ಬ್ರೇಕಿಂಗ್ ನ್ಯೂಸ್
17-10-20 07:29 am Headline Karnataka News Network ದೇಶ - ವಿದೇಶ
ಜಮ್ಮು-ಕಾಶ್ಮೀರ, ಅಕ್ಟೋಬರ್ .17 : ಜಮ್ಮು ಕಾಶ್ಮೀರದಲ್ಲಿ ಜನರು ಉಗ್ರರ ಸಖ್ಯ ಬಿಟ್ಟು ಮುಖ್ಯವಾಹಿನಿಗೆ ಬರಬೇಕು. ಅದಕ್ಕಾಗಿ ಸರಕಾರದ ಜೊತೆ ಕೈಜೋಡಿಸಬೇಕೆಂದು ಅಲ್ಲಿ ಅಭಿಯಾನಗಳು ನಡೆಯುತ್ತಿವೆ. ಇಂಥ ಸಂದರ್ಭದಲ್ಲಿಯೇ ಸೇನಾ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದ ಭಯೋತ್ಪಾದಕನ ಮಗನೊಬ್ಬ ಮುಖ್ಯ ವಾಹಿನಿಗೆ ಬಂದು ಕೆಎಎಸ್ ಅಧಿಕಾರಿಯಾಗುವ ಮೂಲಕ ದೇಶದ ಗಮನ ಸೆಳೆದಿದ್ದಾನೆ.
ಜಮ್ಮ-ಕಾಶ್ಮೀರದ ದೋಡಾ ಜಿಲ್ಲೆಯ ಗುಂಡ್ನಾ ಗ್ರಾಮ ಎಂದರೆ ಹಿಂದೆ ಭಯೋತ್ಪಾದಕರೇ ತುಂಬಿಕೊಂಡಿದ್ದ ಪ್ರದೇಶವಾಗಿತ್ತು. ಇದೇ ಏರಿಯಾದಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಹಲವು ಉಗ್ರರು ಸಾವಿಗೀಡಾಗಿದ್ದರು. ಈ ಪೈಕಿ ಒಬ್ಬ ಉಗ್ರನ ಪುತ್ರ ಅಬ್ದುಲ್ಲಾ ಎಂಬಾತನನ್ನು ಶ್ರೀನಗರದ ಅನಾಥಾಶ್ರಮದಲ್ಲಿ ಬೆಳಸಲಾಗಿತ್ತು. ಸಾಕಷ್ಟು ಸವಾಲುಗಳನ್ನು ಮೆಟ್ಟಿ ನಿಂತು ಸೇನಾಧಿಕಾರಿಗಳ ಪ್ರೋತ್ಸಾಹ ಪಡೆದ ಯುವಕ ಈಗ ಸರಕಾರದ ಕೆಎಎಸ್ ಎಕ್ಸಾಂ ಬರೆದು ಅಧಿಕಾರಿಯಾಗಿದ್ದಾನೆ.
ಆಲಿಗಢ ಮುಸ್ಲಿಂ ವಿವಿಯಲ್ಲಿ ಪದವಿ ಪಡೆದಿದ್ದ ಅಬ್ದುಲ್ಲಾ ಕೆಎಎಸ್ ಪಾಸ್ ಮಾಡಿದ್ದು ಜಮ್ಮು ಕಾಶ್ಮೀರದಲ್ಲಿ ಇತರೇ ಮಂದಿಗೆ ದೊಡ್ಡ ಪ್ರೇರಣೆಯಾಗಲಿದೆ ಎನ್ನಲಾಗುತ್ತಿದೆ. ಈತನ ಸಾಧನೆಯಿಂದ ಉತ್ತೇಜಿತರಾದ ಭಾರತೀಯ ಸೇನೆ ಕಾರ್ಯಕ್ರಮ ಹಮ್ಮಿಕೊಂಡು ಅಬ್ದುಲ್ಲಾ ಅವರನ್ನು ವಿಶೇಷವಾಗಿ ಸನ್ಮಾನಿಸಿ, ಕಾಶ್ಮೀರದ ಯುವಜನರು ಸರಕಾರಿ ಅಧಿಕಾರಿಯಾಗಲು ಮುಂದೆ ಬರುವಂತೆ ಕರೆ ನೀಡಿದೆ.
ಇದೆ ವೇಳೆ ಮಾತನಾಡಿದ ಅಬ್ದುಲ್ಲಾ, ಬಾಲ್ಯದಿಂದಲೂ ತುಂಬ ಸವಾಲುಗಳನ್ನು ಮೆಟ್ಟಿಕೊಂಡು ಮುಂದೆ ಬಂದಿದ್ದೇನೆ. ಕಷ್ಟಗಳು ಎದುರಾದರೂ, ಅಧಿಕಾರಿ ಆಗಬೇಕೆಂಬ ಗುರಿಯನ್ನು ಬಿಟ್ಟು ಕೊಡಲಿಲ್ಲ. ಉಗ್ರವಾದದಿಂದ ಮುಕ್ತವಾದ ಪ್ರದೇಶಗಳಲ್ಲಿ ಯುವ ಜನಾಂಗಕ್ಕೆ ಸಾಕಷ್ಟು ಅವಕಾಶಗಳಿದ್ದು ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ.
ಕಠಿಣ ಪರಿಶ್ರಮ ಹೇಗೆ ವ್ಯಕ್ತಿಯ ಜೀವನವನ್ನು ಬದಲಿಸಬಹುದು ಎಂಬುದಕ್ಕೆ ಘಾಜಿ ಅಬ್ದುಲ್ಲಾ ಉತ್ತಮ ಉದಾಹರಣೆ ಎಂದು ಸೇನಾ ವಕ್ತಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm