ಬ್ರೇಕಿಂಗ್ ನ್ಯೂಸ್
08-12-22 01:27 pm HK News Desk ದೇಶ - ವಿದೇಶ
ಅಹ್ಮದಾಬಾದ್, ಡಿ.8: ಗುಜರಾತಿನಲ್ಲಿ ಮೋದಿ ಮ್ಯಾಜಿಕ್ ಗೆದ್ದುಕೊಂಡಿದೆ. ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಯಾರೂ ಊಹಿಸದ ರೀತಿ ಜಯಭೇರಿ ಸಾಧಿಸಿದ್ದು ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಸತತ ಏಳನೇ ಬಾರಿ ಗುಜರಾತಿನಲ್ಲಿ ಕೇಸರಿ ಪಾಳಯ ಅಧಿಕಾರದ ಗದ್ದುಗೆ ಹಿಡಿದಿದೆ.
182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ 12.30ರ ವರೆಗಿನ ಫಲಿತಾಂಶದಲ್ಲಿ ಬಿಜೆಪಿ 153 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದ್ದು ಎದುರಾಳಿ ಕಾಂಗ್ರೆಸ್, ಆಮ್ ಆದ್ಮಿ ಪಕ್ಷವನ್ನು ಹೀನಾಯವಾಗಿ ಸೋಲಿಸಿದೆ. ಕಾಂಗ್ರೆಸ್ ಕೇವಲ 19 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, 5 ಸ್ಥಾನಗಳಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ ಗಳಿಸಲು ಶಕ್ತವಾಗಿದೆ.
ಕಳೆದ 27 ವರ್ಷಗಳಿಂದ ಅಧಿಕಾರದ ಗದ್ದುಗೆಯಲ್ಲಿರುವ ಬಿಜೆಪಿ ಸತತ ಏಳನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿದು ಇತಿಹಾಸ ಸೃಷ್ಟಿಸಿದೆ. 182 ಸ್ಥಾನಗಳ ಪೈಕಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಎದುರಾಳಿಗಳನ್ನು ಧೂಳೀಪಟ ಮಾಡಿದೆ. ಕಾಂಗ್ರೆಸ್ 18 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ತೀವ್ರ ಮುಖಭಂಗ ಅನುಭವಿಸಿದೆ.
ಗುಜರಾತಿನಲ್ಲಿ ಕಾಂಗ್ರೆಸ್ ತೀವ್ರ ಕುಸಿತ
2017ರಲ್ಲಿ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 99 ಸ್ಥಾನಗಳಲ್ಲಿ ಜಯಗಳಿಸಿ 6ನೇ ಬಾರಿ ಅಧಿಕಾರದ ಗದ್ದುಗೆ ಏರಿತ್ತು. ಕಾಂಗ್ರೆಸ್ ಪಕ್ಷ 77 ಕ್ಷೇತ್ರಗಳಲ್ಲಿ ಜಯ ಗಳಿಸುವ ಮೂಲಕ ಪ್ರಬಲ ವಿಪಕ್ಷವಾಗಿ ಹೊರಹೊಮ್ಮಿತ್ತು. ಆದರೆ 2022ರ ಚುನಾವಣೆಯಲ್ಲಿ ಮತ್ತಷ್ಟು ಬಲ ವೃದ್ಧಿಸಿಕೊಂಡಿರುವ ಬಿಜೆಪಿ, ಕಾಂಗ್ರೆಸನ್ನು ಮೂಲೆಗುಂಪು ಮಾಡಿದ್ದಲ್ಲದೆ 50 ಶೇಕಡಾ ಮತ ಗಳಿಕೆಯಿಂದ ಭಾರೀ ಮುನ್ನಡೆ ಸಾಧಿಸಿದೆ.
ಕೊನೆಕ್ಷಣದಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಜೋಡಿಯ ಚುನಾವಣೆ ಪ್ರಚಾರ ಚುನಾವಣೆ ಫಲಿತಾಂಶದ ದಿಕ್ಕನ್ನೇ ಬದಲಿಸಿದೆ. 1989ರಲ್ಲಿ ಕಾಂಗ್ರೆಸ್ 149 ಸ್ಥಾನಗಳನ್ನು ಗೆದ್ದಿದ್ದು ಈವರೆಗಿನ ಅತಿ ಹೆಚ್ಚು ಗಳಿಕೆಯ ಇತಿಹಾಸ. ಆದರೆ ಈ ಬಾರಿ ಬಿಜೆಪಿ ಕಾಂಗ್ರೆಸ್ ಪರ ಇದ್ದ ದಾಖಲೆಯನ್ನು ಅಳಿಸಿ ಹಾಕುವ ಲಕ್ಷಣ ಮೂಡಿಸಿದೆ.
The BJP leads in Gujarat has crossed 150 -- a record in Prime Minister Narendra Modi's home state, surpassing the Congress score of 149 in 1985. Back then, Madhavsinh Solanki rose the social coalition KHAM (Koli Kshatriya, Harijan, Adivasi and Muslim). Today, the Grand Old Party might be headed for its worst score ever, confined to teens by the massive BJP surge.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm