ಬ್ರೇಕಿಂಗ್ ನ್ಯೂಸ್
14-12-22 11:08 pm HK News Desk ದೇಶ - ವಿದೇಶ
ನವದೆಹಲಿ, ಡಿ.14 : ಮಹಾರಾಷ್ಟ್ರ- ಕರ್ನಾಟಕ ರಾಜ್ಯಗಳ ಗಡಿ ಸಂಘರ್ಷವನ್ನು ಸಾಂವಿಧಾನಿಕ ವಿಧಾನಗಳಿಂದ ಮಾತ್ರ ಇತ್ಯರ್ಥಗೊಳಿಸಬಹುದು, ಬೀದಿ ಘರ್ಷಣೆಗಳಿಂದಲ್ಲ. ಸದ್ಯಕ್ಕೆ ಎರಡೂ ರಾಜ್ಯಗಳಲ್ಲಿ ಶಾಂತಿ ಸೌಹಾರ್ದ ನೆಲೆಸಲು ಏನು ವ್ಯವಸ್ಥೆ ಆಗಬೇಕೋ ಅದನ್ನು ಕೈಗೊಳ್ಳಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ.
ದೆಹಲಿಯಲ್ಲಿ ಬುಧವಾರ ಮಹಾರಾಷ್ಟ್ರ-ಕರ್ನಾಟಕ ರಾಜ್ಯಗಳ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಮತ್ತು ಏಕನಾಥ್ ಶಿಂಧೆ ಅವರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತ್ ಶಾ ಅವರು, ಸಕಾರಾತ್ಮಕ ದೃಷ್ಟಿಕೋನ ಇಟ್ಟುಕೊಂಡು, ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ವ್ಯವಹರಿಸಬೇಕು. ಯಾವುದೇ ಕಾರಣಕ್ಕೂ ಪ್ರಚೋದನೆಗೆ ಒಳಗಾಗುವಂತೆ ಹೇಳಿಕೆ ನೀಡಬಾರದು ಎಂದು ಸೂಚಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಬರುವ ವರೆಗೂ ಉಭಯ ರಾಜ್ಯಗಳು ವಿವಾದಿತ ಪ್ರದೇಶ ನಮ್ಮದು ಎಂದು ಹೇಳುವಂತಿಲ್ಲ. ಗಡಿ ವಿವಾದವನ್ನು ಸಾಂವಿಧಾನಿಕ ವಿಧಾನಗಳಿಂದ ಚೌಕಟ್ಟಿನಲ್ಲಿ ಇತ್ಯರ್ಥಗೊಳಿಸಬಹುದೇ ವಿನಃ ಬೀದಿ ಘರ್ಷಣೆಗಳಿಂದಲ್ಲ ಎಂದು ಹೇಳಿದರು.
ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳು ರಾಜ್ಯದ ಗಡಿ ವಿವಾದದಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡುವ ವರೆಗೆ ತಮ್ಮ ಹಕ್ಕುಗಳನ್ನು ಒತ್ತಾಯಿಸದಿರಲು ಒಪ್ಪಿದ್ದಾರೆ. ಅಲ್ಲಿ ವರೆಗೂ ರಾಜ್ಯ ಸರ್ಕಾರಗಳು ಯಾವುದೇ ಹಕ್ಕು ಸಲ್ಲಿಸುವುದಿಲ್ಲ ಎಂಬ ಒಪ್ಪಂದ ಮಾಡಲಾಗಿದೆ ಎಂದು ಹೇಳಿದರು.
ಇದೇ ವೇಳೆ ಗಡಿ ವಿವಾದ ಕುರಿತು ಉಭಯ ರಾಜ್ಯಗಳ ತಲಾ ಮೂರು ಸಚಿವರನ್ನು ಒಳಗೊಂಡ ಸಮಿತಿ ರಚಿಸಲಾಗುವುದು ಎಂದು ಹೇಳಿದ ಅಮಿತ್ ಶಾ, 'ರಾಜ್ಯಗಳ ಗಡಿ ಸಮಸ್ಯೆಗಳನ್ನು ಪರಿಹರಿಸಲು ಮಹಾರಾಷ್ಟ್ರ ಮತ್ತು ಕರ್ನಾಟಕದ ಮಂತ್ರಿಗಳೊಂದಿಗೆ ಕೇಂದ್ರವು 6 ಸದಸ್ಯರ ತಂಡವನ್ನು ರಚಿಸಿದೆ. ಇದಲ್ಲದೆ, ಎರಡೂ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಪ್ರತ್ಯೇಕ ಐಪಿಎಸ್ ಅಧಿಕಾರಿಯನ್ನು ಇದಕ್ಕಾಗಿ ನೇಮಕ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.
The Chief Minsters of Karnataka and Maharashtra have agreed not to press their claims in the decades-long state border dispute till the Supreme Court takes a call on the matter, Union Home Minister Amit Shah said today after a meeting with the two leaders. His meeting with Karnataka Chief Minister Basavaraj Bommai and Maharashtra Chief Minister Eknath Shinde was held amid a flare-up of the dispute that dates back to 1957.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm