ಬ್ರೇಕಿಂಗ್ ನ್ಯೂಸ್
13-10-20 04:06 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 13: ರಾಷ್ಟ್ರೀಯ ಕಾಮಧೇನು ಆಯೋಗದ ಅಧ್ಯಕ್ಷ ವಲ್ಲಭಭಾಯಿ ಕಥರಿಯಾ ಗೋವಿನ ಸೆಗಣಿಯಿಂದ ಮಾಡಿದ ಚಿಪ್ ಅನ್ನು ಹೊರತಂದಿದ್ದಾರೆ. ಮೊಬೈಲ್ ಫೋನ್ ಹೊರಸೂಸುವ ವಿಕಿರಣವನ್ನು ಈ ಚಿಪ್ ತಡೆಯಬಲ್ಲದು. ಆಮೂಲಕ ವಿಕಿರಣ ಸಂಬಂಧಿ ರೋಗಗಳನ್ನು ಈ ಚಿಪ್ ನಿವಾರಿಸಲಿದೆ ಎಂದು ಕಥರಿಯಾ ಹೇಳಿದ್ದಾರೆ.
ಕೇಂದ್ರ ಸರಕಾರದ ಮೀನುಗಾರಿಕೆ ಮತ್ತು ಪಶು ಸಂಗೋಪನೆ ಇಲಾಖೆಯಡಿ ಸ್ಥಾಪಿಸಲಾಗಿರುವ ರಾಷ್ಟ್ರೀಯ ಕಾಮಧೇನು ಆಯೋಗದಿಂದ ಈ ಹೊಸ ಮಾದರಿಯ ಚಿಪ್ ಅನ್ನು ಬಿಡುಗಡೆ ಮಾಡಲಾಗಿದೆ. ಸಗಣಿ ಉತ್ಪನ್ನಗಳ ಪ್ರಚಾರಕ್ಕಾಗಿ ಆಯೋಗದ ವತಿಯಿಂದ ಕಾಮಧೇನು ದೀಪಾವಳಿ ಹೆಸರಲ್ಲಿ ರಾಷ್ಟ್ರ ಮಟ್ಟದ ಅಭಿಯಾನ ಹಮ್ಮಿಕೊಂಡಿದ್ದು, ಕಥರಿಯಾ ದೆಹಲಿಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಗೋವಿನ ಸೆಗಣಿ ವಿಕಿರಣ ವಿರೋಧಿಯಾಗಿದ್ದು, ಎಲ್ಲರನ್ನು ಕಾಪಾಡುತ್ತದೆ. ಇದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಈ ಚಿಪ್ ಅನ್ನು ಮೊಬೈಲ್ ಫೋನ್ ಗಳಲ್ಲಿ ಬಳಸಬಹುದು. ಇದರಿಂದ ಮೊಬೈಲ್ ವಿಕಿರಣದಿಂದ ಬರುವ ರೋಗಗಳನ್ನು ನಿಯಂತ್ರಿಸಬಹುದು ಎಂದು ಕಥಿರಿಯಾ ಹೇಳಿದ್ದಾರೆ.
ಹೊಸ ಚಿಪ್ ಗೆ ಗೋಸತ್ವ ಕವಚ ಎಂದು ಹೆಸರಿಡಲಾಗಿದ್ದು ಗುಜರಾತಿನ ರಾಜ್ ಕೋಟ್ ಮೂಲದ ಶ್ರೀಜಿ ಗೋಶಾಲೆಯಲ್ಲಿ ಇದನ್ನು ಆವಿಷ್ಕರಿಸಲಾಗಿದೆ. ಈ ಗೋಶಾಲೆಯನ್ನು ಕಾಮಧೇನು ಆಯೋಗದಿಂದಲೇ 2019ರಲ್ಲಿ ರಚಿಸಲಾಗಿದ್ದು ಗೋವಿನ ಉತ್ಪನ್ನಗಳನ್ನು ಅಭಿವೃದ್ಧಿ ಪಡಿಸಲು ಆರಂಭಿಸಲಾಗಿತ್ತು. ಈ ಬಾರಿಯ ದೀಪಾವಳಿ ಸಂದರ್ಭದಲ್ಲಿ ಆಯೋಗದಿಂದ ಗೋವುಗಳ ಉತ್ಪನ್ನದ ಪ್ರಚಾರಕ್ಕಾಗಿ ರಾಷ್ಟ್ರ ಮಟ್ಟದ ಅಭಿಯಾನ ನಡೆಸಲಾಗುತ್ತಿದೆ. ಇದೇ ವೇಳೆ, ಈ ಬಾರಿಯ ಹಬ್ಬದ ವೇಳೆ ಚೀನಾ ನಿರ್ಮಿತ ಪಟಾಕಿಗಳನ್ನು ಸುಡುವ ಬದಲು ಸ್ವದೇಶಿ ಉತ್ಪನ್ನಗಳನ್ನು ಬಳಸುವಂತೆ ಜನರಿಗೆ ಕಥರಿಯಾ ಕರೆ ನೀಡಿದ್ದಾರೆ.
Rashtriya Kamdhenu Aayog (RKA) chairman Vallabhbhai Kathiria unveiled a ''chip'' made of cow dung and declared that it reduces radiation from mobile handsets and it will be a protection against all diseases.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm