ಬ್ರೇಕಿಂಗ್ ನ್ಯೂಸ್
14-12-22 03:36 pm HK News Desk ದೇಶ - ವಿದೇಶ
ಭೋಪಾಲ್, ಡಿ.14: ಐದು ವರ್ಷಗಳ ಹಿಂದೆ ಹಿಂದು ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಮುಸ್ಲಿಂ ಯುವಕನೊಬ್ಬ ಹಿಂದು ಧರ್ಮಕ್ಕೆ ಮತಾಂತರಗೊಂಡಿದ್ದಾನೆ. ಮಧ್ಯಪ್ರದೇಶದ ಮಂಡ್ ಸೌರ್ ಜಿಲ್ಲೆಯ ಕಚ್ ನಾರಾ ಗ್ರಾಮದ ನಿವಾಸಿ ಅಫ್ಸರ್ ಮನ್ಸೂರಿ ಎಂಬಾತ ಹಿಂದುವಾಗಿ ಬದಲಾಗಿದ್ದಲ್ಲದೆ, ತನ್ನ ಹೆಸರನ್ನು ಕೃಷ್ಣ ಸನಾತನಿ ಎಂದು ಬದಲಿಸಿಕೊಂಡಿದ್ದಾನೆ.
ಐದು ವರ್ಷಗಳ ಹಿಂದೆ ರಾಧಾ ಎಂಬವಳನ್ನು ದೇವಸ್ಥಾನದಲ್ಲಿ ಮದುವೆಯಾಗಿದ್ದ ಅಫ್ಸರ್, ಆನಂತರ ತನ್ನ ಕುಟುಂಬದಿಂದ ದೂರವಿದ್ದು ಪ್ರತ್ಯೇಕವಾಗಿ ವಾಸವಿದ್ದರು. ಹಿಂದು ಸಂಪ್ರದಾಯಗಳನ್ನು ಪಾಲನೆ ಮಾಡುತ್ತಿದ್ದರು. ಇದೀಗ ಹಿಂದು ಹೆಸರಿನೊಂದಿಗೆ ಧರ್ಮವನ್ನು ಬದಲಿಸಿಕೊಂಡಿದ್ದಾರೆ. ಹಿಂದು ಧರ್ಮಕ್ಕೆ ಮತಾಂತರಗೊಂಡ ಪ್ರಕ್ರಿಯೆಯನ್ನು ಗಾಯತ್ರಿ ಪರಿವಾರದ ಅರ್ಚಕರೊಬ್ಬರು ನೆರವೇರಿಸಿದ್ದಾರೆ. ಗೋವಿನ ಮೂತ್ರ, ಸೆಗಣಿ, ಮೊಸರು, ಹಾಲು, ಜೇನಿನ ಅಭಿಷೇಕ ಮಾಡಿ ಮಂತ್ರ ಪಠಣಗೈದು ಹಿಂದು ಧರ್ಮಕ್ಕೆ ಸೇರಿಸಿಕೊಂಡಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ರೋಗಿಗಳ ಕೇರ್ ಟೇಕರ್ ಆಗಿ ರಾಧಾ ಕೆಲಸ ಮಾಡುತ್ತಿದ್ದರು. ಅಲ್ಲಿಗೆ ಅಫ್ಸರ್ ಮನ್ಸೂರಿ ಬೇರೆ ಬೇರೆ ಕಡೆಯಿಂದ ರೋಗಿಗಳನ್ನು ಒಯ್ದು ತಲುಪಿಸುತ್ತಿದ್ದರು. ಈ ವೇಳೆ, ರಾಧಾ ಪರಿಚಯವಾಗಿ ಪ್ರೀತಿ ಬೆಳೆದು ಮದುವೆಯಾಗಿದ್ದರು. ಆನಂತರ, ರಾಧಾಳನ್ನು ಜೊತೆಗೆ ಕರೆದುಕೊಂಡು ಬಂದು ಮಧ್ಯಪ್ರದೇಶದ ಮಂಡ್ ಸೌರ್ ನಲ್ಲಿಯೇ ವಾಸ ಮಾಡಿಕೊಂಡಿದ್ದರು. ಹಿಂದು ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಬಳಿಕ ಮುಸ್ಲಿಂ ಆಗಿ ಮತಾಂತರಿಸುವ ಬಗ್ಗೆ ದೇಶದ ಎಲ್ಲೆಡೆ ಆರೋಪ ಕೇಳಿಬರುತ್ತಿರುವ ಸಂದರ್ಭದಲ್ಲೇ ಇಲ್ಲೊಬ್ಬ ತನ್ನ ಪ್ರೀತಿಗಾಗಿ ಪತ್ನಿಯ ಧರ್ಮಕ್ಕೇ ಮತಾಂತರಗೊಂಡಿದ್ದಾನೆ.
A Muslim man, who married a Hindu woman five years ago, has converted to Hindusim an changed his name to 'Krishna Sanatani'. The incident was reported from Madhya Pradesh's Mandsaur district. The Muslim man had married the woman from the Hindu community at a temple after falling in love with her.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm