ಬ್ರೇಕಿಂಗ್ ನ್ಯೂಸ್
14-10-20 09:34 am Headline Karnataka News Network ದೇಶ - ವಿದೇಶ
ವಿಶಾಖಪಟ್ಟಣಂ, ಅಕ್ಟೋಬರ್ .14: ಬಂಗಾಳಕೊಲ್ಲಿಯಲ್ಲಿ ಉಂಟಾದ ತೀವ್ರ ವಾಯುಭಾರ ಕುಸಿತದ ಪರಿಣಾಮ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತ ಮಂಗಳವಾರ ಬೆಳಿಗ್ಗೆ ಕಾಕಿನಾಡ ಕರಾವಳಿಯ ಮೂಲಕ ಆಂಧ್ರಪ್ರದೇಶವನ್ನು ದಾಟಿದೆ ಎಂದು ವಿಶಾಖಪಟ್ಟಣಂನ ಚಂಡಮಾರುತ ಎಚ್ಚರಿಕೆ ಕೇಂದ್ರ ಮಾಹಿತಿ ನೀಡಿದೆ.


ಪೂರ್ವ ಗೋದಾವರಿ ಜಿಲ್ಲೆಯ ತುನಿ ಮತ್ತು ವಿಶಾಖಪಟ್ಟಣಂನ ನರಸಿಪಟ್ಟಣಂ ಸಂಪರ್ಕ ರಸ್ತೆಯ ಮೇಲೆ ನದಿ ನೀರು ಉಕ್ಕಿಹರಿದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಪ್ರವಾಹದಲ್ಲಿ ಕೊಚ್ಚಿಹೋಗಿದೆ. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಕಾರಿನಲ್ಲಿದ್ದ ದಂಪತಿಯನ್ನು ರಕ್ಷಿಸಿದರೂ, ಜತೆಗಿದ್ದ ಹಿರಿಯ ಮಹಿಳೆ ನೀರಿನಲ್ಲಿ ಮುಳುಗಿ ಮೃತಪಟ್ಟರು. ಸೋಮವಾರ ರಾತ್ರಿ ವಿಶಾಖಪಟ್ಟಣಂನಲ್ಲಿ ಕಲ್ಲು ಬಂಡೆಯೊಂದು ಮನೆಯ ಮೇಲೆ ಉರುಳಿಬಿದ್ದು 3 ವರ್ಷದ ಮಗು ಮತ್ತು ಮಗುವಿನ ತಾಯಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಮಧ್ಯೆ, ವಿಶಾಖಪಟ್ಟಣಂ ಬಂದರಿನಲ್ಲಿ ಲಂಗರು ಹಾಕಲು ಸಜ್ಜಾಗಿದ್ದ ‘ಮಾ ಆಫ್ ಬಾಂಗ್ಲಾದೇಶ್’ ಎಂಬ ಹೆಸರಿನ ಹಡಗು ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಸಿಲುಕಿ ಉತ್ತರದತ್ತ ಚಲಿಸಿ ಬೀಚ್ ರಸ್ತೆಯ ತೆನ್ನೆಟಿ ಪಾರ್ಕ್ನ ಬಳಿ ದಡ ಸೇರಿದೆ. ಮಂಗಳವಾರ ಬೆಳಗ್ಗಿನವರೆಗಿನ 24 ಗಂಟೆಗಳ ಅವಧಿಯಲ್ಲಿ ಯನಾಮ್ನಲ್ಲಿ 25 ಸೆ.ಮೀ ಮಳೆಯಾಗಿದ್ದರೆ, ಅಮಲಾಪುರಂನಲ್ಲಿ 18 ಸೆ.ಮೀ, ತಡೆಪಲ್ಲೆಗುಡ್ಡಂ ಮತ್ತು ನುವಿಡ್ನಲ್ಲಿ ತಲಾ 18 ಸೆ.ಮೀ, ವಿಶಾಖಪಟ್ಟಣಂನಲ್ಲಿ 8 ಸೆ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.
48 ಗಂಟೆಗಳ ಕಾಲ ಸುರಿದ ನಿರಂತರ ಮಳೆಯಲ್ಲಿ ಆಂಧ್ರ ಪ್ರದೇಶ ಮೂಲದ ಮೂವರು ಹಾಗೂ ತೆಲಂಗಾಣ ಮೂಲದ ಮೂವರು ಮೃತಪಟ್ಟಿದ್ದಾರೆ.
At least six people have died, three in Andhra Pradesh and three in Telangana after continuous rain in the last 48 hours.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm