ಬ್ರೇಕಿಂಗ್ ನ್ಯೂಸ್
17-12-22 04:21 pm HK News Desk ದೇಶ - ವಿದೇಶ
ಹೈದರಾಬಾದ್, ಡಿ.17 : ಮಧ್ಯರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಗಾಢನಿದ್ರೆಯಲ್ಲಿದ್ದ ಕುಟುಂಬವೊಂದರ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸದಸ್ಯರು ಸಜೀವ ದಹನವಾಗಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ನಡೆದಿದೆ.
ಗ್ರಾಮ ಕಂದಾಯ ಸಹಾಯಕ ಮಸುಶಿವಯ್ಯ (50) ಅವರ ಪತ್ನಿ ಪದ್ಮ (45), ಪದ್ಮ ಅವರ ಅಕ್ಕನ ಮಗಳು ಮೌನಿಕಾ (23) ಆಕೆಯ ಇಬ್ಬರು ಹೆಣ್ಣು ಮಕ್ಕಳಾದ ಹಿಮಬಿಂಧು, ಸ್ವೀಟಿ, ಸಂಬಂಧಿಕರಾದ ಶಾಂತಯ್ಯ ಸಜೀವಂತ ದಹನವಾಗಿದ್ದಾರೆ.
![]()
ರಾಮಕೃಷ್ಣಪುರ ಪೊಲೀಸ್ ಠಾಣೆ ವ್ಯಾಪ್ತಿಯ ವೆಂಕಟಾಪುರ ಗ್ರಾಮದಲ್ಲಿ ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಮನೆ ಬೆಂಕಿಯ ಕೆನ್ನಾಲಿಗೆಗಳಿಂದ ಉರಿಯುತ್ತಿರುವುದನ್ನು ಅಕ್ಕಪಕ್ಕದವರು ಗಮನಿಸಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಗ್ನಿ ಶಾಮಕ ದಳ ಸ್ಥಳಕ್ಕಾಗಮಿಸಿದೆ. ಆ ವೇಳೆಗಾಗಲೇ ಇಡೀ ಮನೆ ಸಂಪೂರ್ಣ ಭಸ್ಮವಾಗಿದೆ. ಬೆಂಕಿ ನಂದಿಸಿ ಪರಿಶೀಲನೆ ನಡೆಸಿದಾಗ ಆರು ಮಂದಿ ಸುಟ್ಟು ಕರಕಲಾಗಿರುವುದು ಪತ್ತೆಯಾಗಿದೆ.

ಆ ಮನೆಯಲ್ಲಿ ಶಿವಯ್ಯ ಮತ್ತು ಪದ್ಮ ವಾಸವಿದ್ದರು. ಕಳೆದೆರಡು ದಿನಗಳ ಹಿಂದೆ ಮೌನಿಕಾ, ಆಕೆಯ ಮಕ್ಕಳು ಮತ್ತು ಸಂಬಂಧಿಕರು ಆಗಮಿಸಿದ್ದರು. ಬೆಂಕಿ ಹತ್ತಿದಾಗ ಎಲ್ಲರೂ ಮನೆಯಲ್ಲಿದ್ದು ಮೃತಪಟ್ಟಿದ್ದಾರೆ ಎಂದು ಮಂಚೇರಿಯಲ್ ವಿಭಾಗದ ಎಸಿಪಿ ತಿರುಪತಿರೆಡ್ಡಿ ತಿಳಿಸಿದ್ದಾರೆ.

ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ. ಬೆಂಕಿಗೆ ಕಾರಣವಾಗಿರುವ ಅಂಶಗಳು ಅನುಮಾನಸ್ಪದವಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಡಿಸಿಪಿ ಅಖಿಲ್ ಮಹಾಜನ್ ತಿಳಿಸಿದ್ದಾರೆ.

ಬೆಂಕಿಯಿಂದ ಮನೆ ಹೊತ್ತಿ ಉರಿಯುತ್ತಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ದೃಶ್ಯ ಭೀಕರವಾಗಿದ್ದು, ಎದೆ ನಡುಗಿಸುವಂತಿದೆ. ಬಹುತೇಕ ಮರದ ವಸ್ತುಗಳನ್ನು ಬಳಸಿ ನಿರ್ಮಿಸಿದ್ದರಿಂದ ಮನೆ ಬೆಂಕಿಯಿಂದ ಬೂದಿಯಾಗಿ ಹೋಗಿದೆ.
Six members of a family, including two children, were charred to death when fire broke out at their house in Gudipally village in Mandamarri mandal of Mancherial district in the small hours today. Shivaiah, the owner of the house was among those who died in the blaze that erupted in his tiled-roof house at around 1.15 a.m., sources said.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm