ಬ್ರೇಕಿಂಗ್ ನ್ಯೂಸ್
14-10-20 12:40 pm Headline Karnataka News Network ದೇಶ - ವಿದೇಶ
ಚೆನ್ನೈ , ಅಕ್ಟೋಬರ್ .14: ತಮಿಳು ಸ್ಟಾರ್ ನಟ ಧನುಷ್ ಹಾಗೂ ಹಿರಿಯ ನಟ, ರಾಜಕಾರಣಿ ವಿಜಯಕಾಂತ್ ನಿವಾಸಕ್ಕೆ ಕಿಡಿಗೇಡಿಗಳು ಬಾಂಬ್ ಹಾಕುವ ಬೆದರಿಕೆ ಒಡ್ಡಿದ್ದಾರೆ.
ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಇಬ್ಬರ ಮನೆಗಳಿಗೂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಶೀಲನೆ ವೇಳೆ ಮನೆಯಲ್ಲಿ ಸಂಶಯಿತ ವಸ್ತು ಯಾವುದೂ ಸಿಗಲಿಲ್ಲ. ಹೀಗಾಗಿ ಇದೊಂದು ಸುಳ್ಳು ಬೆದರಿಕೆ ಆಗಿರಬಹುದು ಎನ್ನಲಾಗುತ್ತಿದೆ.
ನಟ ಧನುಷ್ ಅವರ ಚೆನ್ನೈನಲ್ಲಿರುವ ಅಭಿರಾಮಪುರಂ ನಿವಾಸ ಹಾಗೂ ವಿಜಯಕಾಂತ್ ಅವರ ವಿರುಗಂಬಕ್ಕಂನ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಎರಡು ಬಾರಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಬಂದಿತ್ತು. ಕೂಡಲೇ ಎಚ್ಚೆತ್ತ ಪೊಲೀಸರು, ಇಬ್ಬರ ನಿವಾಸಗಳಿಗೂ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಈ ಕರೆ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಕಾರ್ಯಾಚರಣೆ ನಡೆಸಿದ ಬಳಿಕ ಎರಡೂ ಕರೆಗಳನ್ನು ಒಬ್ಬನೇ ಮಾಡಿರುವುದಾಗಿ ತಿಳಿದುಬಂದಿದೆ. ಘಟನೆಯ ಬಳಿಕ ವ್ಯಕ್ತಿಯ ಬಗ್ಗೆ ಪೊಲೀಸರು ತಪಾಸಣೆ ನಡೆಸಿದ್ದಾರೆ. ಆತನ ಬಗ್ಗೆ ಮಾಹಿತಿ ಗೊತ್ತಾಗಿದ್ದು ತಲೆಮರೆಸಿಕೊಂಡಿದ್ದಾನೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ಎರಡು ತಿಂಗಳಿಂದ ಕಾಲಿವುಡ್ ನಟರಿಗೆ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿದೆ. ಈ ಮೊದಲು ರಜನಿಕಾಂತ್, ವಿಜಯ್ ಮತ್ತು ಸೂರ್ಯ ಅವರಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಆದರೆ ಈ ಕರೆಗಳನ್ನು ಮಾನಸಿಕ ಅಸ್ವಸ್ಥ ವ್ಯಕ್ತಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.
ಜುಲೈ 18ರಂದು ನಟ ಅಜಿತ್ ಮನೆಯಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿತ್ತು. ಬಳಿಕ ಬಾಂಬ್ ಸ್ಕ್ವಾಡ್ ಅಧಿಕಾರಿಗಳು ಇಡೀ ಮನೆಯನ್ನು ಜಾಲಾಡಿದ್ದರೂ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಇದು ಸುಳ್ಳು ಕರೆ ಎಂದಿದ್ದರು.
Bomb threats were issued to Tamil stars Dhanush and Vijayakanth's residences in Chennai. The police officials immediately searched their houses and found it be a hoax.
02-09-25 08:00 pm
Bangalore Correspondent
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
Man sets woman on fire, Bangalore: ತನ್ನನ್ನು ಬ...
01-09-25 10:53 pm
Karnataka Police, Warning to Social Media Use...
01-09-25 06:59 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 04:44 pm
Mangalore Correspondent
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm