ಬ್ರೇಕಿಂಗ್ ನ್ಯೂಸ್
14-12-22 03:36 pm HK News Desk ದೇಶ - ವಿದೇಶ
ಭೋಪಾಲ್, ಡಿ.14: ಐದು ವರ್ಷಗಳ ಹಿಂದೆ ಹಿಂದು ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಮುಸ್ಲಿಂ ಯುವಕನೊಬ್ಬ ಹಿಂದು ಧರ್ಮಕ್ಕೆ ಮತಾಂತರಗೊಂಡಿದ್ದಾನೆ. ಮಧ್ಯಪ್ರದೇಶದ ಮಂಡ್ ಸೌರ್ ಜಿಲ್ಲೆಯ ಕಚ್ ನಾರಾ ಗ್ರಾಮದ ನಿವಾಸಿ ಅಫ್ಸರ್ ಮನ್ಸೂರಿ ಎಂಬಾತ ಹಿಂದುವಾಗಿ ಬದಲಾಗಿದ್ದಲ್ಲದೆ, ತನ್ನ ಹೆಸರನ್ನು ಕೃಷ್ಣ ಸನಾತನಿ ಎಂದು ಬದಲಿಸಿಕೊಂಡಿದ್ದಾನೆ.
ಐದು ವರ್ಷಗಳ ಹಿಂದೆ ರಾಧಾ ಎಂಬವಳನ್ನು ದೇವಸ್ಥಾನದಲ್ಲಿ ಮದುವೆಯಾಗಿದ್ದ ಅಫ್ಸರ್, ಆನಂತರ ತನ್ನ ಕುಟುಂಬದಿಂದ ದೂರವಿದ್ದು ಪ್ರತ್ಯೇಕವಾಗಿ ವಾಸವಿದ್ದರು. ಹಿಂದು ಸಂಪ್ರದಾಯಗಳನ್ನು ಪಾಲನೆ ಮಾಡುತ್ತಿದ್ದರು. ಇದೀಗ ಹಿಂದು ಹೆಸರಿನೊಂದಿಗೆ ಧರ್ಮವನ್ನು ಬದಲಿಸಿಕೊಂಡಿದ್ದಾರೆ. ಹಿಂದು ಧರ್ಮಕ್ಕೆ ಮತಾಂತರಗೊಂಡ ಪ್ರಕ್ರಿಯೆಯನ್ನು ಗಾಯತ್ರಿ ಪರಿವಾರದ ಅರ್ಚಕರೊಬ್ಬರು ನೆರವೇರಿಸಿದ್ದಾರೆ. ಗೋವಿನ ಮೂತ್ರ, ಸೆಗಣಿ, ಮೊಸರು, ಹಾಲು, ಜೇನಿನ ಅಭಿಷೇಕ ಮಾಡಿ ಮಂತ್ರ ಪಠಣಗೈದು ಹಿಂದು ಧರ್ಮಕ್ಕೆ ಸೇರಿಸಿಕೊಂಡಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ರೋಗಿಗಳ ಕೇರ್ ಟೇಕರ್ ಆಗಿ ರಾಧಾ ಕೆಲಸ ಮಾಡುತ್ತಿದ್ದರು. ಅಲ್ಲಿಗೆ ಅಫ್ಸರ್ ಮನ್ಸೂರಿ ಬೇರೆ ಬೇರೆ ಕಡೆಯಿಂದ ರೋಗಿಗಳನ್ನು ಒಯ್ದು ತಲುಪಿಸುತ್ತಿದ್ದರು. ಈ ವೇಳೆ, ರಾಧಾ ಪರಿಚಯವಾಗಿ ಪ್ರೀತಿ ಬೆಳೆದು ಮದುವೆಯಾಗಿದ್ದರು. ಆನಂತರ, ರಾಧಾಳನ್ನು ಜೊತೆಗೆ ಕರೆದುಕೊಂಡು ಬಂದು ಮಧ್ಯಪ್ರದೇಶದ ಮಂಡ್ ಸೌರ್ ನಲ್ಲಿಯೇ ವಾಸ ಮಾಡಿಕೊಂಡಿದ್ದರು. ಹಿಂದು ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಬಳಿಕ ಮುಸ್ಲಿಂ ಆಗಿ ಮತಾಂತರಿಸುವ ಬಗ್ಗೆ ದೇಶದ ಎಲ್ಲೆಡೆ ಆರೋಪ ಕೇಳಿಬರುತ್ತಿರುವ ಸಂದರ್ಭದಲ್ಲೇ ಇಲ್ಲೊಬ್ಬ ತನ್ನ ಪ್ರೀತಿಗಾಗಿ ಪತ್ನಿಯ ಧರ್ಮಕ್ಕೇ ಮತಾಂತರಗೊಂಡಿದ್ದಾನೆ.
A Muslim man, who married a Hindu woman five years ago, has converted to Hindusim an changed his name to 'Krishna Sanatani'. The incident was reported from Madhya Pradesh's Mandsaur district. The Muslim man had married the woman from the Hindu community at a temple after falling in love with her.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm