ಬ್ರೇಕಿಂಗ್ ನ್ಯೂಸ್
21-12-22 08:37 pm HK News Desk ದೇಶ - ವಿದೇಶ
ನವದೆಹಲಿ, ಡಿ.21 : ಮಾನವ ರಹಿತ ವೈಮಾನಿಕ ವಾಹನಗಳ ವರ್ಗಕ್ಕೆ ಸೇರುವ ಎಂಕ್ಯೂ -9 ರೀಪರ್ ಡ್ರೋಣ್ ಗಳನ್ನು ಅಮೆರಿಕದಿಂದ ಖರೀದಿಸಲು ಭಾರತವು ಮುಂದಾಗಿದೆ. ಇದಕ್ಕಾಗಿ ಅಮೆರಿಕದೊಂದಿಗೆ ಬಿಲಿಯನ್ ಡಾಲರ್ ಮೊತ್ತದ ಒಪ್ಪಂದವನ್ನು ಮಾಡಿಕೊಳ್ಳಲಿದೆ.
ನಿಖರವಾದ ಗುರಿಗಳನ್ನು ಲೇಸರ್ ಆಧರಿಸಿ ಬೆನ್ನತ್ತಿ ಕ್ಷಿಪಣಿಗಳನ್ನು ಉಡಾಯಿಸುವುದರಿಂದ ಈ ಮಾದರಿಯ ಡ್ರೋಣ್ ಗಳನ್ನು ವಿಶ್ವದ ಅತ್ಯಂತ ಅಪಾಯಕಾರಿ ಅಸ್ತ್ರ ಎಂದು ಪರಿಗಣಿಸಲಾಗಿದೆ. ಅಲ್-ಖೈದಾ ಮುಖ್ಯಸ್ಥ ಅಯಮಾನ್ ಅಲ್ ಜವಾಹಿರಿಯನ್ನು ಕೊಲ್ಲಲು ಈ ಡ್ರೋಣ್ ಬಳಸಲಾಗಿದೆ ಎಂದು ಹೇಳಲಾಗುತ್ತಿದೆ. ಡಿ.22ರಂದು ನಿಗದಿಯಾಗಿರುವ ರಕ್ಷಣಾ ಉಪಕರಣಗಳ ಖರೀದಿ ಕುರಿತ ಮಂಡಳಿ ಸಭೆಯಲ್ಲಿ ಚರ್ಚೆಗೆ ಪಟ್ಟಿ ಮಾಡಲಾದ ಪ್ರಸ್ತಾವನೆಗಳಲ್ಲಿ ಎಂಕ್ಯು-9 ರೀಪರ್ ಖರೀದಿಯೂ ಒಂದು ಎನ್ನಲಾಗುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಇಲಾಖೆ ಕಾರ್ಯದರ್ಶಿ, ರಕ್ಷಣಾ ಸಚಿವಾಲಯದ ಇತರ ಉನ್ನತ ಅಧಿಕಾರಿಗಳು, ಕಿರಿಯ ಸಚಿವರು ಮತ್ತು ಮೂರು ಸೇನೆಗಳ ಮುಖ್ಯಸ್ಥರು ಮಂಡಳಿಯ ಸದಸ್ಯರು. ಇವರ ಸಭೆಯಲ್ಲಿ ಈ ಕುರಿತು ನಿರ್ಧಾರಕ್ಕೆ ಬರುವ ಸಾಧ್ಯತೆಯಿದೆ.
ಗುಪ್ತಚರ, ಕಣ್ಗಾವಲು, ವಿಚಕ್ಷಣ ಮತ್ತು ನಿಖರ ದಾಳಿಗಳಿಗೆ ಈ ಮಾದರಿಯ ಡ್ರೋಣ್ ಗಳನ್ನು ಬಳಸಲಾಗುತ್ತದೆ. ಇದನ್ನು ಭೂಮಿಯ ಮೇಲಿನ ನಿಲ್ದಾಣ ಮತ್ತು ಹಡಗಿನಿಂದಲೂ ನಿಯಂತ್ರಿಸಬಹುದು. ಮೂಲಗಳ ಪ್ರಕಾರ, ಸರ್ಕಾರವು 30 MQ-9 ವಾಹನಗಳನ್ನು ಮೂರು ಸೇನಾ ಪಡೆಗಳಿಗೆ ತಲಾ 10ರಂತೆ ಖರೀದಿಸಲು ಯೋಜಿಸಿದೆ.
ಭಾರತೀಯ ನೌಕಾಪಡೆಯು 2017 ರಲ್ಲಿ ಎರಡು MQ-9 ಗಳನ್ನು ಎರಡು ವರ್ಷಗಳ ಗುತ್ತಿಗೆಗೆ ಪಡೆದಿತ್ತು. ಹಿಂದೂ ಮಹಾಸಾಗರದಲ್ಲಿ ಕಣ್ಗಾವಲಿಗಾಗಿ ಅವುಗಳನ್ನು ಪಡೆಯಲಾಗಿತ್ತು.
India is likely to enter into a billion-dollar deal with the US to buy MQ-9 Reaper drones, which fall in the category of hunter-killer Unmanned Aerial Vehicles (UAVs). They are considered the world’s most dangerous as they use laser-guided Hellfire missiles for precision strikes. The drone was reportedly used to kill Al-Qaeda chief Ayman al-Zawahiri.Sources said their purchase is one of the proposals listed for discussion in the Defence Acquisition Council (DAC) meet scheduled on Thursday.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm