ಬ್ರೇಕಿಂಗ್ ನ್ಯೂಸ್
14-10-20 12:40 pm Headline Karnataka News Network ದೇಶ - ವಿದೇಶ
ಚೆನ್ನೈ , ಅಕ್ಟೋಬರ್ .14: ತಮಿಳು ಸ್ಟಾರ್ ನಟ ಧನುಷ್ ಹಾಗೂ ಹಿರಿಯ ನಟ, ರಾಜಕಾರಣಿ ವಿಜಯಕಾಂತ್ ನಿವಾಸಕ್ಕೆ ಕಿಡಿಗೇಡಿಗಳು ಬಾಂಬ್ ಹಾಕುವ ಬೆದರಿಕೆ ಒಡ್ಡಿದ್ದಾರೆ.
ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಇಬ್ಬರ ಮನೆಗಳಿಗೂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಶೀಲನೆ ವೇಳೆ ಮನೆಯಲ್ಲಿ ಸಂಶಯಿತ ವಸ್ತು ಯಾವುದೂ ಸಿಗಲಿಲ್ಲ. ಹೀಗಾಗಿ ಇದೊಂದು ಸುಳ್ಳು ಬೆದರಿಕೆ ಆಗಿರಬಹುದು ಎನ್ನಲಾಗುತ್ತಿದೆ.
ನಟ ಧನುಷ್ ಅವರ ಚೆನ್ನೈನಲ್ಲಿರುವ ಅಭಿರಾಮಪುರಂ ನಿವಾಸ ಹಾಗೂ ವಿಜಯಕಾಂತ್ ಅವರ ವಿರುಗಂಬಕ್ಕಂನ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಎರಡು ಬಾರಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಬಂದಿತ್ತು. ಕೂಡಲೇ ಎಚ್ಚೆತ್ತ ಪೊಲೀಸರು, ಇಬ್ಬರ ನಿವಾಸಗಳಿಗೂ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಈ ಕರೆ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಕಾರ್ಯಾಚರಣೆ ನಡೆಸಿದ ಬಳಿಕ ಎರಡೂ ಕರೆಗಳನ್ನು ಒಬ್ಬನೇ ಮಾಡಿರುವುದಾಗಿ ತಿಳಿದುಬಂದಿದೆ. ಘಟನೆಯ ಬಳಿಕ ವ್ಯಕ್ತಿಯ ಬಗ್ಗೆ ಪೊಲೀಸರು ತಪಾಸಣೆ ನಡೆಸಿದ್ದಾರೆ. ಆತನ ಬಗ್ಗೆ ಮಾಹಿತಿ ಗೊತ್ತಾಗಿದ್ದು ತಲೆಮರೆಸಿಕೊಂಡಿದ್ದಾನೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ಎರಡು ತಿಂಗಳಿಂದ ಕಾಲಿವುಡ್ ನಟರಿಗೆ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿದೆ. ಈ ಮೊದಲು ರಜನಿಕಾಂತ್, ವಿಜಯ್ ಮತ್ತು ಸೂರ್ಯ ಅವರಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಆದರೆ ಈ ಕರೆಗಳನ್ನು ಮಾನಸಿಕ ಅಸ್ವಸ್ಥ ವ್ಯಕ್ತಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.
ಜುಲೈ 18ರಂದು ನಟ ಅಜಿತ್ ಮನೆಯಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿತ್ತು. ಬಳಿಕ ಬಾಂಬ್ ಸ್ಕ್ವಾಡ್ ಅಧಿಕಾರಿಗಳು ಇಡೀ ಮನೆಯನ್ನು ಜಾಲಾಡಿದ್ದರೂ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಇದು ಸುಳ್ಳು ಕರೆ ಎಂದಿದ್ದರು.
Bomb threats were issued to Tamil stars Dhanush and Vijayakanth's residences in Chennai. The police officials immediately searched their houses and found it be a hoax.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm