ಬ್ರೇಕಿಂಗ್ ನ್ಯೂಸ್
21-12-22 08:37 pm HK News Desk ದೇಶ - ವಿದೇಶ
ನವದೆಹಲಿ, ಡಿ.21 : ಮಾನವ ರಹಿತ ವೈಮಾನಿಕ ವಾಹನಗಳ ವರ್ಗಕ್ಕೆ ಸೇರುವ ಎಂಕ್ಯೂ -9 ರೀಪರ್ ಡ್ರೋಣ್ ಗಳನ್ನು ಅಮೆರಿಕದಿಂದ ಖರೀದಿಸಲು ಭಾರತವು ಮುಂದಾಗಿದೆ. ಇದಕ್ಕಾಗಿ ಅಮೆರಿಕದೊಂದಿಗೆ ಬಿಲಿಯನ್ ಡಾಲರ್ ಮೊತ್ತದ ಒಪ್ಪಂದವನ್ನು ಮಾಡಿಕೊಳ್ಳಲಿದೆ.
ನಿಖರವಾದ ಗುರಿಗಳನ್ನು ಲೇಸರ್ ಆಧರಿಸಿ ಬೆನ್ನತ್ತಿ ಕ್ಷಿಪಣಿಗಳನ್ನು ಉಡಾಯಿಸುವುದರಿಂದ ಈ ಮಾದರಿಯ ಡ್ರೋಣ್ ಗಳನ್ನು ವಿಶ್ವದ ಅತ್ಯಂತ ಅಪಾಯಕಾರಿ ಅಸ್ತ್ರ ಎಂದು ಪರಿಗಣಿಸಲಾಗಿದೆ. ಅಲ್-ಖೈದಾ ಮುಖ್ಯಸ್ಥ ಅಯಮಾನ್ ಅಲ್ ಜವಾಹಿರಿಯನ್ನು ಕೊಲ್ಲಲು ಈ ಡ್ರೋಣ್ ಬಳಸಲಾಗಿದೆ ಎಂದು ಹೇಳಲಾಗುತ್ತಿದೆ. ಡಿ.22ರಂದು ನಿಗದಿಯಾಗಿರುವ ರಕ್ಷಣಾ ಉಪಕರಣಗಳ ಖರೀದಿ ಕುರಿತ ಮಂಡಳಿ ಸಭೆಯಲ್ಲಿ ಚರ್ಚೆಗೆ ಪಟ್ಟಿ ಮಾಡಲಾದ ಪ್ರಸ್ತಾವನೆಗಳಲ್ಲಿ ಎಂಕ್ಯು-9 ರೀಪರ್ ಖರೀದಿಯೂ ಒಂದು ಎನ್ನಲಾಗುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಇಲಾಖೆ ಕಾರ್ಯದರ್ಶಿ, ರಕ್ಷಣಾ ಸಚಿವಾಲಯದ ಇತರ ಉನ್ನತ ಅಧಿಕಾರಿಗಳು, ಕಿರಿಯ ಸಚಿವರು ಮತ್ತು ಮೂರು ಸೇನೆಗಳ ಮುಖ್ಯಸ್ಥರು ಮಂಡಳಿಯ ಸದಸ್ಯರು. ಇವರ ಸಭೆಯಲ್ಲಿ ಈ ಕುರಿತು ನಿರ್ಧಾರಕ್ಕೆ ಬರುವ ಸಾಧ್ಯತೆಯಿದೆ.
ಗುಪ್ತಚರ, ಕಣ್ಗಾವಲು, ವಿಚಕ್ಷಣ ಮತ್ತು ನಿಖರ ದಾಳಿಗಳಿಗೆ ಈ ಮಾದರಿಯ ಡ್ರೋಣ್ ಗಳನ್ನು ಬಳಸಲಾಗುತ್ತದೆ. ಇದನ್ನು ಭೂಮಿಯ ಮೇಲಿನ ನಿಲ್ದಾಣ ಮತ್ತು ಹಡಗಿನಿಂದಲೂ ನಿಯಂತ್ರಿಸಬಹುದು. ಮೂಲಗಳ ಪ್ರಕಾರ, ಸರ್ಕಾರವು 30 MQ-9 ವಾಹನಗಳನ್ನು ಮೂರು ಸೇನಾ ಪಡೆಗಳಿಗೆ ತಲಾ 10ರಂತೆ ಖರೀದಿಸಲು ಯೋಜಿಸಿದೆ.
ಭಾರತೀಯ ನೌಕಾಪಡೆಯು 2017 ರಲ್ಲಿ ಎರಡು MQ-9 ಗಳನ್ನು ಎರಡು ವರ್ಷಗಳ ಗುತ್ತಿಗೆಗೆ ಪಡೆದಿತ್ತು. ಹಿಂದೂ ಮಹಾಸಾಗರದಲ್ಲಿ ಕಣ್ಗಾವಲಿಗಾಗಿ ಅವುಗಳನ್ನು ಪಡೆಯಲಾಗಿತ್ತು.
India is likely to enter into a billion-dollar deal with the US to buy MQ-9 Reaper drones, which fall in the category of hunter-killer Unmanned Aerial Vehicles (UAVs). They are considered the world’s most dangerous as they use laser-guided Hellfire missiles for precision strikes. The drone was reportedly used to kill Al-Qaeda chief Ayman al-Zawahiri.Sources said their purchase is one of the proposals listed for discussion in the Defence Acquisition Council (DAC) meet scheduled on Thursday.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am