ಬ್ರೇಕಿಂಗ್ ನ್ಯೂಸ್
03-12-22 02:03 pm HK News Desk ದೇಶ - ವಿದೇಶ
ನವದೆಹಲಿ, ಡಿ.3: ಹಿಂದೂಗಳು ಮುಸ್ಲಿಂ ಸೂತ್ರವನ್ನು ಅಳವಡಿಸಿಕೊಳ್ಳಬೇಕು. ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಮದುವೆ ಮಾಡಬೇಕು. ಮುಸ್ಲಿಂ ಜನಸಂಖ್ಯೆ ಹೆಚ್ಚುತ್ತಿದೆ ಎಂದು ಗೊಣಗಿದರೆ ಪ್ರಯೋಜನ ಇಲ್ಲ ಎಂದು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ಹಿಂದುಗಳಿಗೆ ಬುದ್ಧಿಮಾತು ಹೇಳಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಮುಸ್ಲಿಂ ಪುರುಷರು 20 ರಿಂದ 22ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಮುಸ್ಲಿಂ ಮಹಿಳೆಯರು ಸಹ ಸರ್ಕಾರದ ಅನುಮತಿ ಮೇರೆಗೆ 18ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಆದರೆ, ಹಿಂದೂಗಳು ಮದುವೆಗೆ ಮುನ್ನ ಒಬ್ಬೊಬ್ಬರು ಎರಡು ಅಥವಾ ಮೂರು ಅಕ್ರಮ ಸಂಬಂಧಗಳನ್ನು ಇಟ್ಟುಕೊಳ್ಳುತ್ತಾರೆ.
ಅವರು ಮಕ್ಕಳನ್ನು ಹೆರುವುದಿಲ್ಲ, ಜೀವನವನ್ನು ಆನಂದಿಸಿ ಹಣ ಉಳಿಸುತ್ತಾರೆ ಅಷ್ಟೇ ಎಂದು ಬದ್ರುದ್ದೀನ್ ಹೇಳಿದ್ದಾರೆ. ಮುಸ್ಲಿಂ ಜನಸಂಖ್ಯೆ ಹೆಚ್ಚುತ್ತಿದೆ ಎಂಬುದರ ಬಗ್ಗೆ ಮಾತನಾಡಿದ ಅಜ್ಮಲ್ ಅವರು, 40 ವರ್ಷ ವಯಸ್ಸಿನ ನಂತರ ಹಿಂದೂಗಳು ಪೋಷಕರ ಒತ್ತಡದಲ್ಲಿ ಮದುವೆಯಾಗುತ್ತಾರೆ. ಹಾಗಾದರೆ, ಅವರು 40ರ ನಂತರ ಮಕ್ಕಳನ್ನು ಹೆರುತ್ತಾರೆ ಎಂದು ನೀವು ಹೇಗೆ ನಿರೀಕ್ಷಿಸುತ್ತೀರಿ? ಫಲವತ್ತಾದ ಭೂಮಿಯಲ್ಲಿ ಬಿತ್ತನೆ ಮಾಡಿದರೆ ಮಾತ್ರ ಉತ್ತಮ ಬೆಳೆಗಳನ್ನು ಬೆಳೆಯಲು ಸಾಧ್ಯ.
ಆದ್ದರಿಂದ ಹಿಂದೂಗಳು ಮುಸ್ಲಿಮರ ಸೂತ್ರವನ್ನು ಅನುಸರಿಸಬೇಕು. ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ಮದುವೆ ಮಾಡಬೇಕು. 20-22ನೇ ವಯಸ್ಸಿನಲ್ಲಿ ಮದುವೆ ಮಾಡಬೇಕು. 18-20 ವರ್ಷಕ್ಕೆ ಹುಡುಗಿಯರ ಮದುವೆಯಾಗಬೇಕು. ಇದು ಬಿಟ್ಟು ಮುಸ್ಲಿಂ ಜನಸಂಖ್ಯೆ ಹೆಚ್ಚುತ್ತಿದೆ ಎಂದು ಗೊಣಗಿದರೇನು ಫಲ ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಅವರ ಲವ್ ಜಿಹಾದ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಅಸ್ಸಾಂ ಸಿಎಂ ದೇಶದ ಅಗ್ರಮಾನ್ಯ ನಾಯಕರಲ್ಲಿ ಒಬ್ಬರು. ಆದರೆ, ಅವರನ್ನ ತಡೆಯೋರು ಯಾರು. ನೀವು ಬೇಕಿದ್ದರೆ, ನಾಲ್ಕೈದು ಲವ್ ಜಿಹಾದ್ ನಡೆಸಿ, ನಮ್ಮ ಮುಸ್ಲಿಂ ಹೆಣ್ಣು ಮಕ್ಕಳನ್ನು ಕರೆದುಕೊಂಡು ಹೋಗಿ, ನಾವು ಅದನ್ನ ಸ್ವಾಗತ ಮಾಡುತ್ತೇವೆಯೇ ಹೊರತು ಜಗಳವಾಡುವುದಿಲ್ಲ. ಹಾಗೆ ಮಾಡಿದರೆ ನಿಮ್ಮಲ್ಲೂ ಎಷ್ಟು ಶಕ್ತಿಯಿದೆ ಎಂದು ನೋಡಬಹುದು ಎಂದು ಲೇವಡಿ ಮಾಡಿದ್ದಾರೆ. ಇತ್ತೀಚೆಗೆ ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ಲವ್ ಜಿಹಾದ್ ಅಂಶ ಉಲ್ಲೇಖಿಸಿದ್ದ ಅಸ್ಸಾಂ ಸಿಎಂ ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಹಾಗೂ ಲವ್ ಜಿಹಾದ್ ವಿರುದ್ಧ ಕಾನೂನು ಅಗತ್ಯವಿದೆ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದರು.
"Muslim men marry at the age of 20-22, and Muslim women also marry at 18 after the permissible age by the government. On the other hand, (Hindus) keep one two or three illegal wives before marriage, they don't give birth to babies, enjoy themselves and save money...," the AIDUF chief said.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm