ಬ್ರೇಕಿಂಗ್ ನ್ಯೂಸ್
07-11-22 11:55 am HK News Desk ದೇಶ - ವಿದೇಶ
ನವದೆಹಲಿ, ನ.7 : ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜನರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಕೇಂದ್ರ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ತೀರ್ಪು ಪ್ರಕಟಿಸಿದ್ದು, ಶೇ.10ರಷ್ಟು ಮೀಸಲು ನೀಡುವ ನಿರ್ಧಾರವನ್ನು ಎತ್ತಿಹಿಡಿದಿದೆ.
ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠ ತೀರ್ಪು ಪ್ರಕಟಿಸಿದ್ದು, ಮೂವರು ಮೀಸಲಾತಿ ಪರವಾಗಿ ತೀರ್ಪು ನೀಡಿದ್ದಾರೆ. ಆರ್ಥಿಕ ಮಾನದಂಡಗಳ ಮೇಲಿನ ಮೀಸಲಾತಿ ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುವುದಿಲ್ಲ. ಈ ರೀತಿಯ ಮೀಸಲಾತಿಯಿಂದ ಸಮಾನತೆಯ ಅಂಶ ಉಲ್ಲಂಘನೆಯಾಗುವುದಿಲ್ಲ ಎಂದು ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹೇಳಿದರು.
ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಾಮಾಜಿಕ ಸಮಾನತೆ ತರಲು ಮೇಲ್ವರ್ಗದ ಬಡವರಿಗೂ ಕೇಂದ್ರ ಸರ್ಕಾರ 2019ರಲ್ಲಿ ಶೇ.10ರಷ್ಟು ಮೀಸಲಾತಿ ನೀಡಿ ಕಾಯ್ದೆ ಜಾರಿಗೊಳಿಸಿತ್ತು. ಇದು ಒಟ್ಟು ಮೀಸಲಾತಿಗೆ ಇರುವ 50% ಮಿತಿಗೆ ಹೊರತಾಗಿದೆ. ಇದನ್ನು ಪ್ರಶ್ನಿಸಿ 40ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ್ ಗೆ ಸಲ್ಲಿಕೆಯಾಗಿದ್ದವು. ಸಾಂವಿಧಾನಿಕ ಪೀಠ ಅವುಗಳ ವಿಚಾರಣೆ ನಡೆಸಿದ್ದು ಇದೀಗ ಮಹತ್ವದ ತೀರ್ಪು ನೀಡಿದೆ.
In a crucial judgement on November 7, the Supreme Court validated the 10 per cent quota in colleges and government jobs for the poor or EWS (Economically Weaker Sections), introduced just before the 2019 general elections. The five-judge SC bench delivered this major verdict just a day before Chief Justice India Uday Umesh Lalit retires. As the top court upheld the quota law, Justice Dinesh Maheshwari said, “The EWS quota law doesn’t violate basic structure or equality code for taking into account economic criterion. It doesn’t also cause damage to any essential feature by exceeding 50 per cent ceiling for quota since the ceiling is itself flexible. The quota law has been upheld by the court in a 3-2 verdict.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm