ಬ್ರೇಕಿಂಗ್ ನ್ಯೂಸ್
13-11-22 05:01 pm HK News Desk ದೇಶ - ವಿದೇಶ
ನವದೆಹಲಿ, ನ.13: ದೆಹಲಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಸಿಕ್ಕಿಲ್ಲವೆಂದು ಆಮ್ ಆದ್ಮಿ ಪಕ್ಷದ ಮಾಜಿ ಕಾರ್ಪೊರೇಟರ್ ಒಬ್ಬ ಹೈಟೆನ್ಶನ್ ವಿದ್ಯುತ್ ತಂತಿ ಹಾದುಹೋಗುವ ಟವರ್ ಏರಿ ಕುಳಿತ ಘಟನೆ ದೆಹಲಿಯಲ್ಲಿ ನಡೆದಿದೆ.
ಹಸೀಬ್ ಉಲ್ ಹಸನ್ ಟವರ್ ಏರಿ ಕುಳಿತ ವ್ಯಕ್ತಿ. ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್ ನಿರಾಕರಿಸಲಾಗಿದೆ. ಅಲ್ಲದೆ, ತನ್ನ ಒರಿಜಿನಲ್ ದಾಖಲೆ ಪ್ರತಿಗಳನ್ನು ತೆಗೆದಿಟ್ಟು ಸ್ವತಂತ್ರ ಸ್ಪರ್ಧೆಗೂ ಅವಕಾಶ ಸಿಗದಂತೆ ಮಾಡಿದ್ದಾರೆ ಎಂದು ಆರೋಪಿಸಿ ಟವರ್ ಏರಿ ಹೈಡ್ರಾಮಾ ನಡೆಸಿದ್ದಾನೆ.
ಅಲ್ಲದೆ, ಆಮ್ ಆದ್ಮಿ ಪಕ್ಷದ ನಾಯಕರಾದ ಆತಿಷಿ, ದುರ್ಗೇಶ್ ಪಾಠಕ್ ಮತ್ತು ಸಂಜಯ್ ಸಿಂಗ್, ತನಗೆ ಟಿಕೆಟ್ ಕೊಡಬೇಕಿದ್ದರೆ ಮೂರು ಕೋಟಿ ರೂಪಾಯಿ ಹಣ ನೀಡಬೇಕೆಂದು ಡಿಮ್ಯಾಂಡ್ ಮಾಡಿದ್ದಾರೆ. ನನ್ನಲ್ಲಿ ಅಷ್ಟು ಕೊಡಲು ಹಣ ಇಲ್ಲ. ನನ್ನ ಬದಲಿಗೆ ದೀಪು ಚೌಧರಿ ಬಳಿ ಮೂರು ಕೋಟಿ ರೂಪಾಯಿ ಹಣ ಪಡೆದು ಟಿಕೆಟ್ ನೀಡಿದ್ದಾರೆ ಎಂದು ಹಸೀಬುಲ್ ಹಸನ್ ಆರೋಪಿಸಿದ್ದಾನೆ.
ಶಾಸ್ತ್ರಿ ಪಾರ್ಕ್ ವೃತ್ತದಲ್ಲಿ ಘಟನೆ ನಡೆದಿದ್ದು, ಪೊಲೀಸರು, ಆಮ್ ಆದ್ಮಿ ಪಕ್ಷದ ಪ್ರತಿನಿಧಿಗಳು ಆಗಮಿಸಿ ಹಸೀಬುಲ್ ನನ್ನು ಮನವೊಲಿಸಿ ಕೆಳಕ್ಕೆ ಇಳಿಸಿದ್ದಾರೆ. ಹೈಟೆನ್ಶನ್ ವಿದ್ಯುತ್ ಹರಿಯುವ ಟವರ್ ಆಗಿದ್ದರಿಂದ ವಿದ್ಯುತ್ ಸಂಪರ್ಕವನ್ನೂ ಕಡಿತ ಮಾಡಲಾಗಿತ್ತು. ಡಿ.4ರಂದು ದೆಹಲಿ ಪಾಲಿಕೆ ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ ಪಕ್ಷದಿಂದ 117 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. 250 ಸದಸ್ಯ ಬಲದಲ್ಲಿ 117 ಸ್ಥಾನದ ಟಿಕೆಟ್ ಫೈನಲ್ ಮಾಡಲಾಗಿದ್ದು, ಶನಿವಾರ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಹಸೀಬುಲ್ ಗೆ ಸ್ಥಾನ ಸಿಗದೇ ಇರುವುದಕ್ಕೆ ಭಾನುವಾರ ಟವರ್ ಏರಿ ಡ್ರಾಮಾ ನಡೆಸಿದ್ದಾನೆ.
Disgruntled over not being given a ticket to the upcoming civic polls, a former councillor of the Aam Aadmi Party (AAP) on Sunday climbed up a transmission tower in Delhi.Former AAP councillor Haseeb-ul-Hasan was reportedly uphappy after he was denied a ticket to the upcoming Municipal Corporation of Delhi (MCD) elections, and climbed a transmission tower Shashtri Park metro station.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm