ಬ್ರೇಕಿಂಗ್ ನ್ಯೂಸ್
14-10-20 12:40 pm Headline Karnataka News Network ದೇಶ - ವಿದೇಶ
ಚೆನ್ನೈ , ಅಕ್ಟೋಬರ್ .14: ತಮಿಳು ಸ್ಟಾರ್ ನಟ ಧನುಷ್ ಹಾಗೂ ಹಿರಿಯ ನಟ, ರಾಜಕಾರಣಿ ವಿಜಯಕಾಂತ್ ನಿವಾಸಕ್ಕೆ ಕಿಡಿಗೇಡಿಗಳು ಬಾಂಬ್ ಹಾಕುವ ಬೆದರಿಕೆ ಒಡ್ಡಿದ್ದಾರೆ.
ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಇಬ್ಬರ ಮನೆಗಳಿಗೂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಶೀಲನೆ ವೇಳೆ ಮನೆಯಲ್ಲಿ ಸಂಶಯಿತ ವಸ್ತು ಯಾವುದೂ ಸಿಗಲಿಲ್ಲ. ಹೀಗಾಗಿ ಇದೊಂದು ಸುಳ್ಳು ಬೆದರಿಕೆ ಆಗಿರಬಹುದು ಎನ್ನಲಾಗುತ್ತಿದೆ.
ನಟ ಧನುಷ್ ಅವರ ಚೆನ್ನೈನಲ್ಲಿರುವ ಅಭಿರಾಮಪುರಂ ನಿವಾಸ ಹಾಗೂ ವಿಜಯಕಾಂತ್ ಅವರ ವಿರುಗಂಬಕ್ಕಂನ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಎರಡು ಬಾರಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಬಂದಿತ್ತು. ಕೂಡಲೇ ಎಚ್ಚೆತ್ತ ಪೊಲೀಸರು, ಇಬ್ಬರ ನಿವಾಸಗಳಿಗೂ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಈ ಕರೆ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಕಾರ್ಯಾಚರಣೆ ನಡೆಸಿದ ಬಳಿಕ ಎರಡೂ ಕರೆಗಳನ್ನು ಒಬ್ಬನೇ ಮಾಡಿರುವುದಾಗಿ ತಿಳಿದುಬಂದಿದೆ. ಘಟನೆಯ ಬಳಿಕ ವ್ಯಕ್ತಿಯ ಬಗ್ಗೆ ಪೊಲೀಸರು ತಪಾಸಣೆ ನಡೆಸಿದ್ದಾರೆ. ಆತನ ಬಗ್ಗೆ ಮಾಹಿತಿ ಗೊತ್ತಾಗಿದ್ದು ತಲೆಮರೆಸಿಕೊಂಡಿದ್ದಾನೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ಎರಡು ತಿಂಗಳಿಂದ ಕಾಲಿವುಡ್ ನಟರಿಗೆ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿದೆ. ಈ ಮೊದಲು ರಜನಿಕಾಂತ್, ವಿಜಯ್ ಮತ್ತು ಸೂರ್ಯ ಅವರಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಆದರೆ ಈ ಕರೆಗಳನ್ನು ಮಾನಸಿಕ ಅಸ್ವಸ್ಥ ವ್ಯಕ್ತಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.
ಜುಲೈ 18ರಂದು ನಟ ಅಜಿತ್ ಮನೆಯಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿತ್ತು. ಬಳಿಕ ಬಾಂಬ್ ಸ್ಕ್ವಾಡ್ ಅಧಿಕಾರಿಗಳು ಇಡೀ ಮನೆಯನ್ನು ಜಾಲಾಡಿದ್ದರೂ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಇದು ಸುಳ್ಳು ಕರೆ ಎಂದಿದ್ದರು.
Bomb threats were issued to Tamil stars Dhanush and Vijayakanth's residences in Chennai. The police officials immediately searched their houses and found it be a hoax.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm