ಬ್ರೇಕಿಂಗ್ ನ್ಯೂಸ್
01-11-22 03:04 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.1: ಮೋರ್ಬಿ ತೂಗುಸೇತುವೆ ಕುಸಿದು ಬಿದ್ದಿರುವುದಕ್ಕೆ ಗುಜರಾತ್ ಸರಕಾರದ ಅತಿಯಾದ ಭ್ರಷ್ಟಾಚಾರ ಕಾರಣ. ಸೇತುವೆ ದುರಸ್ತಿ ಬಗ್ಗೆ ಅನುಭವ ಇಲ್ಲದ ಗಡಿಯಾರ ಕಂಪನಿಗೆ ಸೇತುವೆ ದುರಸ್ತಿ ಹೊಣೆ ವಹಿಸಿದ್ದು ಯಾಕೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಗುಜರಾತ್ ಸರಕಾರದ ಭ್ರಷ್ಟಾಚಾರದ ಕಾರಣ ಜನರು ಸಾಯುವ ಸ್ಥಿತಿಯಾಗಿದ್ದು, ಇದರ ನೈತಿಕ ಹೊಣೆ ಹೊತ್ತು ಗುಜರಾತ್ ಸರಕಾರ ವಿಸರ್ಜಿಸಿ, ಮುಖ್ಯಮಂತ್ರಿ ರಾಜಿನಾಮೆ ನೀಡಬೇಕು. ಕೂಡಲೇ ಜನರೆದುರು ಹೋಗಿ ಚುನಾವಣೆ ಎದುರಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಸತ್ತವರ ಜೀವ ಮರಳಿ ಬರುವುದಿಲ್ಲ ; ಠಾಕ್ರೆ
ಗುಜರಾತ್ ಸರಕಾರ ತನ್ನ ಹೊಣೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಸರಕಾರವೇ ಹೊಣೆ ಹೊತ್ತುಕೊಳ್ಳಬೇಕು. ಇವರು ಹೊಣೆ ಜಾರಿಸಿಕೊಂಡ ಮಾತ್ರಕ್ಕೆ ಸತ್ತವರ ಜೀವ ಮರಳಿ ಬರುವುದಿಲ್ಲ ಎಂದು ಶಿವಸೇನಾ ಮುಖಂಡ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ. ಈ ಘಟನೆಯನ್ನು ಮೋಸದ ನಾಟಕ ಎನ್ನಬೇಕೇ, ಸಂಚು ಅಥವಾ ಘೋರ ದುರಂತ ಎನ್ನಬೇಕೇ.. ಸೇತುವೆ ಹೊಣೆ ಹೊತ್ತಿದ್ದ ಕಂಪನಿಯನ್ನು ಹೊಣೆಗಾರನನ್ನಾಗಿಸಿ ತನಿಖೆ ನಡೆಸಬೇಕು. ಹಾಗಂತ, ಗುಜರಾತ್ ಸರಕಾರ ಇದರಿಂದ ದೂರ ಉಳಿಯುವಂತಿಲ್ಲ. ಜನರ ರಕ್ಷಣೆ ಸರಕಾರದ್ದಾಗಿರುತ್ತದೆ ಎಂದು ಸಾಮ್ನಾ ಪತ್ರಿಕೆಯಲ್ಲಿ ಉದ್ಧವ್ ಠಾಕ್ರೆ ಬರೆದಿದ್ದಾರೆ.

ಈ ನಡುವೆ, ಮೋರ್ಬಿ ಸೇತುವೆ ಕುಸಿತ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟಿಗೆ ಪಿಐಎಲ್ ಸಲ್ಲಿಕೆಯಾಗಿದ್ದು, ಮುಖ್ಯ ನ್ಯಾಯಮೂರ್ತಿ ನ.14ರಂದು ವಿಚಾರಣೆಗೆ ಪರಿಗಣಿಸುವುದಾಗಿ ಹೇಳಿದ್ದಾರೆ. ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚನೆ ಮಾಡಬೇಕು ಎಂದು ಅರ್ಜಿಯಲ್ಲಿ ಬೇಡಿಕೆ ಇಡಲಾಗಿದೆ.
Delhi Chief Minister Arvind Kejriwal on Tuesday said the Morbi bridge collapse in Gujarat, which has claimed 135 lives so far, was a result of “massive corruption”. “Why was a watchmaking company which had no experience of bridge construction allowed to do so?” he said during a press conference.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm