ಬ್ರೇಕಿಂಗ್ ನ್ಯೂಸ್
12-10-20 05:25 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಚೋಬರ್ 12 : ಭಾರತೀಯ ಜನತಾ ಪಕ್ಷದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ವಿಜಯಾ ರಾಜೇ ಸಿಂಧಿಯಾ ಸ್ಮರಣಾರ್ಥ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 100 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ.
ಗ್ವಾಲಿಯರ್ ನ ರಾಜಮಾತೆ ಎಂದು ಕರೆಸಿಕೊಂಡಿದ್ದ ವಿಜಯ ರಾಜೇ ಸಿಂಧಿಯಾ ಅವರ ಜನ್ಮ ದಿನಾಚರಣೆ ಸ್ಮರಣಾರ್ಥ 100 ರೂಪಾಯಿ ನಾಣ್ಯವನ್ನು ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿದೆ. ಸೋಮವಾರ ನಾಣ್ಯ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ ರಾಜಮಾತೆಯವರ ಸೇವೆಯನ್ನು ಸ್ಮರಿಸಿಕೊಂಡರು.
ರಾಜಮಾತೆಯವರು ಬಡವರ ಆಕಾಂಕ್ಷೆಗಳಿಗೆ ಸ್ಪಂದಿಸುತ್ತಾ ನಿರಂತರ ಸಂಪರ್ಕದಲ್ಲಿ ಇರುತ್ತಿದ್ದರು. ಜನಸೇವೆಗಾಗಿ ತಮ್ಮ ಇಡೀ ಬದುಕನ್ನೇ ಮೀಸಲು ಇರಿಸಿದ್ದರು. ಕಳೆದ ಒಂದು ಶತಮಾನದಲ್ಲಿ ಭಾರತದ ರಾಜಕೀಯ ಇತಿಹಾಸದಲ್ಲಿ ವಿಜಯಾ ರಾಜೆ ಸಿಂಧಿಯಾ ಅವರ ಮಾರ್ಗದರ್ಶನವೂ ಸಾಕಷ್ಟಿದೆ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡರು.
ಸಿಂಧಿಯಾ ಅವರು ದೇಶದ ಭವಿಷ್ಯಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟಿದ್ದರು. ಭವಿಷ್ಯದ ಪೀಳಿಗೆಗೆ ಅನುಕೂಲಕ್ಕಾಗಿ ನಿರಂತರವಾಗಿ ಹೋರಾಟ ನಡೆಸಿದ ಅವರು, ತಮ್ಮ ಸಂತೋಷವನ್ನು ತ್ಯಜಿಸಿದ್ದರು. ಅವರ ಬದುಕಿನ ಶೈಲಿಯು ರಾಷ್ಟ್ರದ ಮೇಲಿನ ಪ್ರೀತಿ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸುವ ಮನೋಧರ್ಮವನ್ನು ಹೇಗೆ ಬೆಳೆಸಿಕೊಳ್ಳಬೇಕು ಎನ್ನುವುದಕ್ಕೆ ನಿದರ್ಶನ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
Prime Minister Narendra Modi today released a memorial 100 rupee coin in the honour of Vijaya Raje Scindia. One of the founder members of BJP, Vijaya Raje Scindia is also popularly known as the Rajmata of Gwalior.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
17-03-25 11:02 pm
Udupi Correspondent
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm