ಬ್ರೇಕಿಂಗ್ ನ್ಯೂಸ್
05-11-22 05:56 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.5:ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷವು 5 ಸೀಟನ್ನೂ ಗೆಲ್ಲುವುದಿಲ್ಲ. ಈ ಬಗ್ಗೆ ನಾನು ಬರೆದು ಕೊಡುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಇಂಡಿಯಾ ಡುಡೇಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅರವಿಂದ ಕೇಜ್ರಿವಾಲ್ ಈ ಮಾತು ಹೇಳಿದ್ದಾರೆ. ನಾವು ಕಾಂಗ್ರೆಸನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಅದು ಹೆಚ್ಚೆಂದರೆ ಐದು ಸೀಟಿಗಿಂತ ಕಡಿಮೆ ಗೆಲ್ಲಬಹುದಷ್ಟೇ ಎಂದು ಹೇಳಿದ್ದಾರೆ. ಗುಜರಾತಿನ ಜನರು ಬದಲಾವಣೆ ಬಯಸಿದ್ದಾರೆ. ಜನ ಬದಲಾವಣೆ ಬಯಸದೇ ಇದ್ದರೆ, ನಮಗೆ ಅಲ್ಲಿ ಜಾಗವೇ ಇರುತ್ತಿರಲಿಲ್ಲ. ನಾವು ಗುಜರಾತಿನಲ್ಲಿ 30 ಶೇಕಡಾ ಮತಗಳನ್ನು ಪಡೆಯುತ್ತೇವೆ. ಪಂಜಾಬ್ ಸರಕಾರ ರಚನೆ ಮಾಡಿದ್ದೇವೆ. ಗುಜರಾತಿನಲ್ಲೂ ಏನೋ ಒಂದು ಹೊಸತು ಆಗಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ 5 ಸೀಟಿಗಿಂತ ಹೆಚ್ಚು ಗೆಲ್ಲುವುದಿಲ್ಲ ಅನ್ನುವುದನ್ನು ಕಾಗದದಲ್ಲಿ ಬರೆದುಕೊಡುತ್ತೇನೆ. ನನ್ನ ಮಾತು ದಾಖಲೆ ಆಗಿರುತ್ತದೆ. ನಾವು ಅಲ್ಲಿ ಎರಡನೇ ಸ್ಥಾನದಲ್ಲಿರುತ್ತೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಆದರೆ ಆಪ್ ಎಷ್ಟು ಸ್ಥಾನ ಗೆಲ್ಲುತ್ತದೆ ಅನ್ನುವುದನ್ನು ಖಚಿತವಾಗಿ ಹೇಳಿಲ್ಲ. ಎರಡನೇ ಸ್ಥಾನದಲ್ಲಂತೂ ಪಕ್ಷ ಇರಲಿದೆ ಎಂದಿದ್ದಾರೆ.
ಬಿಜೆಪಿ ಹಿಂದಿಗಿಂತ 20 ಶೇಕಡಾ ಮತಗಳನ್ನು ಕಳಕೊಳ್ಳಲಿದೆ. ನಮ್ಮ ಆಂತರಿಕ ಸರ್ವೇಯಲ್ಲಿ ಮತಗಳು ಆಮ್ ಆದ್ಮಿ ಪಾಲಾಗುವುದು ಕಂಡುಬಂದಿದೆ. ಕಾಂಗ್ರೆಸ್ ಪಾಲಿಗೆ ಮತ ಹೋಗಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ತಯಾರಾಗುತ್ತೀರಾ ಎಂಬ ಪ್ರಶ್ನೆಗೆ, ಲೋಕಸಭೆ ಚುನಾವಣೆಗೆ ಇನ್ನೂ ಕಾಲ ಇದೆ, ಈಗ ಗುಜರಾತ್ ಚುನಾವಣೆ ಎದುರಿಸುತ್ತಿದ್ದೇವೆ ಎಂದಿದ್ದಾರೆ.
The Congress will get fewer than five seats in Gujarat, Delhi chief minister Arvind Kejriwal declared Saturday. Speaking at a media conclave hosted by India Today in the national capital, the AAP boss panned his rival's chances ahead of next month's polls and asked 'who takes the Congress seriously'.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm