ಬ್ರೇಕಿಂಗ್ ನ್ಯೂಸ್
17-10-20 07:29 am Headline Karnataka News Network ದೇಶ - ವಿದೇಶ
ಜಮ್ಮು-ಕಾಶ್ಮೀರ, ಅಕ್ಟೋಬರ್ .17 : ಜಮ್ಮು ಕಾಶ್ಮೀರದಲ್ಲಿ ಜನರು ಉಗ್ರರ ಸಖ್ಯ ಬಿಟ್ಟು ಮುಖ್ಯವಾಹಿನಿಗೆ ಬರಬೇಕು. ಅದಕ್ಕಾಗಿ ಸರಕಾರದ ಜೊತೆ ಕೈಜೋಡಿಸಬೇಕೆಂದು ಅಲ್ಲಿ ಅಭಿಯಾನಗಳು ನಡೆಯುತ್ತಿವೆ. ಇಂಥ ಸಂದರ್ಭದಲ್ಲಿಯೇ ಸೇನಾ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದ ಭಯೋತ್ಪಾದಕನ ಮಗನೊಬ್ಬ ಮುಖ್ಯ ವಾಹಿನಿಗೆ ಬಂದು ಕೆಎಎಸ್ ಅಧಿಕಾರಿಯಾಗುವ ಮೂಲಕ ದೇಶದ ಗಮನ ಸೆಳೆದಿದ್ದಾನೆ.
ಜಮ್ಮ-ಕಾಶ್ಮೀರದ ದೋಡಾ ಜಿಲ್ಲೆಯ ಗುಂಡ್ನಾ ಗ್ರಾಮ ಎಂದರೆ ಹಿಂದೆ ಭಯೋತ್ಪಾದಕರೇ ತುಂಬಿಕೊಂಡಿದ್ದ ಪ್ರದೇಶವಾಗಿತ್ತು. ಇದೇ ಏರಿಯಾದಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಹಲವು ಉಗ್ರರು ಸಾವಿಗೀಡಾಗಿದ್ದರು. ಈ ಪೈಕಿ ಒಬ್ಬ ಉಗ್ರನ ಪುತ್ರ ಅಬ್ದುಲ್ಲಾ ಎಂಬಾತನನ್ನು ಶ್ರೀನಗರದ ಅನಾಥಾಶ್ರಮದಲ್ಲಿ ಬೆಳಸಲಾಗಿತ್ತು. ಸಾಕಷ್ಟು ಸವಾಲುಗಳನ್ನು ಮೆಟ್ಟಿ ನಿಂತು ಸೇನಾಧಿಕಾರಿಗಳ ಪ್ರೋತ್ಸಾಹ ಪಡೆದ ಯುವಕ ಈಗ ಸರಕಾರದ ಕೆಎಎಸ್ ಎಕ್ಸಾಂ ಬರೆದು ಅಧಿಕಾರಿಯಾಗಿದ್ದಾನೆ.
ಆಲಿಗಢ ಮುಸ್ಲಿಂ ವಿವಿಯಲ್ಲಿ ಪದವಿ ಪಡೆದಿದ್ದ ಅಬ್ದುಲ್ಲಾ ಕೆಎಎಸ್ ಪಾಸ್ ಮಾಡಿದ್ದು ಜಮ್ಮು ಕಾಶ್ಮೀರದಲ್ಲಿ ಇತರೇ ಮಂದಿಗೆ ದೊಡ್ಡ ಪ್ರೇರಣೆಯಾಗಲಿದೆ ಎನ್ನಲಾಗುತ್ತಿದೆ. ಈತನ ಸಾಧನೆಯಿಂದ ಉತ್ತೇಜಿತರಾದ ಭಾರತೀಯ ಸೇನೆ ಕಾರ್ಯಕ್ರಮ ಹಮ್ಮಿಕೊಂಡು ಅಬ್ದುಲ್ಲಾ ಅವರನ್ನು ವಿಶೇಷವಾಗಿ ಸನ್ಮಾನಿಸಿ, ಕಾಶ್ಮೀರದ ಯುವಜನರು ಸರಕಾರಿ ಅಧಿಕಾರಿಯಾಗಲು ಮುಂದೆ ಬರುವಂತೆ ಕರೆ ನೀಡಿದೆ.
ಇದೆ ವೇಳೆ ಮಾತನಾಡಿದ ಅಬ್ದುಲ್ಲಾ, ಬಾಲ್ಯದಿಂದಲೂ ತುಂಬ ಸವಾಲುಗಳನ್ನು ಮೆಟ್ಟಿಕೊಂಡು ಮುಂದೆ ಬಂದಿದ್ದೇನೆ. ಕಷ್ಟಗಳು ಎದುರಾದರೂ, ಅಧಿಕಾರಿ ಆಗಬೇಕೆಂಬ ಗುರಿಯನ್ನು ಬಿಟ್ಟು ಕೊಡಲಿಲ್ಲ. ಉಗ್ರವಾದದಿಂದ ಮುಕ್ತವಾದ ಪ್ರದೇಶಗಳಲ್ಲಿ ಯುವ ಜನಾಂಗಕ್ಕೆ ಸಾಕಷ್ಟು ಅವಕಾಶಗಳಿದ್ದು ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ.
ಕಠಿಣ ಪರಿಶ್ರಮ ಹೇಗೆ ವ್ಯಕ್ತಿಯ ಜೀವನವನ್ನು ಬದಲಿಸಬಹುದು ಎಂಬುದಕ್ಕೆ ಘಾಜಿ ಅಬ್ದುಲ್ಲಾ ಉತ್ತಮ ಉದಾಹರಣೆ ಎಂದು ಸೇನಾ ವಕ್ತಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm