ಬ್ರೇಕಿಂಗ್ ನ್ಯೂಸ್
24-11-22 06:42 pm HK News Desk ದೇಶ - ವಿದೇಶ
ಹೈದರಾಬಾದ್, ನ.24 : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಿಗೆ ಅಪರಾಧ ಪ್ರಕ್ರಿಯೆಗಳ ಸಂಹಿತೆ(ಸಿಆರ್ ಪಿಸಿ) ಸೆಕ್ಷನ್ 41ಎ ಅಡಿಯಲ್ಲಿ ಹೊಸತಾಗಿ ನೋಟಿಸ್ ನೀಡುವಂತೆ ತೆಲಂಗಾಣದ ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್ ಗುರುವಾರ ಆದೇಶ ಮಾಡಿದೆ.
ಈ ಕುರಿತ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವಿಜಯಸೇನ್ ರೆಡ್ಡಿ ನೇತೃತ್ವದ ಏಕಸದಸ್ಯ ಪೀಠ, ಅಡ್ವೊಕೇಟ್ ಜನರಲ್(ಎಜಿ) ಬಿ.ಎಸ್ ಪ್ರಸಾದ್ ಅವರಿಗೆ ಈ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ. ಪ್ರಸಾದ್ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್(ಎಎಜಿ) ಜೆ ರಾಮಚಂದರ್ ರಾವ್ ನ್ಯಾಯಾಲಯಕ್ಕೆ ಹಾಜರಾಗಿದ್ದು ಎಸ್ಐಟಿ ಮತ್ತು ದೆಹಲಿ ಪೊಲೀಸರ ಪ್ರಯತ್ನಗಳ ಹೊರತಾಗಿಯೂ ಸಂತೋಷ್ ವಿಚಾರಣೆಗೆ ಹಾಜರಾಗಲಿಲ್ಲ ಎಂದು ತಿಳಿಸಿದರು. ನವೆಂಬರ್ 20 ರಂದು ನವದೆಹಲಿಯ ಬಿಜೆಪಿ ಕಚೇರಿಗೆ ಸಮನ್ಸ್ ತಲುಪಿಸಲಾಗಿದೆ. ಆದರೂ ಆರೋಪಿ ಸಂತೋಷ್ ವಿಚಾರಣೆಗೆ ಹಾಜರಾಗಿಲ್ಲ. ವಿಚಾರಣೆಯಲ್ಲಿ ಪ್ರಮುಖ ಅಂಶವಾಗಿರುವ ಇಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಅಳಿಸಿ ಹಾಕಲು ಸಂತೋಷ್ ಉದ್ದೇಶಪೂರ್ವಕವಾಗಿ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ವಿಳಂಬ ಮಾಡುತ್ತಿದ್ದಾರೆ ಎಂದು ಅಟೋರ್ನಿ ಜನರಲ್ ವಾದಿಸಿದರು.
![]()
ಸಂತೋಷ್ ಅವರು ತಮ್ಮ ಮೊಬೈಲ್ ಸಾಧನದಿಂದ ಡೇಟಾವನ್ನು ಅಳಿಸಿದರೆ ಮತ್ತು ಮಹತ್ವದ ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ ನಂತರ ಎಸ್ಐಟಿ ಮುಂದೆ ಹಾಜರಾಗುವುದು ನಿಷ್ಪ್ರಯೋಜಕವಾಗಲಿದೆ ಎಂದು ಎಎಜಿ ರಾವ್ ಕೋರ್ಟ್ ಗಮನಕ್ಕೆ ತಂದರು. ಈಗಾಗಲೇ ನ.21ರಂದು ವಿಚಾರಣೆಗೆ ಹಾಜರಾಗದೇ ಇರುವುದರಿಂದ ಎಸ್ಐಟಿ ತಂಡ ಸಂತೋಷ್ ಗೆ ಸಮನ್ಸ್ ಜಾರಿ ಮಾಡಿತ್ತು. ದೆಹಲಿ ಬಿಜೆಪಿ ಕಚೇರಿಗೆ ಸಮನ್ಸ್ ನೋಟಿಸ್ ನೀಡಲಾಗಿತ್ತು.
BJP general secretary (Organisation) B L Santhosh has been caught in the midst of a political battle between his party and the Telengana Rashtriya Samithy (TRS) led by Telengana chief minister K Chandrashekhar Rao.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm