ಬ್ರೇಕಿಂಗ್ ನ್ಯೂಸ್
06-11-22 11:43 am HK News Desk ದೇಶ - ವಿದೇಶ
ಅಹ್ಮದಾಬಾದ್, ನ.6: 135 ಜನರ ಸಾವಿಗೆ ಕಾರಣವಾದ ಮೋರ್ಬಿ ಸೇತುವೆ ದುರಂತಕ್ಕೆ ದುರಸ್ತಿ ಕಾರ್ಯ ಕೈಗೊಂಡಿದ್ದ ಅಜಂತಾ ಒರೆವಾ ಕಂಪನಿಯ ಭ್ರಷ್ಟಾಚಾರವೇ ಕಾರಣ ಎನ್ನುವ ಅಂಶ ತನಿಖೆಯಲ್ಲಿ ತಿಳಿದುಬಂದಿದೆ.
ಕಳೆದ ಮಾರ್ಚ್ ತಿಂಗಳಲ್ಲಿ ತೂಗು ಸೇತುವೆಯನ್ನು ಸಾರ್ವಜನಿಕ ಸಂಚಾರ ನಿಷೇಧಿಸಿ ದುರಸ್ತಿ ಕಾರ್ಯ ಕೈಗೊಳ್ಳಲು ಅಜಂತಾ ಒರೆವಾ ಕಂಪನಿಗೆ ವಹಿಸಲಾಗಿತ್ತು. ಆದರೆ ತೂಗು ಸೇತುವೆ ದುರಸ್ತಿ ಅನುಭವ ಹೊಂದಿಲ್ಲದ ಒರೆವಾ ಕಂಪನಿ ಬೇರೊಂದು ಕಂಪನಿಗೆ ಉಪ ಗುತ್ತಿಗೆ ನೀಡಿತ್ತು. ಇದಕ್ಕಾಗಿ ಮೋರ್ಬಿ ನಗರ ಪಾಲಿಕೆಯು ಖಾಸಗಿ ಕಂಪನಿಗೆ ಎರಡು ಕೋಟಿ ರೂಪಾಯಿ ನೀಡಿತ್ತು. ಆದರೆ ಕಂಪನಿಯು ಎರಡು ಕೋಟಿ ಮೊತ್ತದಲ್ಲಿ ಏಳು ತಿಂಗಳ ಅವಧಿಯಲ್ಲಿ ಕೇವಲ 12 ಲಕ್ಷ ರೂಪಾಯಿ ಮೊತ್ತವನ್ನು ಮಾತ್ರ ದುರಸ್ತಿ ಕಾರ್ಯಕ್ಕೆ ವಹಿಸಿತ್ತು. ಅಂದರೆ ಕೇವಲ ಆರು ಶೇಕಡಾ ಮೊತ್ತವನ್ನು ಮಾತ್ರ ವ್ಯಯಿಸಿತ್ತು ಎನ್ನುವ ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಹೀಗಾಗಿ ಓರೆವಾ ಕಂಪನಿಯ ಭ್ರಷ್ಟಾಚಾರದಿಂದಲೇ ತೂಗು ಸೇತುವೆ ಕುಸಿದು ಬೀಳುವಂತಾಗಿದೆ. ಉಪ ಗುತ್ತಿಗೆ ಪಡೆದಿದ್ದ ದೇವಪ್ರಕಾಶ್ ಸೊಲ್ಯುಷನ್ಸ್ ಕಂಪನಿಯಿಂದ ದುರಸ್ತಿ ಕಾರ್ಯಕ್ಕೆ ವ್ಯಯಿಸಿದ್ದ ಮೊತ್ತದ ಕುರಿತು ದಾಖಲೆಗಳನ್ನು ಪೊಲೀಸರು ಪಡೆದಿದ್ದಾರೆ. ಈ ವೇಳೆ, ಕೇವಲ 12 ಲಕ್ಷ ರೂ. ಮೊತ್ತವನ್ನಷ್ಟೇ ಖರ್ಚು ಮಾಡಿರುವುದು ತಿಳಿದುಬಂದಿದೆ. ಹೀಗಿದ್ದರೂ ಗುಜರಾತಿನ ಹೊಸ ವರ್ಷ ಅಕ್ಟೋಬರ್ 24 ಮತ್ತು ದೀಪಾವಳಿ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆಂದು ತರಾತುರಿಯಲ್ಲಿ ಸೇತುವೆಯನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತ ಮಾಡಲಾಗಿತ್ತು. ಆದರೆ ಅತಿಯಾದ ಜನ ದಟ್ಟಣೆಯಿಂದಾಗಿ ಸೇತುವೆ ಕುಸಿದು ಬಿದ್ದಿತ್ತು. ಇದಕ್ಕೆ ಅಜಂತಾ ಒರೆವಾ ಕಂಪನಿಯೇ ಹೊಣೆಯೆಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಳೆದ ಮಾರ್ಚ್ ತಿಂಗಳಲ್ಲಿ ಅಹ್ಮದಾಬಾದ್ ಮೂಲದ ಅಜಂತಾ ಓರೆವಾ ಕಂಪನಿಗೆ ತೂಗು ಸೇತುವೆಯ ನಿರ್ವಹಣಾ ಗುತ್ತಿಗೆಯನ್ನು 15 ವರ್ಷಕ್ಕೆ ನೀಡಲಾಗಿತ್ತು. ಕಂಪನಿಯ ಅಧ್ಯಕ್ಷ ಜಯಸುಖ್ ಪಟೇಲ್ ಈ ಗುತ್ತಿಗೆಯನ್ನು ಪಡೆದಿದ್ದರು. ಮೇಲ್ನೋಟಕ್ಕೆ ತೂಗು ಸೇತುವೆ ಹೆಸರಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದು ಕಂಡುಬಂದಿದ್ದು ಮೋರ್ಬಿ ನಗರ ಪಾಲಿಕೆಯ ಅಧಿಕಾರಿಗಳನ್ನೂ ದುರಂತಕ್ಕೆ ಹೊಣೆ ಮಾಡಲಾಗಿದೆ. ಎರಡು ದಿನಗಳ ಹಿಂದೆ ಮೋರ್ಬಿ ಸೇತುವೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಮೋರ್ಬಿ ಪುರಸಭೆಯ ಮುಖ್ಯಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು.
The shocking collapse of the 143-year-old Morbi suspension footbridge in Gujarat can be termed one of the most tragic events in the recent past. The mishap that occurred on October 30 claimed 135 lives.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm