ತರು ಕೂಡ ಸಮಾಜದಲ್ಲಿ ಸ್ವಾವಲಂಬಿ ಆಗಿ ಬೆಳೆಯಲು ಅವಕಾಶ ಕಲ್ಪಿಸಲಿದೆ ಎಂದು ದೌಲತ್ ಹೇಳಿದ್ದಾರೆ.


ಕೋವಿಡ್ ಸಮಯದಲ್ಲಿ ಫಂಡ್ ಕಲೆಕ್ಷನ್ ಸಾಧ್ಯವಾಗಲಿಲ್ಲ. ಹೀಗಾಗಿ ಫಂಡಿಂಗ್ ಮಾಡೋರನ್ನು ಮನವೊಲಿಸಿ, ಸಂತ್ರಸ್ತರಿಗೆ ಉದ್ಯೋಗ ನೀಡುವುದಕ್ಕಾಗಿ ಸೂಪರ್ ಮಾರ್ಕೆಟ್ ಆರಂಭಿಸಲು ನಿರ್ಧರಿಸಿದೆವು. ಕೋವಿಡ್ ಸಂದರ್ಭದಲ್ಲಿ ಹೆಚ್ಚು ಅಗತ್ಯವಾಗಿ ಪರಿಣಮಿಸಿದ್ದು ಗ್ರೋಸರಿ ಮತ್ತು ಮೆಡಿಸಿನ್. ಹಾಗಾಗಿ ಹೆಚ್ಚು ಜನರಿಗೆ ಬೇಕಾಗುವ ಸೂಪರ್ ಮಾರ್ಕೆಟ್ ಆರಂಭಿಸಿದೆವು. ಆ್ಯಸಿಡ್ ಸಂತ್ರಸ್ತರು ಇನ್ನೊಬ್ಬರಿಗೆ ಹೊರೆಯಾಗಬಾರದೆಂಬ ಉದ್ದೇಶ ಇದರ ಹಿಂದಿದೆ ಎಂದು ಹೇಳುತ್ತಾರೆ, ಫೌಂಡೇಶನ್ ಸ್ಥಾಪಕಿ ದೌಲತ್.
ನನಗನಿಸುತ್ತೆ, ಇದು ದೇಶದಲ್ಲೇ ಮೊದಲ ಉಪಕ್ರಮ ಎಂದು. ಆ್ಯಸಿಡ್ ಸಂತ್ರಸ್ತರೆಲ್ಲ ಒಂದಾಗಿ ಹಣ ಸಂಗ್ರಹಿಸಿ ಸೂಪರ್ ಮಾರ್ಕೆಟ್ ಸ್ಥಾಪಿಸಿದ್ದಾರೆ. ಈ ಮೂಲಕ ದೇಶಕ್ಕೊಂದು ಸಂದೇಶ ನೀಡಿದ್ದಾರೆ. ದುರಂತಕ್ಕೀಡಾಗಿ ಜೀವನದಲ್ಲಿ ಬೇಸತ್ತವರು ತಮ್ಮ ಕಾಲಲ್ಲಿ ಸ್ವತಃ ನಿಂತುಕೊಳ್ಳುವ ಮೂಲಕ ಹೊಸ ಸಂದೇಶ ನೀಡಿದಂತಾಗಿದೆ ಎಂದು ಬಿಜೆಪಿ ನಾಯಕಿ ಚಿತ್ರಾ ವಾಘ್ ಪ್ರತಿಕ್ರಿಯಿಸಿದ್ದಾರೆ.
A supermarket, which will provide work to acid attack survivors, was inaugurated by BJP Leader Chitra Wagh in Bandra, Mumbai.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm