ಬ್ರೇಕಿಂಗ್ ನ್ಯೂಸ್
12-11-22 09:13 pm HK News Desk ದೇಶ - ವಿದೇಶ
ಮುಂಬೈ, ನ.12: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಟಲಿಜೆನ್ಸ್ ಯುನಿಟ್ ತಡೆದು 6.83 ಲಕ್ಷ ರೂಪಾಯಿ ದಂಡ ಹಾಕಿದೆ. ಏರ್ಪೋರ್ಟ್ನಲ್ಲಿರುವ ವಾಯು ಗುಪ್ತಚರ ಘಟಕದ ಮೂಲಗಳು ಈ ಕುರಿತಾಗಿ ಮಾಹಿತಿಯನ್ನು ನೀಡಿದೆ.
ಶುಕ್ರವಾರ ರಾತ್ರಿ ಶಾರ್ಜಾದಿಂದ ಹೊರಟಿದ್ದ ಶಾರುಖ್ ಖಾನ್ ಶನಿವಾರ ಬೆಳಗಿನ ಜಾವ ಮುಂಬೈಗೆ ತಲುಪಿದ್ದರು ಈ ವೇಳೆ ಅವರು ತಮ್ಮ ಬ್ಯಾಗ್ನ ಕವರ್ನಲ್ಲಿ 18 ಲಕ್ಷ ರೂಪಾಯಿ ಮೊತ್ತದ ದುಬಾರಿ ವಾಚ್ಗಳನ್ನು ಹೊಂದಿದ್ದರು. ಈ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸಿದ ಬಳಿಕ ಶಾರುಖ್ ಖಾನ್ 6.83 ಲಕ್ಷ ರೂಪಾಯಿ ದಂಡವನ್ನು ಕಟ್ಟಿ, ವಾಚ್ಅನ್ನು ತೆಗೆದುಕೊಂಡು ಹೋಗಿದ್ದಾರೆ. ಶುಕ್ರವಾರ ಮಧ್ಯರಾತ್ರಿ 12.30ರ ವೇಳೆಗೆ ಶಾರುಖ್ ಖಾನ್ ವೇಳೆಗೆ ಖಾಸಗಿ ಚಾರ್ಟೆಡ್ ವಿಮಾನದಲ್ಲಿ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಅಂದಾಜು ಮಧ್ಯಾರಾತ್ರಿ 1 ಗಂಟೆಯ ವೇಳೆಗೆ, ಟರ್ಮಿನಲ್-3ಯ ರೆಡ್ ಚಾನೆಲ್ನಿಂದ ಹೊರಬರುವ ವೇಳೆ ಕಸ್ಟಮ್ಸ್ ಅಧಿಕಾರಿಗಳು ಅವರನ್ನು ತಡೆದಿದ್ದಾರೆ. ಅವರ ಬ್ಯಾಗ್ಅನ್ನು ಪರಿಶೀಲನೆ ಮಾಡಿದಾಗ ಬಬುನ್ & ಜುರ್ಬಾಕ್ ವಾಚ್, 6 ಬಾಕ್ಸ್ಗಳ ರೊಲೆಕ್ಸ್ ವಾಚ್, ಸ್ಪಿರಿಟ್ ಬ್ರ್ಯಾಂಡ್ ವಾಚ್, ಆಪಲ್ ಸರಣಿಯ ವಾಚ್ಗಳು ಪತ್ತೆಯಾಗಿದೆ. ಅದರೊಂದಿಗೆ ಕೆಲವೊಂದು ವಾಚ್ಗಳ ಖಾಲಿ ಬಾಕ್ಸ್ಗಳು ಪತ್ತೆಯಾಗಿವೆ.
ದಂಡ ಕಟ್ಟಿದ ಬಾಡಿಗಾರ್ಡ್:
ವಿಮಾನ ನಿಲ್ದಾಣದಲ್ಲಿ ಒಂದು ಗಂಟೆ ಕಾರ್ಯಾಚರಣೆಯ ನಂತರ ಶಾರುಖ್ ಮತ್ತು ಅವರ ಮ್ಯಾನೇಜರ್ ಪೂಜಾ ದದ್ಲಾನಿ ಅವರನ್ನು ಕಸ್ಟಮ್ಸ್ ಬಿಡುಗಡೆ ಮಾಡಿದೆ. ಆದರೆ ಶಾರುಖ್ ಅವರ ಅಂಗರಕ್ಷಕ ರವಿ ಮತ್ತು ತಂಡದ ಇತರ ಸದಸ್ಯರನ್ನು ಪೊಲೀಸರು ತಡೆ ಹಿಡಿದಿದ್ದಾರೆ. ಮಾಹಿತಿ ಪ್ರಕಾರ ಶಾರುಖ್ ಅಂಗರಕ್ಷಕ ರವಿ 6 ಲಕ್ಷ 83 ಸಾವಿರ ರೂಪಾಯಿ ದಂಡ ಪಾವತಿ ಮಾಡಿದ್ದಾರೆ. ಕಸ್ಟಮ್ಸ್ ಪ್ರಕ್ರಿಯೆ ಪೂರ್ಣಗೊಳ್ಳಲು ಶನಿವಾರ ಬೆಳಗಿನ ಜಾವದವರೆಗೆ ಬೇಕಾಯಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಪ್ರಕ್ರಿಯೆ ಮುಗಿದ ಬಳಿಕ ಕಸ್ಟಮ್ಸ್ ಅಧಿಕಾರಿಗಳು ರವಿಯನ್ನು ಬಿಡುಗಡೆ ಮಾಡಿದರು. ದಂಡದ ಮೊತ್ತವನ್ನು ಶಾರುಖ್ ಅವರ ಕ್ರೆಡಿಟ್ ಕಾರ್ಡ್ನಿಂದಲೇ ಪಾವತಿಸಲಾಗಿದೆ ಎಂದು ಹಲವಾರು ವರದಿಗಳಲ್ಲಿ ಹೇಳಲಾಗಿದೆ.
Shah Rukh Khan was one of the guests of honour at the Sharjah Book Fair on Friday, November 11. The Pathaan star his manager Pooja Dadlani, bodyguard Ravi and some others returned from the United Arab Emirates to Mumbai in a private charter plane VTR-SG late on Friday night after attending the event.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm