ಬ್ರೇಕಿಂಗ್ ನ್ಯೂಸ್
07-11-22 05:28 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.7: ಮೋರ್ಬಿ ಸೇತುವೆ ದುರಂತದ ಬಗ್ಗೆ ಗುಜರಾತ್ ಸರಕಾರಕ್ಕೆ ನೋಟೀಸ್ ಜಾರಿ ಮಾಡಿರುವ ಹೈಕೋರ್ಟ್, ವಾರದೊಳಗೆ ಘಟನೆ ಬಗ್ಗೆ ವರದಿ ಸಲ್ಲಿಸುವಂತೆ ತಾಕೀತು ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಅರವಿಂದ ಕುಮಾರ್ ಮತ್ತು ಆಶುತೋಷ್ ಶಾಸ್ತ್ರಿ ಅವರಿದ್ದ ನ್ಯಾಯಪೀಠವು, ರಾಜ್ಯದ ಮುಖ್ಯ ಕಾರ್ಯದರ್ಶಿಯಿಂದಲೂ ವರದಿ ಕೇಳಿದೆ. ನಾವು ದುರಂತ ಎದುರುಗೊಂಡು ಹೊಸ ವರ್ಷವನ್ನು ಆಚರಿಸುತ್ತಿರುವುದು ನೋವುಂಟು ಮಾಡಿದೆ. ದುರಂತ ಘಟನೆ ಬಗ್ಗೆ ಒಂದು ವರ್ಷದೊಳಗೆ ಕ್ರಮ ಕೈಗೊಳ್ಳಬೇಕೆಂದು ಬಯಸುತ್ತೇವೆ. ಇದಕ್ಕಾಗಿ ಸರಕಾರದ ಕಡೆಯಿಂದ ಯಾವ ರೀತಿ ಕ್ರಮ ಕೈಗೊಂಡಿದ್ದೀರಿ ಅಥವಾ ಕ್ರಮ ಕೈಗೊಂಡಿಲ್ಲ ಎನ್ನುವ ಬಗ್ಗೆ ತಿಳಿಯಬಯಸುತ್ತೇವೆ ಎಂದು ಹೇಳಿದೆ. ಸರಕಾರದ ಪರ ಹಾಜರಿದ್ದ ವಕೀಲ ಕುಮಾರ್ ತ್ರಿವೇದಿ, ರಾಜ್ಯ ಸರಕಾರದಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದು ನೋಟೀಸಿಗೆ ಉತ್ತರಿಸುವುದಾಗಿ ತಿಳಿಸಿದ್ದಾರೆ.
ಪ್ರಕರಣ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ನ.14ರ ಒಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಸೂಚಿಸಿದೆ. ಅಲ್ಲದೆ, ಘಟನೆ ಬಗ್ಗೆ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿರುವುದಾಗಿ ಹೇಳಿರುವ ನ್ಯಾಯಪೀಠವು, ಇದಕ್ಕೆ ಸಂಬಂಧಿಸಿ ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಗೆ ಸೂಚನೆ ನೀಡಿದೆ. ಪಿಐಎಲ್ ವಿಚಾರಣೆಯನ್ನು ನ.14ರಂದೇ ಕೋರ್ಟ್ ನಡೆಸಲಿದೆ. ಅ.30ರಂದು ಪಶ್ಚಿಮ ಗುಜರಾತಿನ ಮೋರ್ಬಿ ಜಿಲ್ಲೆಯಲ್ಲಿ ಶತಮಾನದಷ್ಟು ಹಳೆಯದಾದ ತೂಗು ಸೇತುವೆಯು ಜನ ದಟ್ಟಣೆಯಿಂದಾಗಿ ಕುಸಿದು ಬಿದ್ದು 135 ಜನರು ಮೃತಪಟ್ಟಿದ್ದರು.
The Gujarat High Court has taken a suo motu cognizance of the Morbi bridge collapse incident, issuing a notice to the state government officials including the Home Department, Urban Housing department, the Morbi Municipality, and the State Human Rights Commission. The high court has sought a report from the state, within a week, on the accident in Morbi that claimed more than 130 lives. Among those who had died were more than 40 children.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm