ಬ್ರೇಕಿಂಗ್ ನ್ಯೂಸ್
05-11-22 05:56 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.5:ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷವು 5 ಸೀಟನ್ನೂ ಗೆಲ್ಲುವುದಿಲ್ಲ. ಈ ಬಗ್ಗೆ ನಾನು ಬರೆದು ಕೊಡುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಇಂಡಿಯಾ ಡುಡೇಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅರವಿಂದ ಕೇಜ್ರಿವಾಲ್ ಈ ಮಾತು ಹೇಳಿದ್ದಾರೆ. ನಾವು ಕಾಂಗ್ರೆಸನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಅದು ಹೆಚ್ಚೆಂದರೆ ಐದು ಸೀಟಿಗಿಂತ ಕಡಿಮೆ ಗೆಲ್ಲಬಹುದಷ್ಟೇ ಎಂದು ಹೇಳಿದ್ದಾರೆ. ಗುಜರಾತಿನ ಜನರು ಬದಲಾವಣೆ ಬಯಸಿದ್ದಾರೆ. ಜನ ಬದಲಾವಣೆ ಬಯಸದೇ ಇದ್ದರೆ, ನಮಗೆ ಅಲ್ಲಿ ಜಾಗವೇ ಇರುತ್ತಿರಲಿಲ್ಲ. ನಾವು ಗುಜರಾತಿನಲ್ಲಿ 30 ಶೇಕಡಾ ಮತಗಳನ್ನು ಪಡೆಯುತ್ತೇವೆ. ಪಂಜಾಬ್ ಸರಕಾರ ರಚನೆ ಮಾಡಿದ್ದೇವೆ. ಗುಜರಾತಿನಲ್ಲೂ ಏನೋ ಒಂದು ಹೊಸತು ಆಗಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ 5 ಸೀಟಿಗಿಂತ ಹೆಚ್ಚು ಗೆಲ್ಲುವುದಿಲ್ಲ ಅನ್ನುವುದನ್ನು ಕಾಗದದಲ್ಲಿ ಬರೆದುಕೊಡುತ್ತೇನೆ. ನನ್ನ ಮಾತು ದಾಖಲೆ ಆಗಿರುತ್ತದೆ. ನಾವು ಅಲ್ಲಿ ಎರಡನೇ ಸ್ಥಾನದಲ್ಲಿರುತ್ತೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಆದರೆ ಆಪ್ ಎಷ್ಟು ಸ್ಥಾನ ಗೆಲ್ಲುತ್ತದೆ ಅನ್ನುವುದನ್ನು ಖಚಿತವಾಗಿ ಹೇಳಿಲ್ಲ. ಎರಡನೇ ಸ್ಥಾನದಲ್ಲಂತೂ ಪಕ್ಷ ಇರಲಿದೆ ಎಂದಿದ್ದಾರೆ.
ಬಿಜೆಪಿ ಹಿಂದಿಗಿಂತ 20 ಶೇಕಡಾ ಮತಗಳನ್ನು ಕಳಕೊಳ್ಳಲಿದೆ. ನಮ್ಮ ಆಂತರಿಕ ಸರ್ವೇಯಲ್ಲಿ ಮತಗಳು ಆಮ್ ಆದ್ಮಿ ಪಾಲಾಗುವುದು ಕಂಡುಬಂದಿದೆ. ಕಾಂಗ್ರೆಸ್ ಪಾಲಿಗೆ ಮತ ಹೋಗಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ತಯಾರಾಗುತ್ತೀರಾ ಎಂಬ ಪ್ರಶ್ನೆಗೆ, ಲೋಕಸಭೆ ಚುನಾವಣೆಗೆ ಇನ್ನೂ ಕಾಲ ಇದೆ, ಈಗ ಗುಜರಾತ್ ಚುನಾವಣೆ ಎದುರಿಸುತ್ತಿದ್ದೇವೆ ಎಂದಿದ್ದಾರೆ.
The Congress will get fewer than five seats in Gujarat, Delhi chief minister Arvind Kejriwal declared Saturday. Speaking at a media conclave hosted by India Today in the national capital, the AAP boss panned his rival's chances ahead of next month's polls and asked 'who takes the Congress seriously'.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm