ಬ್ರೇಕಿಂಗ್ ನ್ಯೂಸ್
21-12-22 08:37 pm HK News Desk ದೇಶ - ವಿದೇಶ
ನವದೆಹಲಿ, ಡಿ.21 : ಮಾನವ ರಹಿತ ವೈಮಾನಿಕ ವಾಹನಗಳ ವರ್ಗಕ್ಕೆ ಸೇರುವ ಎಂಕ್ಯೂ -9 ರೀಪರ್ ಡ್ರೋಣ್ ಗಳನ್ನು ಅಮೆರಿಕದಿಂದ ಖರೀದಿಸಲು ಭಾರತವು ಮುಂದಾಗಿದೆ. ಇದಕ್ಕಾಗಿ ಅಮೆರಿಕದೊಂದಿಗೆ ಬಿಲಿಯನ್ ಡಾಲರ್ ಮೊತ್ತದ ಒಪ್ಪಂದವನ್ನು ಮಾಡಿಕೊಳ್ಳಲಿದೆ.
ನಿಖರವಾದ ಗುರಿಗಳನ್ನು ಲೇಸರ್ ಆಧರಿಸಿ ಬೆನ್ನತ್ತಿ ಕ್ಷಿಪಣಿಗಳನ್ನು ಉಡಾಯಿಸುವುದರಿಂದ ಈ ಮಾದರಿಯ ಡ್ರೋಣ್ ಗಳನ್ನು ವಿಶ್ವದ ಅತ್ಯಂತ ಅಪಾಯಕಾರಿ ಅಸ್ತ್ರ ಎಂದು ಪರಿಗಣಿಸಲಾಗಿದೆ. ಅಲ್-ಖೈದಾ ಮುಖ್ಯಸ್ಥ ಅಯಮಾನ್ ಅಲ್ ಜವಾಹಿರಿಯನ್ನು ಕೊಲ್ಲಲು ಈ ಡ್ರೋಣ್ ಬಳಸಲಾಗಿದೆ ಎಂದು ಹೇಳಲಾಗುತ್ತಿದೆ. ಡಿ.22ರಂದು ನಿಗದಿಯಾಗಿರುವ ರಕ್ಷಣಾ ಉಪಕರಣಗಳ ಖರೀದಿ ಕುರಿತ ಮಂಡಳಿ ಸಭೆಯಲ್ಲಿ ಚರ್ಚೆಗೆ ಪಟ್ಟಿ ಮಾಡಲಾದ ಪ್ರಸ್ತಾವನೆಗಳಲ್ಲಿ ಎಂಕ್ಯು-9 ರೀಪರ್ ಖರೀದಿಯೂ ಒಂದು ಎನ್ನಲಾಗುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಇಲಾಖೆ ಕಾರ್ಯದರ್ಶಿ, ರಕ್ಷಣಾ ಸಚಿವಾಲಯದ ಇತರ ಉನ್ನತ ಅಧಿಕಾರಿಗಳು, ಕಿರಿಯ ಸಚಿವರು ಮತ್ತು ಮೂರು ಸೇನೆಗಳ ಮುಖ್ಯಸ್ಥರು ಮಂಡಳಿಯ ಸದಸ್ಯರು. ಇವರ ಸಭೆಯಲ್ಲಿ ಈ ಕುರಿತು ನಿರ್ಧಾರಕ್ಕೆ ಬರುವ ಸಾಧ್ಯತೆಯಿದೆ.
ಗುಪ್ತಚರ, ಕಣ್ಗಾವಲು, ವಿಚಕ್ಷಣ ಮತ್ತು ನಿಖರ ದಾಳಿಗಳಿಗೆ ಈ ಮಾದರಿಯ ಡ್ರೋಣ್ ಗಳನ್ನು ಬಳಸಲಾಗುತ್ತದೆ. ಇದನ್ನು ಭೂಮಿಯ ಮೇಲಿನ ನಿಲ್ದಾಣ ಮತ್ತು ಹಡಗಿನಿಂದಲೂ ನಿಯಂತ್ರಿಸಬಹುದು. ಮೂಲಗಳ ಪ್ರಕಾರ, ಸರ್ಕಾರವು 30 MQ-9 ವಾಹನಗಳನ್ನು ಮೂರು ಸೇನಾ ಪಡೆಗಳಿಗೆ ತಲಾ 10ರಂತೆ ಖರೀದಿಸಲು ಯೋಜಿಸಿದೆ.
ಭಾರತೀಯ ನೌಕಾಪಡೆಯು 2017 ರಲ್ಲಿ ಎರಡು MQ-9 ಗಳನ್ನು ಎರಡು ವರ್ಷಗಳ ಗುತ್ತಿಗೆಗೆ ಪಡೆದಿತ್ತು. ಹಿಂದೂ ಮಹಾಸಾಗರದಲ್ಲಿ ಕಣ್ಗಾವಲಿಗಾಗಿ ಅವುಗಳನ್ನು ಪಡೆಯಲಾಗಿತ್ತು.
India is likely to enter into a billion-dollar deal with the US to buy MQ-9 Reaper drones, which fall in the category of hunter-killer Unmanned Aerial Vehicles (UAVs). They are considered the world’s most dangerous as they use laser-guided Hellfire missiles for precision strikes. The drone was reportedly used to kill Al-Qaeda chief Ayman al-Zawahiri.Sources said their purchase is one of the proposals listed for discussion in the Defence Acquisition Council (DAC) meet scheduled on Thursday.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm